ಸಿಡಿ ಪ್ರಕರಣ: ಹೈಕೋರ್ಟ್​ ಮೆಟ್ಟಿಲೇರಿದ ಸಂತ್ರಸ್ತೆ

Newsnap Team
1 Min Read
shock for Congress: High Court order to cancel ACB - Lokyukta gets power again

ಮಾಜಿ ಸಚಿವ ರಮೇಶ್ ಜಾರಕಿಹೊಳಿ ಬ್ಲಾಕ್ ಮೇಲ್ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್​​ .ಸಂತ್ರಸ್ತ ಯುವತಿ ಈಗ ಹೊಸ ಅರ್ಜಿ ಸಮೇತ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.

ಸದಾಶಿವನಗರ ಪೊಲೀಸ್ ಠಾಣೆಯ ಕ್ರೈಂ ನಂ. 21 /2021 ಕುರಿತು ಸಂತ್ರಸ್ತೆ ಹೈಕೋರ್ಟ್​​ಗೆ ಅರ್ಜಿ ಸಲ್ಲಿಕೆ ಮಾಡಿದ್ದಾರೆ.‌

ಅರ್ಜಿಯಲ್ಲಿ ಸಚಿವ ರಮೇಶ್​ ಜಾರಕಿಹೊಳಿ‌ ಕೊಟ್ಟ ದೂರನ್ನು ಚಾಲೆಂಜ್ ಮಾಡಿದ್ದಾರೆ ಎಂಬ ಮಾಹಿತಿ ಲಭಿಸಿದೆ.

ಸುಪ್ರೀಂ ಕೋರ್ಟ್ ವಕೀಲ ಸಂಕೇತ ಏಣಗಿ ಮೂಲಕ ಯುವತಿ ಅರ್ಜಿ ಸಲ್ಲಿಕೆ ಮಾಡಿದ್ದಾರೆ.ಅರ್ಜಿಯನ್ನು ವಿಚಾರಣೆ ಮಾಡಿದ ಹೈಕೋರ್ಟ್ ಏಕಸದಸ್ಯ ಪೀಠ, ವಿಶೇಷ ತನಿಖಾದಳ (ಎಸ್​​ಐಟಿ) ಹಾಗೂ ರಮೇಶ್​ ಜಾರಕಿಹೊಳಿ ಅವರಿಗೆ ತುರ್ತು ನೋಟಿಸ್​ ಜಾರಿ ಮಾಡಿದೆ. ಜೂನ್ 21ರ ಒಳಗೆ ಉತ್ತರಿಸಲು ಸೂಚನೆ ನೀಡಿ, ಅರ್ಜಿ ವಿಚಾರಣೆಯನ್ನು ಜೂ. 21ಕ್ಕೆ ಮುಂದೂಡಿದೆ.

Share This Article
Leave a comment