Categories: Main News

ಹೈದರಾಬಾದ್‌ನಲ್ಲಿ ಸಿ.ಡಿ. ಸಂತ್ರಸ್ತ ಯುವತಿ ಸೇರಿ ಮೂವರು ವಶಕ್ಕೆ?

ಅಶ್ಲೀಲ ಸಿ.ಡಿ. ಪ್ರಕರಣದ ಕೇಂದ್ರಬಿಂದು ಯುವತಿಯನ್ನು ಎಸ್‌ಐಟಿ ತಂಡ ಹೈದರಾಬಾದ್‌ನಲ್ಲಿ ಭಾನುವಾರ ವಶಕ್ಕೆ ಪಡೆದುಕೊಂಡಿದೆ ಎಂದು ಮೂಲಗಳು ಹೇಳಿವೆ.

ಕೆಲವು ದಿನಗಳಿಂದ ಹೈದರಾಬಾದ್‌ನ ಪರಿಚಯಸ್ಥರ ಮನೆಯಲ್ಲಿ ವಾಸವಿದ್ದ ಆ ಯುವತಿ ಶನಿವಾರ ವೀಡಿಯೋ ಬಿಡುಗಡೆ ಮಾಡಿದ್ದಳು. ಈ ಬೆನ್ನಲ್ಲೇ ತನಿಖೆ ಚುರುಕುಗೊಳಿಸಿದ ಎಸ್‌ಐಟಿ ಅಧಿಕಾರಿಗಳು ಭಾನುವಾರ ಮಹಿಳಾ ಇನ್‌ಸ್ಪೆಕ್ಟರ್‌ ನೇತೃತ್ವದಲ್ಲಿ ಆಕೆಯನ್ನು ವಶಕ್ಕೆ ಪಡೆದಿದ್ದಾರೆ. ಮತ್ತೊಂದು ತಂಡ ಪ್ರಕರಣದ ಕಿಂಗ್‌ಪಿನ್‌ ಪತ್ರಕರ್ತ ಸಹಿತ ಇಬ್ಬರನ್ನು ವಶಕ್ಕೆ ಪಡೆದಿದೆ. ಭಾನುವಾರ ರಾತ್ರಿಯೇ ಮಡಿವಾಳದ ಎಫ್ಎಸ್‌ಎಲ್‌ ಕೇಂದ್ರಕ್ಕೆ ಇವರನ್ನು ಕರೆತಂದು, ವಿಚಾರಣೆ ಕೊಠಡಿಯಲ್ಲಿ ಇರಿಸಲಾಗಿದೆ.

ಉತ್ತರ ಕರ್ನಾಟಕ ಮೂಲದ ಸಂತ್ರಸ್ತೆ ಬೆಂಗಳೂರಿನಲ್ಲಿ ಎಂಜಿನಿಯರಿಂಗ್‌ ವ್ಯಾಸಂಗ ಮಾಡುತ್ತಿದ್ದಳು. ಸಂತ್ರಸ್ತೆಗೆ ಐದು ವರ್ಷಗಳಿಂದ ಯುವಕನೊಬ್ಬನ ಪರಿಚಯವಿದೆ. ಪ್ರೀತಿಸಿ ಮೂರು ತಿಂಗಳ ಹಿಂದೆ ಮದುವೆ ಮಾಡಿಕೊಳ್ಳಲು ನಿರ್ಧರಿಸಿದ್ದರು. ಯುವಕ ತನ್ನ ಮನೆಯಲ್ಲೂ ಪ್ರೀತಿಯ ವಿಚಾರ ತಿಳಿಸಿ, ವಿವಾಹಕ್ಕೆ ಮನೆಯವರನ್ನು ಒಪ್ಪಿಸಿದ್ದ. ಸಂತ್ರಸ್ತೆಯನ್ನು ಮನೆಗೆ ಕರೆದೊಯ್ದು ಪರಿಚಯಿಸಿದ್ದ. ಹೀಗಾಗಿ ಆಕೆ ಯುವಕನ ಮನೆಯವರ ಜತೆಗೂ ಸಂಪರ್ಕದಲ್ಲಿದ್ದಳು. ಈಗ ಆಕೆಯ ಪ್ರಿಯಕರನನ್ನು ವಶಕ್ಕೆ ಪಡೆಯಲಾಗಿದೆ.

ಮೂವರು ವಶಕ್ಕೆ?
ತಲೆಮರೆಸಿಕೊಂಡಿದ್ದ ಪ್ರಕರಣದ ಕಿಂಗ್‌ಪಿನ್‌ ಸಹಿತ ಮೂವರನ್ನು ಎಸ್‌ಐಟಿ ಹೈದರಾಬಾದ್ ನಲ್ಲಿ ವಶಕ್ಕೆ ಪಡೆದಿದೆ. ಈ ಪೈಕಿ ಒಬ್ಬ ಮಹಿಳೆ ಕೂಡ ಇದ್ದಾಳೆ ಎಂದು ಮೂಲಗಳು ತಿಳಿಸಿವೆ. ಈಕೆ ಸಂತ್ರಸ್ತೆಯ ಅತ್ಯಾಪ್ತ ಗೆಳತಿಯಾಗಿದ್ದು, ಕೃತ್ಯಕ್ಕೆ ಸಹಕಾರ ನೀಡಿದ್ದಾಳೆ ಎನ್ನಲಾಗಿದೆ. ಈ ಮೂವರನ್ನು ಬೆಂಗಳೂರಿಗೆ ಕರೆತರಲಾಗಿದೆ, ರವಿವಾರ ರಾತ್ರಿ ಮಡಿವಾಳದ ಎಫ್ಎಸ್‌ಎಲ್‌ ಕೇಂದ್ರದಲ್ಲಿ ಇರಿಸಲಾಗಿದೆ. ಮಹಿಳೆಯ ರಕ್ಷಣೆಗೆ ಪಿಎಸ್‌ಐ ಸೇರಿ ಮೂವರು ಮಹಿಳಾ ಸಿಬಂದಿ ನೇಮಿಸಲಾಗಿದೆ. ಒಂದು ಕೆಎಸ್‌ಆರ್‌ಪಿ ತುಕಡಿಯನ್ನು ನಿಯೋಜಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಸಂತ್ರಸ್ತೆಯ ಪ್ರಿಯಕರ, ಚಿಕ್ಕಮಗಳೂರಿನ ವ್ಯಕ್ತಿ ಸಹಿತ ಮೂವರನ್ನು ಎಸ್ಐಟಿ ವಶಕ್ಕೆ ಪಡೆದುಕೊಂಡು ರವಿವಾರ ಮತ್ತೂಮ್ಮೆ ವಿಚಾರಣೆ ನಡೆಸಲಾಗಿದೆ.

Team Newsnap
Leave a Comment
Share
Published by
Team Newsnap

Recent Posts

ಮೆಜೆಸ್ಟಿಕ್‌ ಬಸ್‌ ನಿಲ್ದಾಣದಲ್ಲಿ ಬಿಎಂಟಿಸಿ ಬಸ್‌ಗೆ ವಿಶೇಷ ಚೇತನ ಬಲಿ

ಬೆಂಗಳೂರು: ಮೆಜೆಸ್ಟಿಕ್‌ ಬಸ್‌ ನಿಲ್ದಾಣದಲ್ಲಿ ಬಿಎಂಟಿಸಿ ಬಸ್‌ ಅಪಘಾತಕ್ಕೆ ವಿಶೇಷ ಚೇತನ ಬಲಿಯಾಗಿರುವ ಘಟನೆ ನಡೆದಿದೆ. ಬಿಎಂಟಿಸಿ ಬಸ್ ಯಶವಂತಪುರದಿಂದ… Read More

September 18, 2024

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಸೆಪ್ಟೆಂಬರ್ 18 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 68,640 ರೂಪಾಯಿ ದಾಖಲಾಗಿದೆ. 24… Read More

September 18, 2024

ಸೆ.19ರಿಂದ ವಿಎಓ/ಜಿಟಿಟಿಸಿ ಪರೀಕ್ಷೆಗೆ ಹೊಸದಾಗಿ ಅರ್ಜಿ ಸಲ್ಲಿಸಲು ಅವಕಾಶ

ಬೆಂಗಳೂರು: ಸೆ.19ರಿಂದ ಮ ಆಡಳಿತಾಧಿಕಾರಿ ಮತ್ತು ಜಿಟಿಟಿಸಿಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮತ್ತೊಮ್ಮೆ ಅವಕಾಶ ನೀಡಲಾಗಿದೆ ಎಂದು ಕೆಇಎ ಕಾರ್ಯನಿರ್ವಾಹಕ… Read More

September 17, 2024

ಅತಿಶಿ ಮರ್ಲೆನಾ ದೆಹಲಿಯ ನೂತನ ಮುಖ್ಯಮಂತ್ರಿಯಾಗಿ ಆಯ್ಕೆ

ನವದೆಹಲಿ: ಇಂದು ದೆಹಲಿಯ ನೂತನ ಮುಖ್ಯಮಂತ್ರಿಯಾಗಿ ಅತಿಶಿ ಮರ್ಲೆನಾ ಸಿಂಗ್ ಆಯ್ಕೆಯಾಗಿದ್ದಾರೆ. ಅರವಿಂದ್ ಕೇಜ್ರಿವಾಲ್ ಭ್ರಷ್ಟಾಚಾರ ಆರೋಪಗಳ ಹಿನ್ನೆಲೆಯಲ್ಲಿ ರಾಜೀನಾಮೆ… Read More

September 17, 2024

ಮುಂದಿನ ತಿಂಗಳಿಂದ ರಾಜ್ಯದ ಅಂಗನವಾಡಿ ಮಕ್ಕಳಿಗೆ ಗಟ್ಟಿಬೆಲ್ಲ ವಿತರಣೆ

ಬೆಂಗಳೂರು : ಅಂಗನವಾಡಿ ಕೇಂದ್ರಗಳಲ್ಲಿ ಆರ್ಗ್ಯಾನಿಕ್ ಬೆಲ್ಲದ ಬದಲಿಗೆ ಗಟ್ಟಿ ಬೆಲ್ಲವನ್ನೇ ನೀಡಲಾಗುವುದು ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ.… Read More

September 17, 2024

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಸಿದ್ಧಾರ್ಥ್ ಮತ್ತು ಅದಿತಿ ರಾವ್ ಹೈದರಿ

ಇಂದು 400 ವರ್ಷಗಳ ಹಿಂದಿನ ಪುರಾತನ ದೇವಸ್ಥಾನದಲ್ಲಿ ತಮಿಳಿನ ಸ್ಟಾರ್ ನಟ ಸಿದ್ಧಾರ್ಥ್ ಮತ್ತು ಅದಿತಿ ರಾವ್ ಹೈದರಿ ದಾಂಪತ್ಯ… Read More

September 16, 2024