ಮಾಜಿ ಸಚಿವ ರಮೇಶ್ ಜಾರಕಿಹೊಳಿ ರಾಸಲೀಲೆ ಪ್ರಕರಣಕ್ಕೆ ಒಂದು ತಾರ್ಕಿಕ ತಿರುವು ಸಿಗಲಿದೆ.
ಸಿಡಿ ಲೇಡಿ ತಮ್ಮ ವಕೀಲರ ಮೂಲಕ ಇಂದು ಮಧ್ಯಾಹ್ನ 2 .30 ವೇಳೆಗೆ ಮಾಜಿ ಮಂತ್ರಿ ರಮೇಶ್ ವಿರುದ್ಧವೇ ದೂರು ನೀಡುವುದಾಗಿ ಹೇಳಿದ್ದಾಳೆ
ರಾಜ್ಯದ ಲ್ಲಿ ಕಳೆದ 24 ದಿನಗಳಿಂದ ತೀವ್ರ ಸಂಚಲನ ಮೂಡಿಸಿರುವ ಮಾಜಿ ಸಚಿವ ರಮೇಶ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸ್ಪೋಟಕ ತಿರುವು ಸಿಕ್ಕಿದೆ.
ರಮೇಶ ಜಾರಕಿಹೊಳಿ ವಿರುದ್ಧ ಇಂದೇ ಪ್ರಕರಣ ದಾಖಲಿಸಲು ಸಿಡಿಯಲ್ಲಿರುವ ಯುವತಿ ನಿರ್ಧರಿಸಿದ್ದಾಳೆ. ವಕೀಲ ಜಗದೀಶ್ ಎನ್ನುವವರ ಮೂಲಕ ಮಧ್ಯಾಹ್ನ 2 ಗಂಟೆಗೆ ದೂರು ದಾಖಲಾಗಲಿದೆ ಎಂದು ಹೇಳಿದ್ದಾಳೆ.
ಯುವತಿಯ ಹಸ್ತಾಕ್ಷರದಲ್ಲೇ ದೂರು ದಾಖಲಿಸಲಾಗುವುದು ಎಂದು ಅವಳ ಪರ ವಕೀಲ ಜಗದೀಶ ಸುದ್ದಿಗಾರರಿಗೆ ತಿಳಿಸಿದ್ದಾರೆ
ಒಬ್ಬ ಪ್ರಭಾವಿ ರಾಜಕಾರಣಿ ವಿರುದ್ಧ ದೂರು ದಾಖಲಿಸುವುದು ಸುಲಭವಲ್ಲ. ಪೊಲೀಸರು ಹೇಗೆ ತೆಗೆದುಕೊಳ್ಳುತ್ತಾರೆ ಎನ್ನುವುದು ಎಲ್ಲರಿಗೂ ಗೊತ್ತಿದೆ. ಹಾಗಾಗಿ ಈ ಮೊದಲು ದೂರು ದಾಖಲಿಸಲು ಸಾಧ್ಯವಾಗಿರಲಿಲ್ಲ ಎಂದು ಜಗದೀಶ್ ತಿಳಿಸಿದ್ದಾರೆ.
ಯುವತಿಯ ದೂರು ನೀಡುವ ನಿರ್ಧಾರ ದಿಂದ ರಮೇಶ ಜಾರಕಿಹೊಳಿ ಸಂಕಷ್ಟಕ್ಕೆ ಸಿಲುಕುವ ಸಾಧ್ಯತೆ ಹೆಚ್ಚಿದೆ. ಅವರ ಮುಂದಿನ ಹೆಜ್ಜೆ ಕುತೂಹಲ ಮೂಡಿಸಿದೆ.
ಅಲ್ಲದೇ ಯುವತಿ ದೂರು ಸ್ವೀಕರಿಸಿದ ನಂತರ ಪೋಲಿಸರ ಹೆಜ್ಜೆಗಳೂ ಕೂಡ ಯಾವ ದಿಕ್ಕಿನಲ್ಲಿ ಸಾಗುತ್ತವೆ ಎನ್ನುವುದು ಗಮನಾರ್ಹ ಅಂಶವಾಗಿದೆ.
- ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ
- SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ
- ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ
- ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ
- ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ