ಸಿಡಿ ಲೇಡಿ ಶನಿವಾರ ಸಂಜೆ ಮತ್ತೊಂದು ವಿಡಿಯೋ ಬಿಡುಗಡೆ ಮಾಡಿದ್ದಾಳೆ. ಇದು ಆಕೆಯ 5 ನೇ ವಿಡಿಯೋ ಆಗಿದೆ.
ನಮ್ಮ ತಂದೆ- ತಾಯಿ ಕರೆದು ವಿಚಾರಣೆ ಮಾಡಿ ಇಡೀ ಪ್ರಕರಣವನ್ನು ದಾರಿ ತಪ್ಪಿಸುತ್ತಿರುವ ಎಸ್ಐಟಿ ವಿರುದ್ಧ ಯುವತಿ ವಿಡಿಯೋದಲ್ಲಿ ಕಿಡಿಕಾರಿದ್ದಾಳೆ.
ಈ ಪ್ರಕರಣದಲ್ಲಿ ಅನ್ಯಾಯ ಆಗಿರುವುದು ನನಗೆ. ಹೀಗಿರುವಾಗ ನಮ್ಮ ಅಪ್ಪ- ಅಮ್ಮನ ಕರೆದುಕೊಂಡು ಅವರಿಂದ ಇಲ್ಲಸಲ್ಲದ ಹೇಳಿಕೆ ಕೊಡಿಸುತ್ತಿದ್ದಾರೆ. ಅವರ ಮೇಲೆ ಪ್ರಭಾವ ಬೀರಿ ಬ್ಲ್ಯಾಕ್ ಮೇಲ್ ಮಾಡಿ ತಮಗೆ ಬೇಕಾದಂತೆ ಹೇಳಿಕೆ ಪಡೆಯುತ್ತಿದ್ದಾರೆ ಎಂದು ಹೇಳಿದ್ದಾಳೆ.
ನಮ್ಮ ಅಪ್ಪ- ಸಮ್ಮನಿಗೆ ಏನೂ ಗೊತ್ತಿಲ್ಲ. ಹೀಗಿರುವಾಗ ಅವರಿಂದ ಏಕೆ ಹೇಳಿಕೆ ಪಡೆಯುತ್ತಿದ್ದಾರೆ ಅಂತ ಯುವತಿ ಪ್ರಶ್ನೆ ಮಾಡಿದ್ದಾಳೆ.
ನಮ್ಮ ಮನೆಯವರ ಬದಲು ರಮೇಶ್ ಜಾರಕಿಹೊಳಿ ಮನೆಯವರನ್ನು ಕರೆತಂದು ವಿಚಾರಣೆ ಮಾಡಲಿ ಎಂದು ಸಿಡಿ ಲೇಡಿ ಸವಾಲು ಹಾಕಿದ್ದಾಳೆ.
ನಾನು ಬಂದು ಹೇಳಿಕೆ ಕೊಟ್ಟರೆ ಎಸ್ಐಟಿನವರು ನನ್ನಿಂದ ಬೇರೆ ರೀತಿಯ ಹೇಳಿಕೆ ಪಡೆಯುವ ಸಾಧ್ಯತೆ ಇದೆ ಎಂದಿದ್ದಾಳೆ.
ನನಗೆ ತುಂಬಾ ಭಯವಿದೆ.ಈ ಕಾರಣದಿಂದ ನಾನು ನ್ಯಾಯಾಧೀಶರ ಮುಂದೆ ಹೇಳಿಕೆ ಕೊಡುತ್ತೇನೆ ಎಂದು ಯುವತಿ ಹೇಳಿದ್ದಾಳೆ. ಈ ಪ್ರಕರಣ ಮತ್ತಷ್ಟು ಟ್ವಿಸ್ಟ್ ಗಳನ್ನು ಪಡೆಯುತ್ತಿದೆ ಎಂದು ಹೇಳಬಹುದು.
2015ರಲ್ಲಿ ಶಿಲ್ಪಾ ಎಂಬುವವರ ಜೊತೆ ಮದುವೆಯಾಗಿದ್ದ ನಟ ಚಂದು ತ್ರಿನಯನಿ ಸೀರಿಯಲ್ನಲ್ಲಿ ಅಭಿನಯಿಸಿದ್ದ ತೆಲುಗು ನಟ ಚಂದು ನಟಿ ಪವಿತ್ರ… Read More
ಬೆಂಗಳೂರು : ಶಿಕ್ಷಣ ಸಚಿವ ಮಧು ಬಂಗಾರಪ್ಪ , ಮುಂದಿನ ವರ್ಷದಿಂದ SSLC ವಿದ್ಯಾರ್ಥಿಗಳಿಗೆ ಗ್ರೇಸ್ ಅಂಕಗಳನ್ನು ನೀಡಲಾಗುವುದಿಲ್ಲ ಎಂದು… Read More
ಬೆಂಗಳೂರು : ಆನೇಕಲ್ ತಾಲೂಕಿನ ಚಂದಾಪುರ ಸಮೀಪದ ಇಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬಳು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಅರಸೀಕೆರೆ ಮೂಲದ ಕರಡಿಹಳ್ಳಿ… Read More
ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಮನವಿ ಮೇರೆಗೆ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಸೌಲಭ್ಯವನ್ನು ಬಜೆಟ್ನಲ್ಲಿ ಘೋಷಣೆ… Read More
ಬೆಂಗಳೂರು : ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್ ಡಿ ರೇವಣ್ಣಗೆ ಮಧ್ಯಂತರ ಜಾಮೀನು ಮಂಜೂರಾಗಿದೆ. ಈ ಪ್ರಕರಣದಲ್ಲಿ… Read More
ಹಾಸನ : ಕೆರೆಯಲ್ಲಿ ಮೀನು ಹಿಡಿಯಲು ಹೋಗಿದ್ದ ನಾಲ್ಕು ಮಕ್ಕಳು ಜಲ ಸಮಾಧಿ ಆದ ಘಟನೆ ಆಲೂರು ತಾಲೂಕಿನ, ತಿಮ್ಮನಹಳ್ಳಿ… Read More
This website uses cookies.
Leave a Comment