February 23, 2026

Newsnap Kannada

The World at your finger tips!

cd

ಸಿಡಿ ಸಂತ್ರಸ್ತೆ ವಿಡಿಯೋದಲ್ಲಿ ಪ್ರತ್ಯಕ್ಷ : ಸಾಹುಕಾರ್ ರಮೇಶ್ ರಿಂದಲೇ ಸಿಡಿ ಬಿಡುಗಡೆ

Spread the love

ಮಾಜಿ ಸಚಿವ ರಮೇಶ್ ಜಾರಕಿಹೊಳಿಯೇ ಸಿಡಿ ಬಿಡುಗಡೆ ಮಾಡಿದ್ದಾರೆ. ನನ್ನ ಮಾನ ಹರಾಜು ಹಾಕಿದ್ದಾರೆ.‌ ನನಗೆ ಹಾಗೂ ನನ್ನ ತಂದೆ ತಾಯಿಗೆ ರಕ್ಷಣೆ ನೀಡುವಂತೆ ಗೃಹ ಸಚಿವ ಬೊಮ್ಮಾಯಿ ಅವರಲ್ಲಿ ಮನವಿ.

ರಾಸಲೀಲೆ ಸಿಡಿ ಸಂತ್ರಸ್ತ ಯುವತಿಯು ವಿಡಿಯೋದಲ್ಲಿ ಇದೇ ಮೊದಲ ಬಾರಿಗೆ ಹೇಳಿಕೆ ನೀಡಿದ್ದಾಳೆ.

ನನಗೆ ಯಾವುದೇ ರಾಜಕೀಯ ನಾಯಕರ ಸಂಪರ್ಕ ಇಲ್ಲ. ರಮೇಶ್ ಜಾರಕಿಹೊಳಿಯೇ ಸಿಡಿ ಬಿಡುಗಡೆ ಮಾಡಿದ್ದಾರೆ. ಕೆಲಸ ಕೊಡಿಸುವುದಾಗಿ ಹೇಳಿ ನನ್ನ ಮಾನ ಹರಾಜು ಹಾಕಿದ್ದಾರೆ ಎಂದು ಹೇಳಿದ್ದಾಳೆ.

ಖಾಸಗಿ ಸುದ್ದಿ ವಾಹಿನಿಗಳು ಸುದ್ದಿಗಳು ಈಕೆ ನೀಡಿರುವ ವಿಡಿಯೋ ಹೇಳಿಕೆಗಳನ್ನು ಪ್ರಸಾರ ಮಾಡಿ
ಈ ಸಿಡಿಯಿಂದಾಗಿ ನನ್ನ ಮಾನ, ಮರ್ಯಾದೆ ಹರಾಜಾಗಿದೆ. ನನ್ನ ತಂದೆ -ತಾಯಿ 2 ಬಾರಿ ಆತ್ಮಹತ್ಯೆಗೆ ಪ್ರಯತ್ನಿಸಿದ್ದಾರೆ. ನಾನು ಕೂಡ ಆತ್ಮಹತ್ಯೆಗೆ ಯತ್ನಿಸಿದ್ದೇನೆ. ರಮೇಶ ಜಾರಕಿಹೊಳಿ ಕೆಲಸ ಕೊಡಿಸುವುದಾಗಿ ನನಗೆ ನಂಬಿಸಿ, ಮೋಸ ಮಾಡಿದ್ದಾರೆ. ಅವರೇ ಸಿಡಿ ಬಿಡುಗಡೆ ಮಾಡಿದ್ದಾರೆ. ಇದು ನಕಲಿ ವಿಡೀಯೋ ಅಲ್ಲ. ಆದರೆ ಅದನ್ನು ಬಹಿರಂಗಪಡಿಸಿ ನನ್ನ ಮಾನ ಹರಾಜು ಹಾಕಿದ್ದಾರೆ ಎಂದು ಯುವತಿ ಹೇಳಿಕೆ ನೀಡಿದ್ದಾಳೆ ಎಂದು ವರದಿಯಾಗುತ್ತಿದೆ.

error: Content is protected !!