ತುಮಕೂರು: ಸಹಕಾರಿ ಸಚಿವ ಕೆ.ಎನ್ ರಾಜಣ್ಣ ಅವರ ಕಣ್ಣಿಗೆ ಪಟಾಕಿ ಕಿಡಿ ಹಾರಿ ಗಾಯಗೊಂಡ ಘಟನೆ ಪಟ್ಟದ ಹುಚ್ಚಮಾಸ್ತಿಗೌಡ ವೃತ್ತದಲ್ಲಿ ಭಾನುವಾರ ನಡೆದಿದೆ.
ಹಾಸನ ಜಿಲ್ಲಾ ಉಸ್ತುವಾರಿ ಸಚಿವರಾಗಿರುವ ಕೆ.ಎನ್ ರಾಜಣ್ಣ ಶಕ್ತಿ ಯೋಜನೆಗೆ ಚಾಲನೆ ನೀಡಲು ತುಮಕೂರಿನಿಂದ ಕುಣಿಗಲ್ ಮಾರ್ಗವಾಗಿ ಹಾಸನಕ್ಕೆ ತೆರಳುತ್ತಿದ್ದರು.
ವಿಷಯ ತಿಳಿದ ಕೆಎನ್ ಆರ್ ಅಭಿಮಾನಿಗಳು ಹಿತೈಷಿಗಳು ಕಾಂಗ್ರೆಸ್ ಕಾರ್ಯಕರ್ತರು ಕುಣಿಗಲ್ ಪಟ್ಟಣದ ಹುಚ್ಚಮಾಸ್ತಿಗೌಡ ಸರ್ಕಲ್ ಬಳಿ ಕಾರನ್ನು ತಡೆದು ಹೂಮಾಲೆ ಹಾಕಿ ಅಭಿನಂದಿಸಿದರು.

ಬಳಿಕ ಸಮೀಪದಲ್ಲೇ ಪಟಾಕಿ ಸಿಡಿಸಿದರು. ತಕ್ಷಣ ಸಚಿವರು ತಮ್ಮ ಕನ್ನಡಕವನ್ನೊಮ್ಮೆ ತೆಗೆದರು. ಇದೇ ವೇಳೆ ಪಟಾಕಿಯ ಕಿಡಿ ನೇರವಾಗಿ ಬಲಗಣ್ಣಿನತ್ತ ಹಾರಿದೆ.ರಾಜ್ಯ ಸರ್ಕಾರಿ ನೌಕರರಿಗೆ ಹಳೆಯ ಪಿಂಚಣಿ ಯೋಜನೆ ಪುನರ್ ಜಾರಿ!
ಕೂಡಲೇ ಸಚಿವರನ್ನು ಎಂ.ಎಂ ಖಾಸಗಿ ಆಸ್ಪತ್ರೆಗೆ ಕರೆದೊಯ್ದು ನೇತ್ರ ತಜ್ಞ ಡಾ.ರವಿಕುಮಾರ್ ಅವರಿಂದ ಚಿಕಿತ್ಸೆ ಕೊಡಿಸಲಾಯಿತು, ಬಳಿಕ ಅವರು ಹಾಸನಕ್ಕೆ ತೆರಳಿದರು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ
- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು