ಮನೆ , ಅಂಗಡಿ ಮಾಲೀಕರು ಮತ್ತು ಬಾಡಿಗೆದಾರರಿಗೆ ಸಹಾಯವಾಗುವ ಹೊಸ ಕಾಯ್ದೆಗೆ ಕೇಂದ್ರ ಸಂಪುಟ ಒಪ್ಪಿಗೆ ನೀಡಿದೆ.
ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ‘ಮಾದರಿ ಬಾಡಿಗೆ ಕಾಯ್ದೆ’ಗೆ ಅನುಮೋದನೆ ನೀಡಲಾಗಿದೆ.
ಮನೆಗಳನ್ನು ಬಾಡಿಗೆ ನೀಡುವ ವ್ಯವಸ್ಥೆಗೆ ಉದ್ಯಮ ಸ್ವರೂಪ ನೀಡಲಾಗಿದೆ. ಈ ಉದ್ಯಮದಲ್ಲಿ ಪಾಲ್ಗೊಳ್ಳುವಂತೆ ಖಾಸಗಿ ವಲಯಕ್ಕೆ ಉತ್ತೇಜನ ನೀಡುವ ಉದ್ದೇಶವನ್ನು ಈ ಕಾಯ್ದೆ ಹೊಂದಿದೆ. ವಸತಿ ಕ್ಷೇತ್ರ ಎದುರಿಸುತ್ತಿರುವ ಕೊರತೆಯನ್ನು ನೀಗಿಸಲು ಸಾಧ್ಯವಾಗಲಿದೆ.
ಕಾಯ್ದೆಯ ಸ್ವರೂಪ ಹೇಗಿದೆ?
- ಮಾಲೀಕರು ಮತ್ತು ಬಾಡಿಗೆದಾರರಿಗೆ ತ್ವರಿತವಾಗಿ ನ್ಯಾಯ ಒದಗಿಸಲು ಬಾಡಿಗೆ ಪ್ರಾಧಿಕಾರ ರಚನೆ ಮಾಡಬೇಕು.
- ಮಾಲೀಕರು ಭದ್ರತಾ ಠೇವಣಿಯಾಗಿ ಬಾಡಿಗೆದಾರರಿಂದ ಕೇವಲ 2 ತಿಂಗಳ ಬಾಡಿಗೆಯನ್ನು ಮಾತ್ರ ಪಡೆಯಬೇಕು.
- ವಾಣಿಜ್ಯ ಕಟ್ಟಡಗಳಿಗೆ ಭದ್ರತಾ ಠೇವಣಿಯಾಗಿ 6 ತಿಂಗಳ ಹಣವನ್ನು ಮಾತ್ರ ಪಡೆಯಬೇಕು.
- ಬಾಡಿಗೆ ವಿಚಾರದಲ್ಲಿ ಸಮಸ್ಯೆಯಾದಲ್ಲಿ ಜಿಲ್ಲಾ ಬಾಡಿಗೆ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಬಹುದು.
- ಒಪ್ಪಂದ ಮುಗಿದ ಬಳಿಕವೂ ಮನೆಯನ್ನು ಖಾಲಿ ಮಾಡದೇ ಇದ್ದಲ್ಲಿ ಮಾಲೀಕ ಮುಂದಿನ 2 ತಿಂಗಳ ಅವಧಿಗೆ ಬಾಡಿಗೆಯನ್ನು ದ್ವಿಗುಣ ಮಾಡಬಹುದು.
- 2 ತಿಂಗಳ ಬಳಿಕವೂ ಮನೆ ಖಾಲಿ ಮಾಡದೇ ಇದ್ದರೆ ಬಾಡಿಗೆಯನ್ನು 4 ಪಟ್ಟು ಹೆಚ್ಚಿಸಬಹುದು.
- ವಿವಾದದ ಸಂದರ್ಭದಲ್ಲಿ ಮಾಲೀಕರು ವಿದ್ಯುತ್ ಮತ್ತು ನೀರು ಸರಬರಾಜನ್ನು ಕಡಿತಗೊಳಿಸುವಂತಿಲ್ಲ.
- ಒಪ್ಪಂದದ ಅವಧಿ ಇರುವವರೆಗೆ ಬಾಡಿಗೆ ದರವನ್ನು ಇದ್ದಕ್ಕಿದ್ದಂತೆ ಹೆಚ್ಚಿಸಲು ಸಾಧ್ಯವಿಲ್ಲ. ಬಾಡಿಗೆ ಪರಿಷ್ಕರಿಸುವ 3 ತಿಂಗಳ ಮೊದಲು ಮಾಲೀಕ ನೋಟಿಸ್ ನೀಡಬೇಕಾಗುತ್ತದೆ.
- ಕಟ್ಟಡಕ್ಕೆ ಹಾನಿಯಾಗಿದ್ದರೆ ರಿಪೇರಿಗೆ ಬಾಡಿಗೆದಾರನೇ ಹಣವನ್ನು ನೀಡಬೇಕು.
- ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ
- SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ
- ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ
- ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ
- ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ