ಇದನ್ನು ಓದಿ –ರಾಜ್ಯ ಸಭಾ ಚುನಾವಣೆ: ಜಗ್ಗೇಶ್ – ಲೇಹರ್ ನಾಮಪತ್ರ ಸಲ್ಲಿಕೆ
ಈ ಕುರಿತು ಹೇಳಿಕೆ ನೀಡಿರುವ ಚಲುವರಾಯ ಸ್ವಾಮಿ ಅವರು, ಪಠ್ಯ ಪುಸ್ತಕ ಪರಿಷ್ಕರಣಾ ಸಮಿತಿ ಅಧ್ಯಕ್ಷ ರೋಹಿತ್ ಚಕ್ರತೀರ್ಥ, ಕುವೆಂಪು ಅವರ ಸಾಹಿತ್ಯವನ್ನು ಅಪಮಾನಿಸಿದ್ದಾರೆ. ಜತೆಗೆ ಶಾಲಾ ಪಠ್ಯದ ವಿಚಾರದಲ್ಲಿ ಅನಗತ್ಯ ಗೊಂದಲ ಸೃಷ್ಟಿಸಿ ಸಮಾಜದ ಅಶಾಂತಿಗೆ ಕಾರಣವಾಗಿದ್ದಾರೆ. ಕೂಡಲೇ ಸಮಿತಿಯನ್ನು ರದ್ದುಗೊಳಿಸುವುದರ ಜತೆಗೆ ಚಕ್ರತೀರ್ಥ ಮೇಲೆ ಕಠಿಣ ಕಾನೂನು ಕ್ರಮ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.
ಕುವೆಂಪು ಅವರು ಶ್ರೀ ರಾಮಾಯಣ ದರ್ಶನಂ ಎನ್ನುವ ಮಹಾಕಾವ್ಯ ರಚಿಸಿ, ಮಲೆಗಳಲ್ಲಿ ಮದುಮಗಳು, ಕಾನೂರು ಸುಬ್ಬಮ್ಮ ಹೆಗ್ಗಡಿತಿ ಎಂಬ ಸಾಹಿತ್ಯದ ಪ್ರಕಾರದ ಜತೆ ಶೂದ್ರ ತಪಸ್ವಿ, ಜಲಗಾರ ಎನ್ನುವ ನಾಟಕ ಪ್ರಕಾರವನ್ನು ರಚಿಸಿದ್ದಾರೆ. ಇದರೊಂದಿಗೆ ಕನ್ನಡ ಸಾಹಿತ್ಯವನ್ನು ಶ್ರೀಮಂತಗೊಳಿಸಿದ ಹೆಮ್ಮೆಯ ಕವಿಯನ್ನು ಅವಮಾನಿಸಿರುವುದು ಖಂಡನೀಯ. ನಾಡಿನ ಶ್ರೇಷ್ಟ ನಾಡಗೀತೆಯಲ್ಲಿ ರಾಜ್ಯದ ಹಿರಿಮೆ ಗರಿಮೆಯನ್ನು ಶ್ಲಾಘಿಸಿ ಸರ್ವ ಜನಾಂಗದ ಶಾಂತಿಯ ತೋಟ ಕರುನಾಡು ಎಂಬುದನ್ನು ಚಿತ್ರಿಸಿರುವ ಕುವೆಂಪು ಅವರ ಸಾಹಿತ್ಯ ಪ್ರಕಾರದ ಆಳ-ಅಗಲವನ್ನು ಅರ್ಥೈಸಿಕೊಳ್ಳಲಾಗದ ಚಕ್ರತೀರ್ಥ ಅವರಂತಹ ಸಂಕುಚಿತ ಮನೋಭಾವದ ವ್ಯಕ್ತಿಗಳ ತೀರ್ಮಾನಗಳು ದೇಶದ ಭವಿಷ್ಯದ ಪ್ರಜೆಗಳಾಗಲಿರುವ ವಿದ್ಯಾರ್ಥಿಗಳ ಮೇಲೆ ಕೆಟ್ಟ ಪರಿಣಾಮ ಬೀರಲಿದೆ ಇದರ ಗಂಭೀರತೆಯನ್ನು ಸರ್ಕಾರ ಅರಿತು ಶೀಘ್ರ ಕ್ರಮ ತೆಗೆದುಕೊಳ್ಳಬೇಕೆಂದು ಒತ್ತಾಯಿಸಿದ್ದಾರೆ.
ವಿಭಿನ್ನ ಧರ್ಮ, ವಿವಿಧ ಜಾತಿಗಳಿಂದ ಕೂಡಿರುವ ಪ್ರಜಾಪ್ರಭುತ್ವ ದೇಶ ಭಾರತದಲ್ಲಿ ಸಮಗ್ರತೆ ಹಾಗೂ ಏಕತೆಯಿಂದ ಬಾಳ್ವೆ ನಡೆಸಬೇಕಾದ ಕಾಲಘಟ್ಟದಲ್ಲಿ ಸಮಾಜದಲ್ಲಿ ಸಂಘರ್ಷ ಹುಟ್ಟು ಹಾಕುವುದು ಸರಿಯಲ್ಲ. ದೇಶದಲ್ಲಿ ರಾಷ್ಟ್ರಗೀತೆ, ರಾಷ್ಟ್ರಧ್ವಜ ಹಾಗೂ ನಾಡಗೀತೆಗೆ ಪವಿತ್ರ ಸ್ಥಾನವಿದೆ. ಅಂತಹ ಶ್ರೇಷ್ಟ ಸಾಹಿತಿಗೆ ಅವಮಾನವೆಸಗಿದರೆ ಸಹಿಸಲು ಸಾಧ್ಯವಿಲ್ಲ.
ಸರ್ಕಾರ ಕೂಡಲೇ ಸೂಕ್ತ ಕ್ರಮ ಜರುಗಿಸಬೇಕೆಂದು ಆಗ್ರಹಿಸಿದ್ದಾರೆ.
ರಾಯಚೂರು : ರಾಯಚೂರಿನ ತಾಪಮಾನ ಹೆಚ್ಚಳದಿಂದ ಇಬ್ಬರು ಮಕ್ಕಳು ಮೃತಪಟ್ಟಿರುವ ಘಟನೆ ನಡೆದಿದೆ. ಜನರು ಬಿಸಿ ಗಾಳಿಯಿಂದಾಗಿ ತತ್ತರಿಸುತ್ತಿದ್ದು ,… Read More
ಬೆಂಗಳೂರು : ರಾಜ್ಯದಲ್ಲಿ 14 ಕ್ಷೇತ್ರಗಳ ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನ ಮುಕ್ತಾಯವಾಗಿದ್ದು , ಮೇ 7ರಂದು ಉತ್ತರ… Read More
ಮೈಸೂರು: ಮೈಸೂರು ಕೊಡುಗು ಲೋಕಸಭಾ ಚುನಾವಣೆ ಶಾಂತಿಯುತವಾಗಿ ನಡೆದಿದ್ದು ಮೈಸೂರಿನ ಪಡುವಾರಹಳ್ಳಿಯಲ್ಲಿರುವ ಮಹಾರಾಣಿ ನಿರ್ವಹಣಾ ಕಾಲೇಜಿಗೆ ಚುನಾವಣಾ ಸಿಬ್ಬಂದಿ ಇವಿಎಂ,… Read More
ತಮಿಳನಾಡಿಗೆ 275 ಕೋಟಿ ರೂ.'ನೆರೆ ಪರಿಹಾರ' ಘೋಷಣೆ ನವದೆಹಲಿ : ಕೇಂದ್ರವು ಕರ್ನಾಟಕಕ್ಕೆ 3,454 ಕೋಟಿ ರೂ. ಬರಪರಿಹಾರ, ತಮಿಳಿನಾಡಿಗೆ… Read More
ಮಂಡ್ಯ : ನಿನ್ನೆ ನಡೆದ 14 ಲೋಕಸಭಾ ಕ್ಷೇತ್ರಗಳ ಪೈಕಿ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಶೇ.81.67 ಮತದಾನವಾಗಿದೆ ಕಳೆದ ಬಾರಿಗಿಂತ… Read More
ಮಂಡ್ಯ : ಮಂಡ್ಯ ಲೋಕಸಭಾ ಕ್ಷೇತ್ರ 9 ಗಂಟೆಗೆ ಶೇ. 7.70% ಮತದಾನ Join WhatsApp Group ವಿಧಾನಸಭಾ ಕ್ಷೇತ್ರವಾರು… Read More
This website uses cookies.
Leave a Comment