ನ್ಯೂಸ್ ಸ್ನ್ಯಾಪ್.
ಚಿತ್ರದುರ್ಗ.
ಬೆಳ್ಳೂರು ಕ್ರಾಸ್ನಿಂದ ಯಡಿಯೂರು ಮಾರ್ಗ ಮಧ್ಯದಲ್ಲಿರುವ ಸುಮಾರು 500 ಎಕರೆ ಪ್ರದೇಶವನ್ನು ಕರ್ನಾಟಕ ಹೌಸಿಂಗ್ ಬೋರ್ಡ್ ವಶಮಾಡಿಕೊಂಡಿದೆ. ಇದರಲ್ಲಿ ಬಹುಪಾಲು ಕೃಷಿ ಭೂಮಿ ಇದೆ. ಇಂತಹ ಅವೈಜ್ಞಾನಿಕ ಸ್ವಾಧೀನ ಪ್ರಕ್ರಿಯೆಗೆ ತಮ್ಮ ವಿರೋಧವಿದೆ ಎಂದು ಮಾಜಿ ಸಚಿವ ಚಲುವರಾಯ ಸ್ವಾಮಿ ಬುಧವಾರ ಹೇಳಿದರು.
ನಗರದ ಕಾಂಗ್ರೆಸ್ ಕಛೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಚಿವರಾದ ಎನ್. ಚೆಲುವರಾಯ ಸ್ವಾಮಿ, ಈಗಾಗಲೇ ಹೌಸಿಂಗ್ ಬೋರ್ಡ್ ನವರು ಲೇಔಟ್ ರಚನೆಗೆ ಟೆಂಡೆರ್ ಕರೆದು, ಎಲ್ಲಾ ಕಾರ್ಯಗಳು ಪೂರ್ಣವಾಗಿವೆ” ಎಂದರು.
“ಅಲ್ಲದೇ ಕೆಲವು ವರ್ಷಗಳ ಹಿಂದೆ ಕರ್ನಾಟಕ ಅಭಿವೃದ್ಧಿ ಮಂಡಳಿ (ಕೆಡಿಬಿ) ಯವರು ಪ್ರೇಮ್ ಶುಗರ್ ಎಂಬ ಕಂಪನಿಯ ಮನವಿಯಂತೆ 500 ಎಕರೆ ಜಾಗವನ್ನು ಕಾರ್ಖಾನೆ ನಿರ್ಮಿಸಲು ಇದೇ ಪ್ರದೇಶದಲ್ಲಿ ನೀಡಲಾಗಿದೆ. ಆದರೆ ಅನೇಕ ವರ್ಷಗಳು ಕಳೆದರೂ ಕಾರ್ಖಾನೆಯ ಯಾವ ಕಾಮಗಾರಿಗಳೂ ಪ್ರಾರಂಭವಾಗಿಲ್ಲ ಎಂದರು.
ಈಗ ಕರ್ನಾಟಕ ಅಭಿವೃದ್ಧಿ ಮಂಡಳಿಯು ಒಟ್ಟು 1200 ಎಕರೆ ಭೂಮಿಯನ್ನು ಸ್ವಾಧೀನ ಮಾಡಲು ಪ್ರಯತ್ನಸುತ್ತಿದೆ. ರಾಜ್ಯದಲ್ಲಿ ಜೆಡಿಎಸ್ ಪಕ್ಷ ಅಧಿಕಾರದಲ್ಲಿದ್ದಾಗ ಈ ಯೋಜನೆ ಜಾರಿಗೆ ಬಂದಿದೆ. ಈ ಯೋಜನೆಯಿಂದ ಅಲ್ಲಿ ಕೃಷಿ ಭೂಮಿಯನ್ನು ಹೊಂದಿದ ರೈತರು ಸಂಕಷ್ಟಕ್ಕೆ ಸಿಲುಕುತ್ತಾರೆ. ಹಾಗಾಗಿ ಇದೊಂದು ಅವೈಜ್ಞಾನಿಕ ಸ್ವಾಧೀನ ಕ್ರಮವಾಗಿದೆ ಎಂದು ತಿಳಿಸಿದರು.
ನಾನು ಈ ಕುರಿತು ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಮಾತನಾಡಿ ಯೋಜನೆಯನ್ನು ತಡೆಹಿಡಿಯುವಂತೆ ಅಥವಾ ಜನಸಾಮಾನ್ಯರು ಹಾಗೂ ರೈತರಿಗೆ ತೊಂದರೆಯಾಗದಂತಹ ಪ್ರದೇಶದಲ್ಲಿ ಯೋಜನೆಯನ್ನು ಜಾರಿ ಮಾಡುವಂತೆ ಮನವಿ ಮಾಡಿದ್ದೇನೆ. ಹಾಗೂ ವಿರೋಧ ಪಕ್ಷದ ನಾಯಕ ಸಿದ್ಧರಾಮಯ್ಯನವರ ಗಮನಕ್ಕೂ ಈ ವಿಚಾರವನ್ನು ತರುತ್ತೇನೆ” ಎಂದರು.
ನವದೆಹಲಿ ,ಮೇ 20 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 68,400 ರೂಪಾಯಿ ದಾಖಲಾಗಿದೆ. 24… Read More
ಪ್ರಕರಣದಿಂದ ಸ್ವಾರ್ಥ ರಾಜಕಾರಣಿಗಳಿಗೆ, ಕೆಲ ಮಾಧ್ಯಮಗಳಿಗೆ, ಗಂಜಿ ಗಿರಾಕಿಗಳಿಗೆ ಮಾತ್ರ ಲಾಭ ?! ಬರಗಾಲದಿಂದ ರಾಜ್ಯದಲ್ಲಿ ಆಗಿರುವ ಅನಾಹುತ ,… Read More
ಕುಂದಾಪುರ : ಮೇ 16 ರ ರಾತ್ರಿ ಗೋಪಾಡಿ ಗ್ರಾಮದ ಮೂಡುಗೋಪಾಡಿಯ ನಿವಾಸಿ ಜಯಂತಿ ಶೆಟ್ಟಿ (61) ಅವರ ಮೃತದೇಹ… Read More
2015ರಲ್ಲಿ ಶಿಲ್ಪಾ ಎಂಬುವವರ ಜೊತೆ ಮದುವೆಯಾಗಿದ್ದ ನಟ ಚಂದು ತ್ರಿನಯನಿ ಸೀರಿಯಲ್ನಲ್ಲಿ ಅಭಿನಯಿಸಿದ್ದ ತೆಲುಗು ನಟ ಚಂದು ನಟಿ ಪವಿತ್ರ… Read More
ಬೆಂಗಳೂರು : ಶಿಕ್ಷಣ ಸಚಿವ ಮಧು ಬಂಗಾರಪ್ಪ , ಮುಂದಿನ ವರ್ಷದಿಂದ SSLC ವಿದ್ಯಾರ್ಥಿಗಳಿಗೆ ಗ್ರೇಸ್ ಅಂಕಗಳನ್ನು ನೀಡಲಾಗುವುದಿಲ್ಲ ಎಂದು… Read More
ಬೆಂಗಳೂರು : ಆನೇಕಲ್ ತಾಲೂಕಿನ ಚಂದಾಪುರ ಸಮೀಪದ ಇಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬಳು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಅರಸೀಕೆರೆ ಮೂಲದ ಕರಡಿಹಳ್ಳಿ… Read More
This website uses cookies.
Leave a Comment