ಚಾಮರಾಜನಗರದ 24 ಜನರ ಸಾವಿನ ಪ್ರಕರಣದಲ್ಲಿ ನಾನು ಯಾವುದೇ ತಪ್ಪು ಮಾಡಿಲ್ಲ. ನನ್ನ ಜವಾಬ್ದಾರಿಯನ್ನು ಸರಿಯಾದ ರೀತಿಯಲ್ಲಿ ನಿರ್ವಹಣೆ ಮಾಡಿದ್ದೇನೆ ಎಂದು ಮೈಸೂರು ಡಿಸಿ ರೋಹಿಣಿ ಸಿಂಧೂರಿ ಭಾವುಕರಾಗಿ ಹೇಳಿದರು.
ಮೈಸೂರಿನಿಂದ ಚಾಮರಾಜನಗರಕ್ಕೆ ಆಕ್ಸಿಜನ್ ಸರಬರಾಜು ಮಾಡಿಲ್ಲ ಎಂಬ ಆಪಾದನೆ ಸರಿ ಇಲ್ಲ, ಕಳೆದ ಮೂರು ದಿನದ ಹಿಂದೆಯೇ 40 ಆಕ್ಸಿಜನ್ ಸರಬರಾಜು ಮಾಡಲಾಗಿದೆ. ಆಕ್ಸಿಜನ್ ಸರಬರಾಜಿಗೆ ಸಂಬಂಧಿಸಿದಂತೆ ದಾಖಲಾತಿಯನ್ನು ತನಿಖಾಧಿಕಾರಿಗೆ ನೀಡಲಾಗುವುದು.
ತುಂಬಾ ಶ್ರಮಪಟ್ಟು ಕೆಲಸ ಮಾಡಿದ್ದೇವೆ. ಆಧಾರರಹಿತ ಆರೋಪ ಸಲ್ಲದು. ಈಗ ತನಿಖೆ ನಡೆಯುತ್ತಿದೆ. ಸತ್ಯ ಹೊರ ಬಂದಾಗ ತಪ್ಪು ಯಾರು ಮಾಡಿದ್ದಾರೆಂಬುದು ಗೊತ್ತಾಗುತ್ತದೆ ಎಂದರು


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ