ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ವರ್ಗಾವಣೆ ಗೊಂದಲ ಹುಟ್ಟಿಸಿದೆ. ಬುಧವಾರ ರಾತ್ರಿ ವರ್ಗಾವಣೆ ಆಗಿತ್ತು. ಗುರುವಾರ ಬೆಳಗ್ಗೆ ಮಾಧ್ಯಮ ಗಳಲ್ಲಿ ಸುದ್ದಿ ಆಗುವ ವೇಳೆಗೆ ವರ್ಗಾವಣೆ ಪ್ರಕ್ರಿಯೆ ರದ್ದಾಗಿದೆ.
ಚಾಮರಾಜನಗರ ಜಿಲ್ಲಾಧಿಕಾರಿಯಾಗಿ ಅಧಿಕಾರ ಸ್ವೀಕಾರ ಮಾಡಬೇಕಿದ್ದ ಡಾ.ಬಿ.ಸಿ. ಸತೀಶ್ ಪ್ರತಿಕ್ರಿಯೆ ನೀಡಿ, ನಿನ್ನೆ ರಾತ್ರಿ ವರ್ಗಾವಣೆ ಆಗಿತ್ತು. ಬೆಳಗ್ಗೆ ಬದಲಾಗಿದೆ. ನಾನು ಚಾಮರಾಜನಗರಕ್ಕೆ ಬರ್ತಾ ಇಲ್ಲ ಎಂದಿದ್ದಾರೆ.
ಸರ್ಕಾರ ಕೆಲ ತಿಂಗಳ ಹಿಂದೆ ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದ್ದಾಗ ಜಿಲ್ಲಾಧಿಕಾರಿ ಡಾ.ಎಂ.ಆರ್. ರವಿ ಅವರನ್ನು ಬೆಂಗಳೂರಿನ ಸಕಾಲ ಮಿಷನ್ ನ ಹೆಚ್ಚುವರಿ ನಿರ್ದೇಶಕ ಸ್ಥಾನಕ್ಕೆ ವರ್ಗಾವಣೆ ಮಾಡಲಾಗಿತ್ತು.
ಚಾಮರಾಜನಗರ ನೂತನ ಜಿಲ್ಲಾಧಿಕಾರಿಯಾಗಿ ಬೆಂಗಳೂರು ಜಲಾನಯನ ಅಭಿವೃದ್ಧಿ ಇಲಾಖೆಯ ಆಯುಕ್ತ ಡಾ.ಬಿ.ಸಿ.ಸತೀಶ್ ಅವರನ್ನು ನಿಯುಕ್ತಿಗೊಳಸಲಾಗಿತ್ತು.
ಆಮ್ಲಜನಕ ದುರಂತದಲ್ಲಿ ಹೈಕೋರ್ಟ್ ನೇಮಕ ಮಾಡಿದ್ದ ಸಮಿತಿ ಸತ್ಯಶೋಧನೆ ನಡೆಸಿ ಜಿಲ್ಲಾಧಿಕಾರಿ ವೈಫಲ್ಯವನ್ನು ಎತ್ತಿಹಿಡಿದಿದೆ. ಈ ಹಿನ್ನೆಲೆಯಲ್ಲಿ ಸರ್ಕಾರ ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ಮೇಲೆ ಶಿಸ್ತು ಕ್ರಮಕೈಗೊಳ್ಳಲಿದೆ ಎಂಬ ನಿರೀಕ್ಷೆ ಹುಸಿಯಾಗಿದೆ.
ಗುಂಡ್ಲುಪೇಟೆ ಬಿಜೆಪಿ ಶಾಸಕ ಮತ್ತು ರಾಜ್ಯ ಅರಣ್ಯ ಕೈಗಾರಿಕೆ ನಿಗಮದ ಅಧ್ಯಕ್ಷ ಸಿ.ಎಸ್.ನಿರಂಜನ್ ಕುಮಾರ್ ಸಹ ಗುರುವಾರ ಬೆಳಗ್ಗೆ ಡಿಸಿ ರವಿ ವರ್ಗಾವಣೆ ಆಗಿರುವುದಾಗಿ ತಿಳಿಸಿದ್ದರು.
ಆದರೆ ಪ್ರಭಾವಿಗಳ ಕೃಪೆಯಿಂದ ಡಿಸಿ ರವಿ ಚಾ.ನಗರದಲ್ಲೇ ಉಳಿದುಕೊಂಡಿರಬಹುದು ಎಂಬ ಅನುಮಾನ ಹುಟ್ಟಿದೆ.
ನಾನು ಇಲ್ಲೇ ಇದ್ದೀನಲ್ಲಪ್ಪಾ, ನನ್ನ ವರ್ಗಾವಣೆ ಆಗಿಲ್ಲ ಎಂದು ಮಾಧ್ಯಮಗಳಿಗೆ ಕಟುವಾಗಿ ಪ್ರತಿಕ್ರಿಯೆ ನೀಡಿದ್ದಾರೆ ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ.
ನಮ್ಮ ಪೋಲಿಸರು ಸಮರ್ಥರಿದ್ದಾರೆ ಬಿಜೆಪಿಯವರು ಯಾವತ್ತಾದರೂ ಸಿಬಿಐ ತನಿಖೆ ಕೊಟ್ಟಿದ್ದಾರಾ ? ಬೆಂಗಳೂರು : ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಸಿಬಿಐಗೆ… Read More
ಮಡಿಕೇರಿ : ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಸೂರ್ಲಬ್ಬಿಯಲ್ಲಿ ಎಸ್ಎಸ್ಎಲ್ಸಿ ಬಾಲಕಿಯನ್ನು ಭೀಕರವಾಗಿ ಹತ್ಯೆ ಮಾಡಿ ತಲೆ ಕೊಂಡೊಯ್ದಿದ್ದ ಪ್ರಕರಣಕ್ಕೆ… Read More
ಮುಂಬೈ: ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬಂದರೆ ಅಯೋಧ್ಯೆಯಲ್ಲಿ ನಿರ್ಮಿಸಲಾಗಿರುವ ರಾಮಮಂದಿರವನ್ನು ಶುದ್ಧೀಕರಿಸುತ್ತೇವೆ ಎಂದು ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ನಾನಾ ಪಟೋಲೆ… Read More
ನವದೆಹಲಿ : ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಜೂನ್ 1 ರ ವರೆಗೂ ಸುಪ್ರೀಂ ಕೋರ್ಟ್ ಮಧ್ಯಂತರ ಜಾಮೀನು ಮಂಜೂರು… Read More
ಬೆಂಗಳೂರು:ಪೆನ್ಡ್ರೈವ್ ಪ್ರಕರಣ ಎದುರಿಸುತ್ತಿರುವ ಸಂಸದ ಪ್ರಜ್ವಲ್ ರೇವಣ್ಣಗೆ ಇದೀಗ ಮತ್ತೊಂದು ಸಂಕಷ್ಟ ಎದುರಾಗಿದೆ. ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಮತ್ತೊಂದು… Read More
ಪುಣೆ : ವಿಚಾರವಾದಿ ಡಾ. ನರೇಂದ್ರ ದಾಭೋಲ್ಕರ್ ಅವರನ್ನು ಹತ್ಯೆಗೈದಿದ್ದ ಇಬ್ಬರಿಗೆ ಪುಣೆಯ ವಿಶೇಷ ಯುಎಪಿಎ ನ್ಯಾಯಾಲಯ ಜೀವಾವಧಿ ಶಿಕ್ಷೆ… Read More
This website uses cookies.
Leave a Comment