Categories: Main News

ಚಾಮರಾಜನಗರ ‌ದುರಂತ ಮರೆ ಮಾಚಲು ಬೆಡ್ ಬ್ಲಾಕಿಂಗ್ ನಾಟಕ‌ – ಮಾಜಿ‌ ಸಿಎಂ‌ ಎಚ್ ಡಿಕೆ ಕಟು ಟೀಕೆ

ಚಾಮರಾಜನಗರ ಘಟನೆ ಮರೆಮಾಚಲು ಬೆಡ್ ಬ್ಲಾಕಿಂಗ್ ದಂಧೆ ಎಂದು ನಾಟಕ ಆರಂಭಿಸಿದ್ದಾರೆ. ಇದೊಂದು ಜನರನ್ನು ಹಾದಿ ತಪ್ಪಿಸುವ ಪರ್ಯಾಯ ಮಾರ್ಗ ಅಷ್ಟೇ ಎಂದು ಮಾಜಿ ಸಿ ಎಂ ಎಚ್ ಡಿ ಕುಮಾರಸ್ವಾಮಿ ಬುಧವಾರ ವ್ಯಂಗ್ಯ ವಾಡಿದರು.

ಮಂಡ್ಯ ಜಿಲ್ಲಾ ಆಸ್ಪತ್ರೆಗೆ ಭೇಟಿ ನೀಡಿ ಅವ್ಯವಸ್ಥೆ ಬಗ್ಗೆ ಮಾಹಿತಿ ಸಂಗ್ರಹಿಸಿದ ಮಾಜಿ ಸಿ ಎಂ‌ ಕುಮಾರಸ್ವಾಮಿ,
ಬೆಂಗಳೂರಿನಲ್ಲಿ ನಿನ್ನೆ ದೊಡ್ಡ ಡ್ರಾಮ ನಡೆಸಿದರು. ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಹಾಗೂ ಇಬ್ಬರು ಶಾಸಕರು ವಾರ್ ರೂಂಗೆ ನುಗ್ಗಿ ‌ ಡ್ರಾಮ ಮಾಡಿ ಅಗ್ಗದ ಪ್ರಚಾರ ಮುಂದಾಗಿದ್ದಾರೆ. ಕೆಲವು ಮಾಧ್ಯಮ ಗಳು ಆತನನ್ನು ಬಾಹುಬಲಿ ಎಂದು ವೈಭವೀಕರಿಸಿದ್ದಾರೆ.‌ ನನ್ನ ಸರ್ಕಾರ ಕಿತ್ತು ಹಾಕುವಲ್ಲಿ ಯಶಸ್ವಿಯಾದ ಕೆಲ ಮಾಧ್ಯಮ ಸಂಪಾದಕರು, ಈಗ ನಿನ್ನೆಯಿಂದ ಕೊಲೆಗಡುಕ ಸರ್ಕಾರ ಎಂದು ಬಿಂಬಿಸುತ್ತಿದ್ದಾರೆ ಎಂದು ಟೀಕಿಸಿದರು.

ಬೆಂಗಳೂರಿನಲ್ಲಿರುವ ವಾರ್ ರೂಂನಲ್ಲಿ ಮದರಸ ಮಾಡಲು ಹೊರಟಿದ್ದೀರಾ ಅಂತ ಆ‌ ಸಂಸದ ಪ್ರಶ್ನೆ ಮಾಡಿದ್ದಾನೆ.
ಇಲ್ಲಿ ಜನಗಳು ಸಾಯುತ್ತಿದ್ದಾರೆ.‌ ಅಲ್ಲಿ ಹೋಗಿ ಇವರುಗಳು ರಾಜಕೀಯ ಮಾಡುತ್ತಿದ್ದಾರೆ. ಜಾತಿ ಇಲ್ಲಿ ಕೆಲಸ ಮಾಡಲ್ಲ, ಪ್ರಾಮಾಣಕತೆ ಮುಖ್ಯ ಎಂದರು.

ಆಕ್ಸಿಜನ್ ಕೊರತೆ ಬಗ್ಗೆ ಜನಕ್ಕೆ ಸತ್ಯ ಹೇಳಬೇಕು. ಕರೊನಾ ನಿರ್ವಹಣೆಗೆ 5 ಜನ ಮಂತ್ರಿಗಳಿಗೆ ಜವಾಬ್ದಾರಿ ಕೊಟ್ಟ ಮೇಲೆ ಆರೋಗ್ಯ ಮಂತ್ರಿ ಸುಧಾಕರ್ ಕ್ಯಾಬಿನೆಟ್ ಸಭೆ ಬಿಟ್ಟು ಎದ್ದು ಹೋದರು ಎಂಬ ಮಾಹಿತಿ ಇದೆ.
ಇದು ಸರ್ಕಾರದ ಒಗ್ಗಟ್ಟನ್ನು ಪ್ರಶ್ನೆ ಮಾಡುತ್ತದೆ ಎಂದು ಹೇಳಿದರು.

ಬೆಡ್ ಬ್ಲಾಕಿಂಗ್ ದಂಧೆ ವಿಚಾರವಾಗಿ ಕೆಲವರನ್ನ ಬಂಧಿಸಲಾಗಿದೆ. ಬಂಧಿತರು ಎನ್‌ಜಿ‌ಓ ನಡೆಸುತ್ತಿದ್ದರು ಎಂಬ ಮಾಹಿತಿ ಇದೆ. ಇವರಿಗೆ ಬೆಡ್ ಅಲರ್ಟ್ ಮಾಡಲು ಜವಾಬ್ದಾರಿ ಕೊಟ್ಟವರು ಯಾರು.? ಎಂದು ಕುಮಾರಸ್ವಾಮಿ ಪ್ರಶ್ನೆ ಮಾಡಿದರು.‌

ಸಂಸದರು 8 ವಾರ್ ರೂಂ‌ಗಳ ಪೈಕಿ ಕೇವಲ ಒಂದಕ್ಕೆ ಹೋಗಿ ನೋಡಿದ್ದಾರೆ.
ಕಂಪ್ಯೂಟರ್‌‌ನಲ್ಲಿರುವ ಮಾಹಿತಿಗಿಂತ ಆಸ್ಪತ್ರೆಗೆ ತೆರಳಿ ವಾಸ್ತವತೆ ನೋಡಬೇಕು. ಡ್ರಗ್ ದಂಧೆಯಲ್ಲಿ ಒಂದೆರಡು ಹೆಣ್ಣುಮಕ್ಕಳನ್ನು ಜೈಲಿಗೆ ಹಾಕಿದ್ದು ಬಿಟ್ಟರೆ ನಿಮ್ಮ ಸಾಧನೆ ಏನು?*
ಸಿಡಿ ವಿಚಾರ ಏನಾಯ್ತು, ಚಾಮರಾಜನಗರ, ಬೆಡ್ ಬ್ಕಾಕಿಂಗ್ ದಂಧೆ ಬಗ್ಗೆ ತನಿಖೆ ಮಾಡಿ ಏನು ಮಾಡ್ತೀರಿ..? ಇವೆಲ್ಲವೂ
ಜನರನ್ನ ದಿಕ್ಕು ತಪ್ಪಿಸುವ ಕೆಲಸ ಆಗಿದೆ ಎಂದರು.

ಬೆಡ್ ಬ್ಕಾಕಿಂಗ್ ಕೇಸನ್ನು ಸಿಸಿಬಿಗೆ ವಹಿಸಿದ್ದೀರಿ. ಪೊಲೀಸರು ವಾರ್ ರೂಂ‌ಗೆ ತೆರಳಿ ತನಿಖೆ ಮಾಡಿದರೆ
ನಾಳೆಯಿಂದ ಅಲ್ಲಿ ಯಾರು ಕೆಲಸ ಮಾಡುತ್ತಾರೆ. ಜನರಿಗೆ ಬೆಡ್ ಕೊಡುವವರು ಯಾರು..?
ಕೊವಿಡ್ ವಾರಿಯರ್ಸ್ ಪೈಕಿ 5-6% ಜನ ದುಡ್ಡು ಮಾಡಲು ಇರಬಹುದು.
ಯಾಕೆಂದ್ರೆ ನೀವು ಪೊಸ್ಟಿಂಗ್ ಹಾಕಬೇಕಾದರೆ ಹಣ ಪಡೆದು ಹಾಕಿದ್ದೀರಿ. ಈಗ ಆತ ದುಡ್ಡು ಮಾಡಲು ಹೊರಟಿದ್ದಾನೆ. ನಿಮ್ಮಲ್ಲಿ ಲೂಪ್ ಹೋಲ್ಸ್ ಇಟ್ಟು ಕೊಂಡು ಜನರ ಹಾದಿ ತಪ್ಪಿಸಬೇಡಿ. ಜನರು ಬೀದಿಯಲ್ಲಿ ಸಾಯುತ್ತಿದ್ದರೆ ನೀವು ಹುಡುಗಾಟ ಆಡುತ್ತಿದ್ದೀರಾ.? ಎಂದು ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು.

Team Newsnap
Leave a Comment
Share
Published by
Team Newsnap

Recent Posts

BMTC ಬಸ್ ಚಲಿಸುತ್ತಿರುವಾಗಲೇ ಚಾಲಕನಿಗೆ ಹೃದಯಾಘಾತ : ಪ್ರಾಣಾಪಾಯದಿಂದ ಪಾರು

ಬೆಂಗಳೂರು : BMTC ಬಸ್ ಚಾಲನೆ ಮಾಡುತ್ತಿರುವಾಗಲೇ ಚಾಲಕನಿಗೆ ಏಕಾಏಕಿ ಎದೆನೋವು ಕಾಣಿಸಿಕೊಂಡಿದ್ದು ,ಸಂಚಾರಿ ಪೊಲೀಸರ ಸಮಯ ಪ್ರಜ್ಞೆಯಿಂದ ಚಾಲಕ… Read More

September 20, 2024

ಲೋಕಾ ಬಲೆಗೆ ಬಿದ್ದ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ

ಮಂಗಳೂರು : ಕಾಮಗಾರಿಯ ಬಿಲ್ ಪಾವತಿಗಾಗಿ ಲಂಚ ಸ್ವೀಕರಿಸುತ್ತಿರುವಾಗಲೇ ಪಟ್ಟಣ ಪಂಚಾಯತ್ ಜೂನಿಯರ್ ಇಂಜಿನಿಯರ್ ಹಾಗೂ ಮುಖ್ಯ ಅಧಿಕಾರಿ ಲೋಕಾಯುಕ್ತ… Read More

September 20, 2024

ಕರುಳಿನ ಆರೋಗ್ಯ ಚೇತರಿಕೆಗೆ ಕರಿ ಎಳ್ಳು ರಾಮಬಾಣ !

ಎಳ್ಳು ನೋಡಲು ಪುಟ್ಟದಾಗಿದ್ದು ಕಟುವಾದ ಯಾವ ವಾಸನೆಯೂ ಇಲ್ಲದ, ತನ್ನೊಡನೆ ಬೆರೆತ ಇತರ ವಸ್ತುಗಳ ಪರಿಮಳವನ್ನು ತನ್ನೊಡನೆ ಹೀರಿಕೊಳ್ಳುವ ವಿಶೇಷಗುಣ… Read More

September 20, 2024

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಸೆಪ್ಟೆಂಬರ್ 18 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 68,240 ರೂಪಾಯಿ ದಾಖಲಾಗಿದೆ. 24… Read More

September 20, 2024

ಅತ್ಯಾಚಾರ ಆರೋಪ : ಶಾಸಕ ಮುನಿರತ್ನ ಬಂಧನ

ಬೆಂಗಳೂರು: ಇಂದು ಆರ್.ಆರ್ ನಗರದ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಅತ್ಯಾಚಾರ ಪ್ರಕರಣದಲ್ಲಿ ಕಗ್ಗಲಿಪುರ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ಇಂದಿನಿಂದ… Read More

September 20, 2024

ಅಕ್ಟೋಬರ್ 4 ರಿಂದ 7 ವರೆಗೆ ಶ್ರೀರಂಗಪಟ್ಟಣ ದಸರ

ಶ್ರೀರಂಗಪಟ್ಟಣ : ಅಕ್ಟೋಬರ್ 4 ರಿಂದ 7 ವರೆಗೆ ವಿಜೃಂಭಣೆಯಿಂದ ಶ್ರೀರಂಗಪಟ್ಟಣ ಆಚರಿಸಲಾಗುವುದು ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ… Read More

September 19, 2024