February 21, 2026

Newsnap Kannada

The World at your finger tips!

nanjappa

ನ್ಯಾಯಾಧೀಶರ ಭೇಟಿ ವೇಳೆ ಠಾಣೆ ಬಾಗಿಲು ಮುಚ್ಚಿದ್ದ ಚಾಮರಾಜನಗರ ಇನ್ಸ್‌ಪೆಕ್ಟರ್ ಅಮಾನತು

Spread the love

ಚಾಮರಾಜನಗರದ ಪೊಲೀಸ್ ಠಾಣೆಗೆ ನ್ಯಾಯಾಧೀಶರು ದಿಢೀರ್ ಭೇಟಿ ನೀಡಿದ ಸಂದರ್ಭದಲ್ಲಿ ಬಾಗಿಲು ಮುಚ್ಚಿದ್ದ ಇನ್ಸ್‌ಪೆಕ್ಟರ್ ಅವರನ್ನು ಅಮಾನತು ಮಾಡಲಾಗಿದೆ

ಚಾಮರಾಜನಗರ ಸಿಇಎನ್ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ನಂಜಪ್ಪ ಅಮಾನತುಗೊಂಡಿದ್ದಾರೆ.

ಚಾಮರಾಜನಗರ ಜೆಎಂಎಫ್‍ಸಿ ನ್ಯಾಯಾಲಯದ ನ್ಯಾಯಾಧೀಶ ಗಣಪತಿ ಗುರುಸಿದ್ದ ಬಾದಾಮಿಯವರು ಜ. 3 ರಂದು ಸಿಇಎನ್ (ಸೈಬರ್, ಎಕಾನಾಮಿಕ್ ಅಂಡ್ ನಾರ್ಕೋಟಿಕ್) ಠಾಣೆಗೆ ದಿಢೀರ್ ಭೇಟಿ ನೀಡಿದ್ದರು.

ಈ ವೇಳೆ ಇನ್ಸ್‌ಪೆಕ್ಟರ್ ಪೊಲೀಸ್ ಠಾಣೆಯ ಬಾಗಿಲು ಹಾಕಿಕೊಂಡಿದ್ದಾರೆ. ಆಗ ನ್ಯಾಯಾಧೀಶರು ದೂರು ಕೊಡಲು ಬಂದವರು ಏನು ಮಾಡಬೇಕು ಎಂದು ಪ್ರಶ್ನಿಸಿ ಎಸ್ಪಿಗೆ ಪತ್ರ ಬರೆದಿದ್ದರು.

ನ್ಯಾಯಾಧೀಶರ ಪತ್ರಕ್ಕೆ ಕೂಡಲೇ ಕ್ರಮ ತೆಗೆದುಕೊಂಡ ಎಸ್ಪಿ ದಿವ್ಯಾ ಸಾರಾ ಥಾಮಸ್‍ರವರು ಐಜಿಯ ಅನುಮತಿ ಪಡೆದು ನಂಜಪ್ಪ ಅವರನ್ನು ಅಮಾನತುಗೊಳಿಸಿದ್ದಾರೆ.

error: Content is protected !!