ಚಾಮರಾಜನಗರದ ಪೊಲೀಸ್ ಠಾಣೆಗೆ ನ್ಯಾಯಾಧೀಶರು ದಿಢೀರ್ ಭೇಟಿ ನೀಡಿದ ಸಂದರ್ಭದಲ್ಲಿ ಬಾಗಿಲು ಮುಚ್ಚಿದ್ದ ಇನ್ಸ್ಪೆಕ್ಟರ್ ಅವರನ್ನು ಅಮಾನತು ಮಾಡಲಾಗಿದೆ
ಚಾಮರಾಜನಗರ ಸಿಇಎನ್ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ನಂಜಪ್ಪ ಅಮಾನತುಗೊಂಡಿದ್ದಾರೆ.
ಚಾಮರಾಜನಗರ ಜೆಎಂಎಫ್ಸಿ ನ್ಯಾಯಾಲಯದ ನ್ಯಾಯಾಧೀಶ ಗಣಪತಿ ಗುರುಸಿದ್ದ ಬಾದಾಮಿಯವರು ಜ. 3 ರಂದು ಸಿಇಎನ್ (ಸೈಬರ್, ಎಕಾನಾಮಿಕ್ ಅಂಡ್ ನಾರ್ಕೋಟಿಕ್) ಠಾಣೆಗೆ ದಿಢೀರ್ ಭೇಟಿ ನೀಡಿದ್ದರು.
ಈ ವೇಳೆ ಇನ್ಸ್ಪೆಕ್ಟರ್ ಪೊಲೀಸ್ ಠಾಣೆಯ ಬಾಗಿಲು ಹಾಕಿಕೊಂಡಿದ್ದಾರೆ. ಆಗ ನ್ಯಾಯಾಧೀಶರು ದೂರು ಕೊಡಲು ಬಂದವರು ಏನು ಮಾಡಬೇಕು ಎಂದು ಪ್ರಶ್ನಿಸಿ ಎಸ್ಪಿಗೆ ಪತ್ರ ಬರೆದಿದ್ದರು.
ನ್ಯಾಯಾಧೀಶರ ಪತ್ರಕ್ಕೆ ಕೂಡಲೇ ಕ್ರಮ ತೆಗೆದುಕೊಂಡ ಎಸ್ಪಿ ದಿವ್ಯಾ ಸಾರಾ ಥಾಮಸ್ರವರು ಐಜಿಯ ಅನುಮತಿ ಪಡೆದು ನಂಜಪ್ಪ ಅವರನ್ನು ಅಮಾನತುಗೊಳಿಸಿದ್ದಾರೆ.
- ಚುನಾವಣಾ ಪ್ರಚಾರ ವೇದಿಕೆಯಲ್ಲೇ ಕುಸಿದ ಕೇಂದ್ರ ಸಚಿವ ಗಡ್ಕರಿ
- ರಾಹುಲ್ ಗಾಂಧಿ ‘ಪ್ರಧಾನಿಯಾಗಲು’ ಮೋದಿಗಿಂತ ಸಮರ್ಥರು : CM ಸಿದ್ದರಾಮಯ್ಯ
- 22 ಕೆಜಿ ಚಿನ್ನ, 6 ಕೋಟಿ ಮೌಲ್ಯದ ವಜ್ರ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ಜಪ್ತಿ
- ಇಂದು ಕೆ.ಪಿ. ನಂಜುಂಡಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ
- ರಾಜಕೀಯ ಸ್ವಾರ್ಥಕ್ಕಾಗಿ ನೆರೆ ರಾಜ್ಯಕ್ಕೆ ಕಾವೇರಿ ನೀರು ಮಾರಿಕೊಂಡ ಕಾಂಗ್ರೆಸ್!