ಬೆಂಗಳೂರಿನ ಚಾಮರಾಜಪೇಟೆ ಮೈದಾನದಲ್ಲಿ ಗಣೇಶೋತ್ಸವ ಅನುಮತಿ ಕೊಡುವ ಬಗ್ಗೆ ಸೂಕ್ತ ಸಮಯದಲ್ಲಿ, ಸೂಕ್ತ ಕಾಲದಲ್ಲಿ, ಸೂಕ್ತ ನಿರ್ಧಾರ ಮಾಡಲಾಗುತ್ತದೆ ಎಂದು ಕಂದಾಯ ಸಚಿವ ಆರ್. ಅಶೋಕ್ ತಿಳಿಸಿದರು.
ವಿಧಾನಸೌಧದಲ್ಲಿ ಮಾತನಾಡಿದ ಸಚಿವ ಅಶೋಕ್ ಅವರು, ಇದೊಂದು ಸೂಕ್ಷ್ಮ ವಿಚಾರವಾಗಿದೆ. ಅನುಮತಿ ಬೇಕು ಅಂತ ಈವರೆಗೂ ನನಗೆ ಯಾವುದೇ ಮನವಿಗಳು ಬಂದಿಲ್ಲ. ಡಿಸಿಗೆ ಮನವಿ ಕೊಟ್ಟಿದ್ದರೆ ಅವರು ಆ ಬಗ್ಗೆ ಸೂಕ್ತ ಸೂಚನೆ ಕೊಡುತ್ತಾರೆ ಎಂದು ತಿಳಿಸಿದರು.
75 ವರ್ಷಗಳ ಬಳಿಕ ಮೊದಲ ಬಾರಿಗೆ ಅಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ ಮಾಡುವ ನಿರ್ಧಾರ ಮಾಡಲಾಯಿತು. ಗಣರಾಜೋತ್ಸವ ಕೂಡಾ ಮಾಡುತ್ತೇವೆ. ಮುಂದೆ ಕನ್ನಡ ರಾಜ್ಯೋತ್ಸವ ಮಾಡಲು ಆದೇಶ ಹೊರಡಿಸುತ್ತೇನೆ ಎಂದು ತಿಳಿಸಿದರು.
ಗಣೇಶೋತ್ಸವದ ಬಗ್ಗೆ ನಾನು ಕೂಡ ಗಂಭೀರವಾಗಿ ಆಲೋಚನೆ ಮಾಡುತ್ತಿದ್ದೇನೆ. ಕಾನೂನು ಸುವ್ಯವಸ್ಥೆ ಬಹಳ ಪ್ರಮುಖ. ಗಣೇಶ ಕೂರಿಸುವ ಸಂಬಂಧ ಇಂದು ಪೊಲೀಸರು, ಬಿಬಿಎಂಪಿ ಅಧಿಕಾರಿಗಳು ಸಭೆ ಮಾಡ್ತಿದ್ದಾರೆ. ಚಾಮರಾಜಪೇಟೆ ಗಣೇಶೋತ್ಸವ ವಿಚಾರ ಗಂಭೀರವಾಗಿ ಚಿಂತನೆ ಮಾಡಬೇಕಿದೆ ಎಂದರು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ




More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು