Karnataka

ಚಾಮರಾಜಪೇಟೆ ಮೈದಾನ ವಿವಾದ: ಹೈಕೋರ್ಟ್ ಮೆಟ್ಟಿಲೇರಿದ ವಕ್ಫ್​ ಮಂಡಳಿ

ಬೆಂಗಳೂರಿನ ಚಾಮರಾಜಪೇಟೆ ಆಟದ ಮೈದಾನದ ವಿವಾದ ಮತ್ತೊಂದು ಸ್ವರೂಪ ಪಡೆದುಕೊಂಡಿದೆ.

ರಾಜ್ಯ ವಕ್ಫ್ ಬೋರ್ಡ್, ಬಿಬಿಎಂಪಿ ಆದೇಶವನ್ನು ಪ್ರಶ್ನಿಸಿ ಹೈಕೋರ್ಟ್​ ಮೆಟ್ಟಿಲೇರಿದೆ.ಇದನ್ನು ಓದಿ –ರಾಜ್ಯ ಸರ್ಕಾರ ವಿವಿಧ ಟ್ರಸ್ಟ್, ಪ್ರತಿಷ್ಠಾನಗಳಿಗೆ ನೂತನ ಅಧ್ಯಕ್ಷ ಹಾಗೂ ಸದಸ್ಯರುಗಳನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ .

ಬಿಬಿಎಂಪಿ ಪಾಲಿಕೆ ಆಯುಕ್ತರು ಮಾಡಿರುವ ಆದೇಶವನ್ನು ಪ್ರಶ್ನಿಸಿರುವ ವಕ್ಫ್ ಬೋರ್ಡ್, ಜಂಟಿ ಆಯುಕ್ತರಿಗೆ ಮಾಲೀಕತ್ವ ಕುರಿತು ನಿರ್ಧಾರಗಳನ್ನು ತೆಗೆದುಕೊಳ್ಳುವ ಯಾವುದೇ ಅಧಿಕಾರ ಇಲ್ಲ. ಇದುವರೆಗೂ ಚಾಮರಾಜಪೇಟೆ ಮೈದಾನ ನಮ್ಮ ಸುಪರ್ಧಿಯಲ್ಲಿತ್ತು. ಹೀಗಾಗಿ ಜಂಟಿ ಆಯುಕ್ತರ ಆದೇಶವನ್ನ ರದ್ದು ಮಾಡುವಂತೆ ಕೋರಿ ಅರ್ಜಿಯಲ್ಲಿ ಮನವಿ ಸಲ್ಲಿಸಲಾಗಿದೆ. ನಾಳೆ ಮಧ್ಯಾಹ್ನ 2.30ಕ್ಕೆ ಹೈಕೋರ್ಟ್ ವಿಚಾರಣೆ ನಡೆಸಲಿದೆ.

ಬಿಬಿಎಂಪಿ ಕಾಯ್ದೆ 2020ರ ಕಲಂ 149 ರಂತೆ ಪ್ರಾಪ್ತವಾದ ಅಧಿಕಾರದನ್ವಯ ರಾಜ್ಯ ವಕ್ಫ್​ ಮಂಡಳಿ ಅರ್ಜಿ ಸಲ್ಲಿಸಿತ್ತು. ದಿನಾಂಕ 21-06-2022 ರಂದು ಸಲ್ಲಿಕೆಯಾದ ಅರ್ಜಿಯಲ್ಲಿ ಸರ್ವೇ ಸಂಖ್ಯೆ 40 ಅಳತೆ 2 ಎಕರೆ 5 ಗುಂಟೆ ಸ್ವತ್ತನ್ನು ಕರ್ನಾಟಕ ವಕ್ಫ್​​ ಮಂಡಳಿ ಹೆಸರಿಗೆ ಖಾತೆಯನ್ನು ಇಂಡೀಕರಣ ಮಾಡಲು ಸೂಚಿಸಿತ್ತು. ಈ ಅರ್ಜಿಯನ್ನು ವಜಾ ಮಾಡಲಾಗಿದೆ.

ಸದರಿ ಆಸ್ತಿ ಕರ್ನಾಟಕ ಸರ್ಕಾರದ ಕಂದಾಯ ಇಲಾಖೆಗೆ ಸೇರಿದೆ ಎಂದು ಪರಿಗಣಿಸಲಾಗಿದೆ. ಅರ್ಜಿದಾರರು (ವಕ್ಫ್​ ಮಂಡಳಿ) ಈ ಆಸ್ತಿಯ ಬಗ್ಗೆ ಹಕ್ಕನ್ನು ಸ್ಥಾಪಿಸಬೇಕಾದ್ದಲ್ಲಿ ಕರ್ನಾಟಕ ಸರ್ಕಾರದ ಕಂದಾಯ ಇಲಾಖೆಯೊಂದಿಗೆ ವ್ಯವಹರಿಸುವ ಹಕ್ಕಿಗೆ ಈ ಆದೇಶ ಯಾವ ರೀತಿಯಿಂದಲೂ ಭಾಗವಾಗಿಲ್ಲ ಎಂದು ನಿರ್ಣಯಿಸಲಾಗಿದೆ. ಬಿಬಿಎಂಪಿ ದಾಖಲೆಗಳಲ್ಲಿ ಈ ಆಸ್ತಿಯನ್ನು ರಾಜ್ಯ ಸರ್ಕಾರದ ಕಂದಾಯ ಇಲಾಖೆ ಎಂದು ನಮೂದಿಸಲು ಸೂಚಿಸಲಾಗಿದೆ.

Team Newsnap
Leave a Comment

Recent Posts

ಮಂಡ್ಯ : ಭಾರಿ ಮಳೆಗೆ ಕಾರಿನ ಮೇಲೆ ಮರ ಬಿದ್ದು ವ್ಯಕ್ತಿ ದುರ್ಮರಣ

ಮಂಡ್ಯ :ನೆನ್ನೆ ಮಳೆಯಿಂದಾಗಿ ಮರವೊಂದು ಕಾರಿನ ಮೇಲೆ ಬಿದ್ದ ಪರಿಣಾಮ ವ್ಯಕ್ತಿಯೊಬ್ಬ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮಂಡ್ಯ ನಗರದ ಜನರಲ್… Read More

May 7, 2024

ಕರ್ತವ್ಯಕ್ಕೆ ತೆರಳುತ್ತಿದ್ದ ಚುನಾವಣಾ ಸಿಬ್ಬಂದಿ ಹೃದಯಾಘಾತದಿಂದ ಸಾವು

ಬಾಗಲಕೋಟೆ : ಬಾಗಲಕೋಟೆ ಜಿಲ್ಲೆಯಲ್ಲಿ ಚುನಾವಣಾ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ಸಿಬ್ಬಂದಿಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ. ಗೋವಿಂದಪ್ಪ ಸಿದ್ದಾಪುರ ಎಂಬುವರು… Read More

May 6, 2024

ಪೋಷಕರ ಕಣ್ಣೆದುರೇ ಮಕ್ಕಳು ನೀರುಪಾಲು

ಮಂಗಳೂರು : ಬಂಟ್ವಾಳದ (Bantwal) ನಾವೂರಿನಲ್ಲಿ ಪೋಷಕರ ಎದುರೇ ಇಬ್ಬರು ಮಕ್ಕಳು ನೀರುಪಾಲಾದ ಘಟನೆ ನಡೆದಿದೆ. ಅನ್ಸಾರ್ ಅವರ ಪುತ್ರಿ… Read More

May 6, 2024

ಪ್ರೀತಿಯೆಂದರೆ…. ಇಷ್ಟೇನಾ

(ಬ್ಯಾಂಕರ್ಸ್ ಡೈರಿ) -ಡಾ. ಶುಭಶ್ರೀಪ್ರಸಾದ್ ಮಂಡ್ಯ ಅಂದೂ ಎಂದಿನಂತೆಯೇ ಬ್ಯಾಂಕಿನಲ್ಲಿ ವಿಪರೀತ ರಶ್ಶು. ಆ ಹುಡುಗಿ ಹೊಸ ಖಾತೆ ತೆರೆಯಲು… Read More

May 6, 2024

ಹಾಸನ ಅಶ್ಲೀಲ ವಿಡಿಯೋಗಳನ್ನು ಹಂಚುವುದು ಶಿಕ್ಷಾರ್ಹ ಅಪರಾಧ: ಎಸ್‌ಐಟಿ

ಬೆಂಗಳೂರು : ವಿಶೇಷ ತನಿಖಾ ತಂಡ (SIT) ಮುಖ್ಯಸ್ಥ ಬಿ.ಕೆ.ಸಿಂಗ್ , ಹಾಸನದ ಅಶ್ಲೀಲ ಮತ್ತು ಶೋಷಣೆ ಪ್ರಕರಣಕ್ಕೆ ಸಂಬಂಧಿಸಿದಂತೆ… Read More

May 6, 2024

ಕುಸ್ತಿಪಟು ಭಜರಂಗ್ ಪುನಿಯಾ ನಾಡಾದಿಂದ ಅಮಾನತು

ನವದೆಹಲಿ: ಕುಸ್ತಿಪಟು ಭಜರಂಗ್ ಪುನಿಯಾ ( Bajrang Punia) ಅವರನ್ನು ರಾಷ್ಟ್ರೀಯ ಉದ್ದೀಪನ ಮದ್ದು ತಡೆ ಸಂಸ್ಥೆ (NADA )… Read More

May 5, 2024