Main News

ಚಂದ್ರಶೇಖರ ಗುರೂಜಿ ಮೂಲ ಬಾಗಲಕೋಟೆ, ವಾಸ ಮುಂಬೈ – ಸಾವಿರಾರು ಕೋಟಿ ಒಡೆಯನ ಅಂತ್ಯಕ್ರಿಯೆ ಇಂದು

ದೇಶಾದ್ಯಂತ ಸರಳ ವಾಸ್ತು ಬಗ್ಗೆ ಸಲಹೆ ನೀಡುತ್ತಿದ್ದ ಗುರೂಜಿ ಬಾಗಲಕೋಟೆ ಮೂಲದವರು. ಮುಂಬೈ ನಲ್ಲಿ ವಾಸವಾಗಿದ್ದರು. ಮುಂಬೈ, ಬೆಂಗಳೂರು, ಹುಬ್ಬಳ್ಳಿ ಸೇರಿದಂತೆ ಹಲವೆಡೆ ಕಚೇರಿ ಸ್ಥಾಪಿಸಿದ ಸಾವಿರಾರು ಕೋಟಿ ರು ಆಸ್ತಿ ಒಡೆಯ ಚಂದ್ರಶೇಖರ್ ಗುರೂಜಿಯ ಅಂತ್ಯ ಕ್ರಿಯೆ ಇಂದು ಮಧ್ಯಾಹ್ನ ಹುಬ್ಬಳ್ಳಿ ಬಳಿ ನಡೆಯಲಿದೆ.

ಚಂದ್ರಶೇಖರ ಗುರೂಜಿ ಅವರು ಬಾಗಲಕೋಟೆ ಮೂಲದವರು. ಇವರ ಮೊದಲ ಹೆಸರು ಚಂದ್ರಶೇಖರ ವಿರುಪಾಕ್ಷಪ್ಪ ಅಂಗಡಿ. ಬಾಗಲಕೋಟೆಯಲ್ಲೇ ವಿದ್ಯಾಭ್ಯಾಸ ಮಾಡಿದ್ದ ಇವರು ಬಾಗಲಕೋಟೆ ಬಸವೇಶ್ವರ ಇಂಜನಿಯರಿಂಗ್ ಕಾಲೇಜಿನಲ್ಲಿ BE Civil ವಿಭಾಗದಲ್ಲಿ ಪದವಿ ಪಡೆದರು. ಬಳಿಕ 1998ರಲ್ಲಿ ಮುಂಬೈಗೆ ತೆರಳಿ ಕಾಂಟ್ರಾಕ್ಟರ್ ಆಗಿ ವೃತ್ತಿ ಜೀವನ ಆರಂಭಿಸಿದ್ದರು.

ಐದಾರು ವರ್ಷಗಳ ಬಳಿಕ ಸಿಂಗಾಪುರಕ್ಕೆ ತೆರಳಿದ ಚಂದ್ರಶೇಖರ ಅವರು ವಾಸ್ತು ಶಾಸ್ತ್ರ ಕಲಿತರು. ವಾಪಸ್​ ಮುಂಬೈಗೆ ಆಗಮಿಸಿ ‘ಸರಳ ವಾಸ್ತು’ ಹೆಸರಿನಲ್ಲಿ ಕಚೇರಿ ಆರಂಭಿಸಿದ್ದರು.

ಚಂದ್ರಶೇಖರ ಗುರೂಜಿ ಅವರಿಗೆ ಇಬ್ಬರು ಸಹೋದರರು, ಮೂವರು ಸಹೋದರಿಯರು. ಮೊದಲ ಪತ್ನಿಯ ನಿಧನದ ಬಳಿಕ ಶಿವಮೊಗ್ಗ ಜಿಲ್ಲೆ ಮಂಡಗದ್ದೆ ಸಮೀಪದ ಹೆಮ್ಮಕ್ಕಿ ಗ್ರಾಮದ ಅಂಕಿತಾ ಎಂಬುವರನ್ನು ಎರಡನೇ ಮದುವೆಯಾದರು. ಪುತ್ರಿ ಅಂಕಿತಾ ಬೆಂಗಳೂರಿನಲ್ಲಿ ನೆಲೆಸಿದ್ದಾರೆ.

ಬಾಗಲಕೋಟೆ ಬಿಟ್ಟು 30 ವರ್ಷ ಆಗಿತ್ತು. ಅಪರೂಪಕ್ಕೊಮ್ಮೆ ತವರು ಜಿಲ್ಲೆಗೆ ಬರುತ್ತಿದ್ದ ಚಂದ್ರಶೇಖರ ಗುರೂಜಿ, ಹೆಚ್ಚಾಗಿ ಮುಂಬೈನಲ್ಲೇ ನೆಲೆಸಿದ್ದರು. ಸಾವಿರಾರು ಕೋಟಿ ಆಸ್ತಿ ಒಡೆಯರಾಗಿದ್ದ ಚಂದ್ರಶೇಖರ ಗುರೂಜಿ, ನೂರಾರು ಜನರಿಗೆ ಉದ್ಯೋಗವನ್ನು ನೀಡಿದ್ದರು.

ಚಂದ್ರಶೇಖರ ಗುರೂಜಿ ಅವರು 2 ದಿನದ ಹಿಂದೆ ಹುಬ್ಬಳ್ಳಿಗೆ ಆಗಮಿಸಿದ್ದರು. ನಾಲ್ಕು ದಿನದ ಮಟ್ಟಿಗೆ ಪ್ರೆಸಿಡೆಂಟ್​ ಹೋಟೆಲ್​ನಲ್ಲಿ 220ನೇ ನಂಬರ್​ನ ರೂಮ್​ ಪಡೆದಿದ್ದರು.

ಗುರುವನ್ನೇ ಹತ್ಯೆ ಮಾಡಿದ ಇಬ್ಬರು ಪಾಪಿಗಳನ್ನು ಪೋಲಿಸರು ಬಂಧಿಸಿದ್ದೇ ರೋಚಕ ಕಥೆ

ಈ ದಿನ ಬುಧವಾರ ರೂಮ್​ ನ್ನು ಚಕೌಟ್ ಮಾಡಬೇಕಿತ್ತು. ಅಷ್ಟರಲ್ಲಿ ನಿನ್ನೆ ಮಧ್ಯಾಹ್ನ ಭಕ್ತರ ಸೋಗಲ್ಲಿ ಬಂದ ಯುವಕರಿಬ್ಬರು ಹೋಟೆಲ್​ನ ರಿಸೆಪ್ಶನ್​ನಲ್ಲೇ ಗುರೂಜಿ ಅವರನ್ನ 60ಕ್ಕೂ ಹೆಚ್ಚು ಬಾರಿ ಚಾಕುವಿನಿಂದ ಚುಚ್ಚಿ ಕೊಂದು ಪರಾರಿಯಾದ ಇಬ್ಬರು ಆರೋಪಿಗಳನ್ನು ಬೆಳಗಾವಿಯ ರಾಮದುರ್ಗದಲ್ಲಿ ಪೊಲೀಸರು ಬಂಧಿಸಿದ್ದಾರೆ.

Team Newsnap
Leave a Comment
Share
Published by
Team Newsnap

Recent Posts

2024ರ ಟಿ20 ವಿಶ್ವಕಪ್ ಟೂರ್ನಿಗೆ ಭಾರತ ತಂಡ ಪ್ರಕಟ

ನವದೆಹಲಿ : ಟೀಂ ಇಂಡಿಯಾ ಮುಂಬರುವ ಟಿ20 ವಿಶ್ವಕಪ್‍ಗಾಗಿ 15 ಮಂದಿ ಆಟಗಾರರ ತಂಡವನ್ನು ಪ್ರಕಟಿಸಿದೆ. ಇಂದು ಭಾರತೀಯ ಕ್ರಿಕೆಟ್… Read More

April 30, 2024

ಅಧಿಕೃತವಾಗಿ ಪ್ರಜ್ವಲ್ ರೇವಣ್ಣ ಜೆಡಿಎಸ್ ಪಕ್ಷದಿಂದ ಅಮಾನತು

ಹುಬ್ಬಳ್ಳಿ : ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣದ ಬಳಿಕ ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣರನ್ನು ಅಮಾನತು ಮಾಡಿ ಜೆಡಿಎಸ್… Read More

April 30, 2024

ನಾಳೆಯಿಂದ 14 ಕ್ಷೇತ್ರಗಳಲ್ಲಿ 2ನೇ ಹಂತದ ಅಂಚೆ ಮತದಾನ

ಬೆಂಗಳೂರು : ರಾಜ್ಯದ ಎರಡನೇ ಹಂತದ ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಗತ್ಯ ಸೇವೆಗಳ ಇಲಾಖೆಗಳ ಸಿಬ್ಬಂದಿಗೆ ನಾಳೆಯಿಂದ 3 ದಿನಗಳ… Read More

April 30, 2024

SSLC ಪರೀಕ್ಷೆ : ಮೇ.10ರಂದು ಫಲಿತಾಂಶ ಪ್ರಕಟ

ಬೆಂಗಳೂರು : ಮೇ 10ರಂದು - ಪ್ರಸಕ್ತ ಸಾಲಿನ SSLC ಪರೀಕ್ಷೆಯ ಫಲಿತಾಂಶ ಪ್ರಕಟಿಸಲು ಇಲಾಖೆ ಎಲ್ಲಾ ರೀತಿಯ ಸಿದ್ದತೆಗಳನ್ನು… Read More

April 30, 2024

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಏಪ್ರಿಲ್ 30 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 66,550 ರೂಪಾಯಿ ದಾಖಲಾಗಿದೆ. 24… Read More

April 30, 2024

5 ವಿದ್ಯಾರ್ಥಿಗಳ ಕಾವೇರಿ ನದಿಯಲ್ಲಿ ಮುಳುಗಿ ದುರ್ಮರಣ

ರಾಮನಗರ : ಮೇಕೆದಾಟು (Mekedatu) ಬಳಿಯ ಸಂಗಮದ ಕಾವೇರಿ ನದಿಯಲ್ಲಿ ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರು ಪಾಲಾದ ಘಟನೆ… Read More

April 29, 2024