ಕನ್ನಡ ಚಿತ್ರರಂಗದ ಹಿರಿಯ ನಿರ್ಮಾಪಕ ಚಂದ್ರಶೇಖರ್ ನಿಧನರಾದರು. ಒಂದೇ ವಾರದಲ್ಲಿ ಇಬ್ಬರು ನಿರ್ಮಾಪಕರನ್ನು ಕನ್ನಡ ಚಿತ್ರರಂಗದ ಕಳೆದು ಕೊಂಡಂತಾಗಿದೆ.
23 ದಿನಗಳ ಹಿಂದೆ ಚಂದ್ರಶೇಖರ್ ಅವರಿಗೆ ಕೊರೊನಾ ಸೋಂಕು ತಗುಲಿತ್ತು. ಈ ಹಿನ್ನೆಲೆ ಅವರನ್ನು ಮಣಿಪಾಲ್ ಸೆಂಟರ್ಗೆ ದಾಖಲು ಮಾಡಲಾಗಿತ್ತು. ಕೋವಿಡ್ ವಾಸಿಯಾಗಿತ್ತು. , ಇದ್ದಕ್ಕಿದ್ದಂತೆ ಶ್ವಾಸಕೋಶದ ಸಮಸ್ಯೆ ಉಲ್ಬಣಗೊಂಡು ಕಳೆದ ರಾತ್ರಿ 11 ಗಂಟೆ ವೇಳೆಗೆ ಕೊನೆಯುಸಿರೆಳೆದರು.
ನಿಮಿಷಾಂಬ ಪ್ರೊಡಕ್ಷನ್ಸ್ನ ನಿರ್ಮಾಪಕ ಚಂದ್ರಶೇಖರ್, ರವಿಚಂದ್ರನ್ ಅಭಿನಯದ ಅಣ್ಣಯ್ಯ, ಪುನೀತ್ ರಾಜ್ಕುಮಾರ್ ಅಭಿನಯದ ಬಿಂದಾಸ್, ಕಿಚ್ಚ ಸುದೀಪ್ರ ರನ್ನ, ಏನೋ ಒಂಥರಾ.. ಸಿನಿಮಾಗಳನ್ನು ನಿರ್ಮಿಸಿದ್ದರು.
ಇತ್ತೀಚೆಗಷ್ಟೇ ಮಂಜು ಮಾಂಡವ್ಯ ನಿರ್ದೇಶನದಲ್ಲಿ ಉಪೇಂದ್ರ ನಟನೆಯ ಸಿನಿಮಾವೊಂದನ್ನು ನಿರ್ಮಿಸುವ ಪ್ರಕಟನೆ ಮಾಡಿದ್ದರು.
- ಪ್ರಜ್ವಲ್ ಕೇಸನ್ನು ನಾವು ಯಾರು ಬೆಂಬಲಿಸಿಲ್ಲ, ತಪ್ಪು ಮಾಡಿದವರಿಗೆ ಶಿಕ್ಷೆಯಾಗಲಿ : ಬಿ.ವೈ ವಿಜಯೇಂದ್ರ
- ಶಕುನಿ ಪಾತ್ರಧಾರಿ ವೇದಿಕೆಯ ಮೇಲೆಯೇ ಕುಸಿದು ಬಿದ್ದು ಸಾವು
- ಬಿಜೆಪಿಯವರು ಏಕೆ ಪ್ರಜ್ವಲ್ ರೇವಣ್ಣ ಕೇಸ್ ಬಗ್ಗೆ ಮಾತನಾಡುತ್ತಿಲ್ಲ ?ಡಿ.ಕೆ.ಶಿವಕುಮಾರ್
- ರೇವಣ್ಣ ಅಪಹರಣ ಕೇಸ್ : ಎಸ್ಐಟಿ ವಿಶೇಷ ತಂಡದಿಂದ 40 ಕಡೆ ರೇಡ್
- ಕ್ರೇಜಿವಾಲ್ ಗೆ ಮಧ್ಯಂತರ ಜಾಮೀನು ಪರಿಗಣನೆಗೆ ಸುಪ್ರೀಂ ಸೂಚನೆ