ಚನ್ನಪಟ್ಟಣ: ಕಾಲೇಜಿನ ಬಾತ್ ರೂಂನಲ್ಲಿ ನೇಣುಬಿಗಿದುಕೊಂಡು ವಿದ್ಯಾರ್ಥಿ ಆತ್ಮಹತ್ಯೆ

Team Newsnap
0 Min Read

ವಿದ್ಯಾರ್ಥಿಯೊಬ್ಬ ಕಾಲೇಜಿನಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಚನ್ನಪಟ್ಟಣ ತಾಲೂಕಿನ ಬೆಳಕೆರೆ ಗ್ರಾಮದಲ್ಲಿ ಜರುಗಿದೆ.

ಮೃತ ವಿದ್ಯಾರ್ಥಿಯನ್ನು ವೆಂಕಟ ಚೈತನ್ಯ ರೆಡ್ಡಿ (22) ಎಂದು ಗೊತ್ತಾಗಿದೆ.

ಈತ ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಬೆಳಕೆರೆ ಗ್ರಾಮದಲ್ಲಿರುವ ಸಂಪೂರ್ಣ ಕಾಲೇಜಿನ ಬಾತ್ ರೂಮಿನ ಕಿಟಕಿಯಲ್ಲಿದ್ದ ತಂತಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ರೆಡ್ಡಿ ಬಿಎಸ್‍ಸಿ ಅಂತಿಮ ವರ್ಷದಲ್ಲಿ ವ್ಯಾಸಂಗ ಮಾಡುತ್ತಿದ್ದ. ಮೂಲತಃ ಆಂಧ್ರಪ್ರದೇಶದ ಕಡಪಾ ಜಿಲ್ಲೆಯ ಮೈದುಕೂರು ಗ್ರಾಮದ ನಿವಾಸಿ ಶ್ರೀನಿವಾಸರೆಡ್ಡಿ ಪುತ್ರ. ಆತ್ಮಹತ್ಯೆಗೆ ಕಾರಣವೆನೆಂದು ತಿಳಿದುಬಂದಿಲ್ಲ. ಚನ್ನಪಟ್ಟಣ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿಕೊಂಡು ಮಾಡಿಕೊಂಡು ತನಿಖೆ ಮಾಡುತ್ತಿದ್ದಾರೆ.

Share This Article
Leave a comment