Karnataka

ಸಮನ್ವಯ ಕವಿ, ನಾಡೋಜ ಚೆನ್ನವೀರ ಕಣವಿ ಇನ್ನಿಲ್ಲ

ಕನ್ನಡ ಸಾಹಿತ್ಯ ಲೋಕದ ಸಮನ್ವಯ ಕವಿ, ನಾಡೋಜ ಚೆನ್ನವೀರ ಕಣವಿ ಇಂದು ಧಾರವಾಡ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು.

ಕಣವಿ ನಿಧನದ ನಂತರ ಧಾರವಾಡದ ಕಲ್ಯಾಣ ನಗರದ ಅವರ ಚೆಂಬೆಳಕು ನಿವಾಸದಲ್ಲಿ ಈಗ ಕತ್ತಲೆ ಆವರಿಸಿದೆ.

ಕನ್ನಡ ಸಾಹಿತ್ಯ ಲೋಕದ ನವೋದಯ ಮತ್ತು ನವ್ಯ ಸಾಹಿತ್ಯಗಳೆರಡರಲ್ಲಿಯೂ ಸಕ್ರಿಯ ಬರವಣಿಗೆಯಲ್ಲಿ ತೊಡಗಿಸಿಕೊಂಡಿದ್ದರು.

ಧಾರವಾಡ ಜಿಲ್ಲೆಯ ಹೊಂಬಳ ಗ್ರಾಮದಲ್ಲಿ 1928ರ ಜೂನ್ 28ರಂದು ತಂದೆ ಸಕ್ರಪ್ಪ- ತಾಯಿ ಪಾರ್ವತವ್ವ ಪುತ್ರರಾಗಿ ಜನಿಸಿದರು. .

ಶಿರುಂಡ, ಗರಗಗಳಲ್ಲಿ ಪ್ರಾಥಮಿಕ ಅಭ್ಯಾಸ ಮುಗಿಸಿದ ಮೇಲೆ ಧಾರವಾಡದ ಕರ್ನಾಟಕ ಕಾಲೇಜಿನಲ್ಲಿ 1950 ರಲ್ಲಿ ಬಿ.ಎ. ಪದವಿ (1950), ಕರ್ನಾಟಕ ವಿಶ್ವವಿದ್ಯಾಲಯದಿಂದ ಎಂ.ಎ.ಪದವಿ (1952) ಗಳಿಸಿದರು.

ಕರ್ನಾಟಕದ ವಿಶ್ವವಿದ್ಯಾನಿಲಯದ ಪ್ರಸಾರಾಂಗದಲ್ಲಿ ಕಾರ್ಯದರ್ಶಿ (1952) ಯಾಗಿ ಸೇವೆ ಪ್ರಾರಂಭಿಸಿದ ಕಣವಿ ಅನಂತರ 1958ರಲ್ಲಿ ಅದರ ನಿರ್ದೇಶಕರಾದರು.

ಪ್ರಶಸ್ತಿಗಳು:

ಹಲವಾರು ಪ್ರಶಸ್ತಿಗಳು ಕಣವಿ ಅವರ ಸಾಹಿತ್ಯ ಸಾಧನೆಗಾಗಿ ಬಂದಿವೆ. ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ (1981), ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ (1985), ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ (1989), ಭಾರತ ಸರಕಾರದ ಮಾನವ ಸಂಪನ್ಮೂಲ ಇಲಾಖೆಯ ಸಂಸ್ಕೃತಿ ವಿಭಾಗದ ಎಮರಿಟಿಸ್ ಫೆಲೋಷಿಪ್ (1996-98), ಪಂಪ ಪ್ರಶಸ್ತಿ (1999), ಇತ್ಯಾದಿ. 65ನೇ ಕನ್ನಡ ಸಾಹಿತ್ಯ ಸಮ್ಮೇಳನ (1996) ಹಾಸನದಲ್ಲಿ ಕಣವಿ ಸಮ್ಮೇಳನಾಧ್ಯಕ್ಷರಾಗಿದ್ದರು.

ಕಣವಿ ಕೃತಿಗಳು :

ಕಣವಿ ಅವರು ಕವಿತೆ, ವಿಮರ್ಶೆ ಕ್ಷೇತ್ರಗಳಲ್ಲಿ ಸಾಕಷ್ಟು ಕೆಲಸ ಮಾಡಿದ್ದಾರೆ. ಕನ್ನಡ ನಾಡಿನ ಚಳವಳಿಗಳಲ್ಲಿ ಭಾಗವಹಿಸಿದ್ದಾರೆ. ಕಣವಿ ಅವರ ಕಾವ್ಯಸಂಕಲನಗಳಲ್ಲಿ ಕಾವ್ಯಾಕ್ಷಿ, ಭಾವಜೀವಿ, ಆಕಾಶಬುಟ್ಟಿ, ದೀಪಧಾರಿ, ಮೆರವಣಿಗೆ, ಜೀವಧ್ವನಿ, ನಗರದಲ್ಲಿ ನೆರಳು, ಚಿರಂತನದಾಸ ಪ್ರಸಿದ್ಧವಾಗಿವೆ. ಸಾಹಿತ್ಯ ಚಿಂತನ, ಕಾವ್ಯಾನುಸಂಧಾನ, ಸಮಾಹಿತ, ಸಮತೋಲನ ಇತ್ಯಾದಿ ವಿಮರ್ಶಾ ಗ್ರಂಥಗಳು ಜನಪ್ರಿಯವಾಗಿವೆ.

Team Newsnap
Leave a Comment
Share
Published by
Team Newsnap

Recent Posts

ಕರ್ತವ್ಯಕ್ಕೆ ತೆರಳುತ್ತಿದ್ದ ಚುನಾವಣಾ ಸಿಬ್ಬಂದಿ ಹೃದಯಾಘಾತದಿಂದ ಸಾವು

ಬಾಗಲಕೋಟೆ : ಬಾಗಲಕೋಟೆ ಜಿಲ್ಲೆಯಲ್ಲಿ ಚುನಾವಣಾ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ಸಿಬ್ಬಂದಿಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ. ಗೋವಿಂದಪ್ಪ ಸಿದ್ದಾಪುರ ಎಂಬುವರು… Read More

May 6, 2024

ಪೋಷಕರ ಕಣ್ಣೆದುರೇ ಮಕ್ಕಳು ನೀರುಪಾಲು

ಮಂಗಳೂರು : ಬಂಟ್ವಾಳದ (Bantwal) ನಾವೂರಿನಲ್ಲಿ ಪೋಷಕರ ಎದುರೇ ಇಬ್ಬರು ಮಕ್ಕಳು ನೀರುಪಾಲಾದ ಘಟನೆ ನಡೆದಿದೆ. ಅನ್ಸಾರ್ ಅವರ ಪುತ್ರಿ… Read More

May 6, 2024

ಪ್ರೀತಿಯೆಂದರೆ…. ಇಷ್ಟೇನಾ

(ಬ್ಯಾಂಕರ್ಸ್ ಡೈರಿ) -ಡಾ. ಶುಭಶ್ರೀಪ್ರಸಾದ್ ಮಂಡ್ಯ ಅಂದೂ ಎಂದಿನಂತೆಯೇ ಬ್ಯಾಂಕಿನಲ್ಲಿ ವಿಪರೀತ ರಶ್ಶು. ಆ ಹುಡುಗಿ ಹೊಸ ಖಾತೆ ತೆರೆಯಲು… Read More

May 6, 2024

ಹಾಸನ ಅಶ್ಲೀಲ ವಿಡಿಯೋಗಳನ್ನು ಹಂಚುವುದು ಶಿಕ್ಷಾರ್ಹ ಅಪರಾಧ: ಎಸ್‌ಐಟಿ

ಬೆಂಗಳೂರು : ವಿಶೇಷ ತನಿಖಾ ತಂಡ (SIT) ಮುಖ್ಯಸ್ಥ ಬಿ.ಕೆ.ಸಿಂಗ್ , ಹಾಸನದ ಅಶ್ಲೀಲ ಮತ್ತು ಶೋಷಣೆ ಪ್ರಕರಣಕ್ಕೆ ಸಂಬಂಧಿಸಿದಂತೆ… Read More

May 6, 2024

ಕುಸ್ತಿಪಟು ಭಜರಂಗ್ ಪುನಿಯಾ ನಾಡಾದಿಂದ ಅಮಾನತು

ನವದೆಹಲಿ: ಕುಸ್ತಿಪಟು ಭಜರಂಗ್ ಪುನಿಯಾ ( Bajrang Punia) ಅವರನ್ನು ರಾಷ್ಟ್ರೀಯ ಉದ್ದೀಪನ ಮದ್ದು ತಡೆ ಸಂಸ್ಥೆ (NADA )… Read More

May 5, 2024

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಮೇ 5 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,750 ರೂಪಾಯಿ ದಾಖಲಾಗಿದೆ. 24… Read More

May 5, 2024