ಬೆಂಗಳೂರು: ಚೆಕ್ ಬೌನ್ಸ್ ಪ್ರಕರಣದಲ್ಲಿ ಮಾಜಿ ಸಚಿವ ಆರ್ ಎಲ್ ಜಾಲಪ್ಪ ಪುತ್ರ ನರಸಿಂಹಮೂರ್ತಿಗೆ ಕೋರ್ಟ್ ಜೈಲು ಶಿಕ್ಷೆ ವಿಧಿಸಿದೆ.
ಚೆಕ್ ಬೌನ್ಸ್ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಪ್ರಕರಣದ ವಿಚಾರಣೆ ನಡೆಸಿದ್ದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನರಸಿಂಹಮೂರ್ತಿಗೆ 6 ತಿಂಗಳು ಜೈಲು ಶಿಕ್ಷೆ, 20 ಲಕ್ಷ ರೂ. ದಂಡ ವಿಧಿಸಿದೆ.
ಪ್ರಕಾಶ್ ಕುಮಾರ್ ಎಂಬುವವರ ಪುತ್ರಿಗೆ ಸೀಟ್ ಕೊಡಿಸಲು ನರಸಿಂಹಮೂರ್ತಿ 45 ಲಕ್ಷ ರೂ. ಹಣವನ್ನು ಪಡೆದಿದ್ದರು. ಮೆಡಿಕಲ್ ಸೀಟ್ ಸಿಗದ ಕಾರಣ 45 ಲಕ್ಷ ರೂ.ಗೆ ಚೆಕ್ ನೀಡಿದ್ದರು. ಆದರೆ ಈ ಚೆಕ್ ಬೌನ್ಸ್ ಆಗಿತ್ತು. ಮೆಡಿಕಲ್ ಸೀಟ್ ಕೊಡಿಸುವುದಾಗಿ ಹೇಳಿ ವಂಚನೆ ಮಾಡಿದ್ದಕ್ಕೆ ಚೆಕ್ ಬೌನ್ಸ್ ಪ್ರಕರಣ ದಾಖಲಾಗಿತ್ತು.ಬೆ -ಮೈ ಹೆದ್ದಾರಿಯ ಅಪಘಾತ ತಡೆಗೆ ಉನ್ನತ ಮಟ್ಟದ ತಜ್ಞರ ಸಮಿತಿ – ಸಚಿವ ಚೆಲುವರಾಯಸ್ವಾಮಿ
ಶಿಕ್ಷೆ ಪ್ರಮಾಣವನ್ನು ಪ್ರಶ್ನಿಸಿ ಮೇಲ್ಮನವಿ ಸಲ್ಲಿಕೆಗೆ ಕೋರ್ಟ್ 2 ತಿಂಗಳು ಕಾಲಾವಕಾಶ ನೀಡಿದೆ.
- ಇಸ್ರೇಲ್ ರಾಯಭಾರ ಕಚೇರಿ ಸ್ಫೋಟಕ್ಕೆ ಸಂಚು; ಮೈಸೂರಿನಲ್ಲಿ ಶಂಕಿತ ಉಗ್ರನನ್ನು ಬಂಧಿಸಿದ ಎನ್ಐಎ
- ಹುಬ್ಬಳ್ಳಿಯಲ್ಲಿ ಮತ್ತೊಬ್ಬ ಯುವತಿಯ ಭೀಕರ ಹತ್ಯೆ
- ಪಾಕ್ ಆಕ್ರಮಿತ ಕಾಶ್ಮೀರ ಭಾರತಕ್ಕೆ ಸೇರಿದ್ದು : ಅಮಿತ್ ಶಾ
- ಪೆನ್ ಡ್ರೈವ್ ಕೇಸ್: ಹಾಸನದ 18 ಕಡೆಗಳಲ್ಲಿ ಎಸ್ ಐಟಿ ಶೋಧ
- ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India
- ಅಕ್ರಮ ಜಾಹಿರಾತು ಫಲಕ ಕುಸಿತಕ್ಕೆ 14 ಸಾವು, 74 ಜನರು ಗಂಭೀರ