ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ 6.96 ಕೋಟಿ ರೂ. ದಂಡ ವಿಧಿಸಿ ಆದೇಶ ಪ್ರಕಟಿಸಿದೆ. ದಂಡ ಪಾವತಿಸದಿದ್ದರೆ ಜೈಲು ಶಿಕ್ಷೆ ಎಂದು ಆದೇಶದಲ್ಲಿ ತಿಳಿಸಿದೆ.
2011 ರಲ್ಲಿ ಆಕಾಶ್ ಆಡಿಯೋ ಪರವಾಗಿ ರಾಜೇಶ್ ಎಕ್ಸ್ಪೋರ್ಟ್ ಕಂಪನಿಯಿಂದ ಮಧುಬಂಗಾರಪ್ಪ 6.60 ಕೋಟಿ ರೂ. ಸಾಲವನ್ನು ಪಡೆದುಕೊಂಡಿದ್ದರು. ಸಾಲ ಪಡೆಯುವ ಸಂದರ್ಭದಲ್ಲಿ ಮಧು ಬಂಗಾರಪ್ಪ ಚೆಕ್ ನೀಡಿ ಹಣವನ್ನು ಹಿಂದಿರುಗಿಸಿರಲಿಲ್ಲ.
ಮಧು ಬಂಗಾರಪ್ಪ ಅವರು 6.60 ಕೋಟಿ ರೂ. ಮೊತ್ತದಲ್ಲಿ ಕೇವಲ 50 ಲಕ್ಷ ರೂ.ವನ್ನು ಮಾತ್ರ ಮರುಪಾವತಿಸಿ ಉಳಿದ ಮೊತ್ತವನ್ನು ಕೊಟ್ಟಿರಲಿಲ್ಲ. ಈ ನಡುವೆ ನ್ಯಾಯಾಲಯದಲ್ಲಿ ವಿಚಾರಣೆ ಮುಂದುವರಿದಿತ್ತು.
ಸುದೀರ್ಘ ವಿಚಾರಣೆ ಬಳಿಕ ಆದೇಶ ನೀಡಿದ ನ್ಯಾಯಾಲಯ ಮಧು ಬಂಗಾರಪ್ಪ ಅವರಿಗೆ 6,96,70,000 ರೂ. ಹಣವನ್ನು ದಂಡವಾಗಿ ಪಾವತಿಸಬೇಕು. ದಂಡ ಪಾವತಿಸದಿದ್ದರೆ 6 ತಿಂಗಳು ಸೆರೆವಾಸ ಅನುಭವಿಸಲು ಆದೇಶ ನೀಡಿದೆ.
ಆದೇಶದಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಚೆಕ್ ಬೌನ್ಸ್ ಪ್ರಕರಣದಲ್ಲಿ 6 ಕೋಟಿ 96 ಲಕ್ಷದ 70 ಸಾವಿರ ದಂಡವನ್ನು ವಿಧಿಸಿದೆ. ದಂಡದ ಹಣದಲ್ಲಿ 6,96,60,000 ಹಣವನ್ನು ದೂರುದಾರರಿಗೆ ಪರಿಹಾರವಾಗಿ ನೀಡಲು ಆದೇಶಿಸಿದೆ. 10,000 ರೂ. ಸರ್ಕಾರಕ್ಕೆ ದಂಡವಾಗಿ ನೀಡಲು ಆದೇಶವನ್ನು ನೀಡಿದೆ.
2015ರಲ್ಲಿ ಶಿಲ್ಪಾ ಎಂಬುವವರ ಜೊತೆ ಮದುವೆಯಾಗಿದ್ದ ನಟ ಚಂದು ತ್ರಿನಯನಿ ಸೀರಿಯಲ್ನಲ್ಲಿ ಅಭಿನಯಿಸಿದ್ದ ತೆಲುಗು ನಟ ಚಂದು ನಟಿ ಪವಿತ್ರ… Read More
ಬೆಂಗಳೂರು : ಶಿಕ್ಷಣ ಸಚಿವ ಮಧು ಬಂಗಾರಪ್ಪ , ಮುಂದಿನ ವರ್ಷದಿಂದ SSLC ವಿದ್ಯಾರ್ಥಿಗಳಿಗೆ ಗ್ರೇಸ್ ಅಂಕಗಳನ್ನು ನೀಡಲಾಗುವುದಿಲ್ಲ ಎಂದು… Read More
ಬೆಂಗಳೂರು : ಆನೇಕಲ್ ತಾಲೂಕಿನ ಚಂದಾಪುರ ಸಮೀಪದ ಇಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬಳು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಅರಸೀಕೆರೆ ಮೂಲದ ಕರಡಿಹಳ್ಳಿ… Read More
ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಮನವಿ ಮೇರೆಗೆ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಸೌಲಭ್ಯವನ್ನು ಬಜೆಟ್ನಲ್ಲಿ ಘೋಷಣೆ… Read More
ಬೆಂಗಳೂರು : ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್ ಡಿ ರೇವಣ್ಣಗೆ ಮಧ್ಯಂತರ ಜಾಮೀನು ಮಂಜೂರಾಗಿದೆ. ಈ ಪ್ರಕರಣದಲ್ಲಿ… Read More
ಹಾಸನ : ಕೆರೆಯಲ್ಲಿ ಮೀನು ಹಿಡಿಯಲು ಹೋಗಿದ್ದ ನಾಲ್ಕು ಮಕ್ಕಳು ಜಲ ಸಮಾಧಿ ಆದ ಘಟನೆ ಆಲೂರು ತಾಲೂಕಿನ, ತಿಮ್ಮನಹಳ್ಳಿ… Read More
This website uses cookies.
Leave a Comment