ಗಣಿಯೊಂದರಲ್ಲಿ ಸ್ಫೋಟಕಗಳು ಬ್ಲಾಸ್ಟ್ ಆಗಿ ಐವರು ಸಾವನ್ನಪ್ಪಿದ್ದಾರೆ. ಸ್ಪೋಟದ ತೀವ್ರತೆಗೆ ಮೃತದೇಹಗಳೆಲ್ಲಾ ಛಿದ್ರ ಛಿದ್ರವಾಗಿ ನೂರಾರು ಮೀಟರ್ ದೂರದಲ್ಲಿ ಬಿದ್ದಿರುವ ಘಟನೆ ಚಿಕ್ಕಬಳ್ಳಾಪುರ ತಾಲೂಕು ಹಿರೇನಾಗವಲ್ಲಿ ಗ್ರಾಮದ ಬಳಿ ಕಳೆದ ಮಧ್ಯ ರಾತ್ರಿ ಸಂಭವಿಸಿದೆ.

ಈ ದುರಂತದಲ್ಲಿ ಎಂಜಿನಿಯರ್ ಉಮಾಕಾಂತ್, ಸ್ಥಳೀಯ ನಿವಾಸಿ ರಾಮು, ವಾಚ್ಮ್ಯಾನ್ ಮಹೇಶ್, ಕಂಪ್ಯೂಟರ್ ಅಪರೇಟರ್ ಮುರಳಿ ಹಾಗೂ ಗಂಗಾಧರ್ ಧಾರುಣವಾಗಿ ಸಾವನ್ನಪ್ಪಿದ್ದಾರೆ. ಟಾಟಾ ಏಸ್ ಚಾಲಕ ರಿಯಾಜ್ ಎಂಬವರಿಗೆ ಗಂಭೀರ ಗಾಯವಾಗಿದೆ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಶಿವಮೊಗ್ಗದ ಹುಣಸೋಡು ಕ್ರಷರ್ನಲ್ಲಿ ಜಿಲೆಟಿನ್ ಸ್ಫೋಟವಾದ ಪ್ರಕರಣ ಮಾಸುವ ಮುನ್ನವೇ ರಾಜ್ಯದಲ್ಲಿ ಮತ್ತೊಂದು ಅದೇ ರೀತಿಯ ದುರಂತ ನಡೆದಿದೆ.
ಗಣಿ ಮಾಲೀಕರು ಯಾರು ? :
ರಾಘವೇಂದ್ರ ರೆಡ್ಡಿ, ಶಿವಾ ರೆಡ್ಡಿ ಹಾಗೂ ನಾಗರಾಜ್ ಮಾಲೀಕತ್ವದ ಬ್ರಹ್ಮರ ವಾಸಿನಿ ಎಂ ಸ್ಯಾಂಡಲ್ ಪ್ರೈವೇಟೆ ಲಿಮಿಟೆಡ್ ಕ್ರಷರ್ನಲ್ಲಿ ಈ ಘಟನೆ ನಡೆದಿದೆ.

ಫೆ 7 ರಂದು ಇಲ್ಲಿ ಅಕ್ರಮವಾಗಿ ಜಿಲೆಟಿನ್ ದಾಸ್ತಾನು ಮಾಡಿದ್ದ ಹಿನ್ನೆಲೆ ಸೀಜ್ ಮಾಡಲಾಗಿತ್ತು. ನಿನ್ನೆ ಸಂಜೆ ಪೊಲೀಸ್ ಅಧಿಕಾರಿಗಳು ಪರಿಶೀಲನೆ ನಡೆಸಿದ್ದರು.
ಪೊಲೀಸರ ಕಣ್ಣಿಗೆ ಬೀಳದಂತೆ ದೂರದ ಬೆಟ್ಟದಲ್ಲಿ ಜಿಲೆಟಿನ್ ಸಂಗ್ರಹ ಮಾಡಲು ತೆರಳಿದ್ದರು.
ಈ ವೇಳೆ ರಾತ್ರಿ 12.30 ವೇಳೆಗೆ ಕ್ರಷರ್ನಿಂದ 1 ಕಿಲೋ ಮೀಟರ್ ದೂರದ ಬೆಟ್ಟ ಪ್ರದೇಶದಲ್ಲಿ ಸ್ಫೋಟವಾಗಿದೆ ಎಂದು ತಿಳಿದುಬಂದಿದೆ.
ಘಟನಾ ಸ್ಥಳಕ್ಕೆ ಜಿಲ್ಲಾ ವರಿಷ್ಠಾಧಿಕಾರಿ ಜಿ.ಕೆ ಮಿಥುನ್ ಕುಮಾರ್ ಮತ್ತು ಜಿಲ್ಲಾಧಿಕಾರಿ ಲತಾ ಆರ್. ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು