ಗಣಿಯೊಂದರಲ್ಲಿ ಸ್ಫೋಟಕಗಳು ಬ್ಲಾಸ್ಟ್ ಆಗಿ ಐವರು ಸಾವನ್ನಪ್ಪಿದ್ದಾರೆ. ಸ್ಪೋಟದ ತೀವ್ರತೆಗೆ ಮೃತದೇಹಗಳೆಲ್ಲಾ ಛಿದ್ರ ಛಿದ್ರವಾಗಿ ನೂರಾರು ಮೀಟರ್ ದೂರದಲ್ಲಿ ಬಿದ್ದಿರುವ ಘಟನೆ ಚಿಕ್ಕಬಳ್ಳಾಪುರ ತಾಲೂಕು ಹಿರೇನಾಗವಲ್ಲಿ ಗ್ರಾಮದ ಬಳಿ ಕಳೆದ ಮಧ್ಯ ರಾತ್ರಿ ಸಂಭವಿಸಿದೆ.
ಈ ದುರಂತದಲ್ಲಿ ಎಂಜಿನಿಯರ್ ಉಮಾಕಾಂತ್, ಸ್ಥಳೀಯ ನಿವಾಸಿ ರಾಮು, ವಾಚ್ಮ್ಯಾನ್ ಮಹೇಶ್, ಕಂಪ್ಯೂಟರ್ ಅಪರೇಟರ್ ಮುರಳಿ ಹಾಗೂ ಗಂಗಾಧರ್ ಧಾರುಣವಾಗಿ ಸಾವನ್ನಪ್ಪಿದ್ದಾರೆ. ಟಾಟಾ ಏಸ್ ಚಾಲಕ ರಿಯಾಜ್ ಎಂಬವರಿಗೆ ಗಂಭೀರ ಗಾಯವಾಗಿದೆ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಶಿವಮೊಗ್ಗದ ಹುಣಸೋಡು ಕ್ರಷರ್ನಲ್ಲಿ ಜಿಲೆಟಿನ್ ಸ್ಫೋಟವಾದ ಪ್ರಕರಣ ಮಾಸುವ ಮುನ್ನವೇ ರಾಜ್ಯದಲ್ಲಿ ಮತ್ತೊಂದು ಅದೇ ರೀತಿಯ ದುರಂತ ನಡೆದಿದೆ.
ಗಣಿ ಮಾಲೀಕರು ಯಾರು ? :
ರಾಘವೇಂದ್ರ ರೆಡ್ಡಿ, ಶಿವಾ ರೆಡ್ಡಿ ಹಾಗೂ ನಾಗರಾಜ್ ಮಾಲೀಕತ್ವದ ಬ್ರಹ್ಮರ ವಾಸಿನಿ ಎಂ ಸ್ಯಾಂಡಲ್ ಪ್ರೈವೇಟೆ ಲಿಮಿಟೆಡ್ ಕ್ರಷರ್ನಲ್ಲಿ ಈ ಘಟನೆ ನಡೆದಿದೆ.
ಫೆ 7 ರಂದು ಇಲ್ಲಿ ಅಕ್ರಮವಾಗಿ ಜಿಲೆಟಿನ್ ದಾಸ್ತಾನು ಮಾಡಿದ್ದ ಹಿನ್ನೆಲೆ ಸೀಜ್ ಮಾಡಲಾಗಿತ್ತು. ನಿನ್ನೆ ಸಂಜೆ ಪೊಲೀಸ್ ಅಧಿಕಾರಿಗಳು ಪರಿಶೀಲನೆ ನಡೆಸಿದ್ದರು.
ಪೊಲೀಸರ ಕಣ್ಣಿಗೆ ಬೀಳದಂತೆ ದೂರದ ಬೆಟ್ಟದಲ್ಲಿ ಜಿಲೆಟಿನ್ ಸಂಗ್ರಹ ಮಾಡಲು ತೆರಳಿದ್ದರು.
ಈ ವೇಳೆ ರಾತ್ರಿ 12.30 ವೇಳೆಗೆ ಕ್ರಷರ್ನಿಂದ 1 ಕಿಲೋ ಮೀಟರ್ ದೂರದ ಬೆಟ್ಟ ಪ್ರದೇಶದಲ್ಲಿ ಸ್ಫೋಟವಾಗಿದೆ ಎಂದು ತಿಳಿದುಬಂದಿದೆ.
ಘಟನಾ ಸ್ಥಳಕ್ಕೆ ಜಿಲ್ಲಾ ವರಿಷ್ಠಾಧಿಕಾರಿ ಜಿ.ಕೆ ಮಿಥುನ್ ಕುಮಾರ್ ಮತ್ತು ಜಿಲ್ಲಾಧಿಕಾರಿ ಲತಾ ಆರ್. ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಶ್ರೀರಂಗಪಟ್ಟಣ : ಅಕ್ಟೋಬರ್ 4 ರಿಂದ 7 ವರೆಗೆ ವಿಜೃಂಭಣೆಯಿಂದ ಶ್ರೀರಂಗಪಟ್ಟಣ ಆಚರಿಸಲಾಗುವುದು ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ… Read More
ಆಂಧ್ರಪ್ರದೇಶ: ಹಿಂದಿನ ಸರ್ಕಾರ ತಿರುಪತಿ ಲಡ್ಡುವನ್ನು ತುಪ್ಪದ ಬದಲು ಪ್ರಾಣಿಗಳ ಕೊಬ್ಬಿನಿಂದ ತಯಾರಿಸಲಾಗಿದೆ ಎಂದು ಆಂಧ್ರಪ್ರದೇಶ ಸಿಎಂ ಚಂದ್ರಬಾಬು ನಾಯ್ಡು… Read More
ಬೆಂಗಳೂರು: ಜೆಪಿ ಶಾಸಕ ಮುನಿರತ್ನವಿರುದ್ಧ ಮತ್ತೊಂದು ಕೇಸ್ ದಾಖಲಾಗಿದ್ದು , ಇದೀಗ ಶಾಸಕನ ವಿರುದ್ಧ ಅತ್ಯಾಚಾರ ಕೇಸ್ ದಾಖಲಾಗಿದೆ. ಶಾಸಕ… Read More
ಬೆಂಗಳೂರು: ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ ಬಿಎಂಟಿಸಿ ಬಸ್ ಅಪಘಾತಕ್ಕೆ ವಿಶೇಷ ಚೇತನ ಬಲಿಯಾಗಿರುವ ಘಟನೆ ನಡೆದಿದೆ. ಬಿಎಂಟಿಸಿ ಬಸ್ ಯಶವಂತಪುರದಿಂದ… Read More
ನವದೆಹಲಿ ,ಸೆಪ್ಟೆಂಬರ್ 18 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 68,640 ರೂಪಾಯಿ ದಾಖಲಾಗಿದೆ. 24… Read More
ಬೆಂಗಳೂರು: ಸೆ.19ರಿಂದ ಮ ಆಡಳಿತಾಧಿಕಾರಿ ಮತ್ತು ಜಿಟಿಟಿಸಿಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮತ್ತೊಮ್ಮೆ ಅವಕಾಶ ನೀಡಲಾಗಿದೆ ಎಂದು ಕೆಇಎ ಕಾರ್ಯನಿರ್ವಾಹಕ… Read More
This website uses cookies.
Leave a Comment