Main News

ಚಿಕ್ಕಬಳ್ಳಾಪುರ ಗಣಿ ಸ್ಫೋಟ: ತಪ್ಪಿತಸ್ಥರು ಯಾರೇ ಇದ್ದರೂ ಉಗ್ರ ಕ್ರಮ – ಸಚಿವ ಡಾ. ಸುಧಾಕರ್

ಚಿಕ್ಕಬಳ್ಳಾಪುರ ಜಿಲ್ಲೆಯ ಹಿರೇನಾಗವಲ್ಲಿ ಬಳಿ ನಡೆದಿರುವ ಗಣಿಸ್ಫೋಟ ದುರಂತ ಸ್ಥಳಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಡಾ. ಕೆ ಸುಧಾಕರ್, ಅಧಿಕಾರಿಗಳ ತಂಡದೊಂದಿಗೆ ಮಂಗಳವಾರ ಬೆಳಿಗ್ಗೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಘಟನೆ ಕುರಿತಂತೆ ಮಾಹಿತಿ ಕಲೆ ಹಾಕಿದರು.

ಈ ವೇಳೆ ಸುದ್ದಿಗಾರರ ಜೊತೆ ಮಾತನಾಡಿ ಸಚಿವರು, ಫೆ 7 ರಂದು ಬ್ರಹ್ಮವರ್ಷಿಣಿ ಕ್ರಶರ್​ ಲೀಗಲ್​​ ಆಗಿದ್ದರೂ 7 ಅಡಿಯಲ್ಲಿ ಇಡಬೇಕಾದ ಸ್ಫೋಟಕಗಳನ್ನು 15 ಅಡಿ ಅಳಕ್ಕೆ ಇಟ್ಟಿದ್ದ ಕಾರಣದಿಂದ ಪೊಲೀಸರು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದರು ಎಂದರು.

ಸ್ಫೋಟಕಗಳನ್ನು ಇದೇ ರೀತಿ ಸ್ಫೋಟಿಸಬೇಕು ಎಂಬ ನಿಯಮಗಳಿವೆ. ಅದ್ದರಿಂದಲೇ ಕಳೆದ ಫೆ. 7 ಎಸ್​ಪಿ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಎಫ್​​ಐಆರ್​ ಕೂಡ ದಾಖಲು ಮಾಡಿದ್ದಾರೆಂದು ತಿಳಿಸಿದರು.

ಕ್ವಾರಿಯನ್ನು ಅಂದೇ ಬಂದ್ ಮಾಡಿದ್ದರು. ಇಲ್ಲಿ ನಿರಂತರವಾಗಿ ಪೊಲೀಸರು ಪರಿಶೀಲನೆ ನಡೆಸಿದ್ದ ಕಾರಣ ಕ್ವಾರಿ ಮಾಲೀಕರು ಅಕ್ರಮವಾಗಿ ಸಂಗ್ರಹ ಮಾಡಿದ್ದ ಜಿಲೆಟಿನ್​​ಗಳನ್ನು ನಾಶಪಡಿಸಲು ಸಿಬ್ಬಂದಿಗೆ ಸೂಚನೆ ನೀಡಿದ್ದರು ಎಂದು ಸುಧಾಕರ್ ಹೇಳಿದರು.

6 ಮಂದಿ‌‌ ಸಾವು

ಮಾಲೀಕರ ಸೂಚನೆ ಮೇರೆಗೆ ತಡರಾತ್ರಿ ಇವುಗಳ ಬಗ್ಗೆ ಏನೂ ತಿಳಿಯದ ರೀತಿಯಲ್ಲಿ ನಾಶಪಡಿಸಲು ಯತ್ನಿಸಿದ ವೇಳೆ 6 ಮಂದಿ ಸಿಬ್ಬಂದಿಗಳು ಬಲಿಯಾಗಿದ್ದಾರೆ. ಅಕ್ರಮವಾಗಿ ಜಿಲೆಟಿನ್​ ಸಂಗ್ರಹಿಸುವುದು ಖಂಡನೀಯ. ಆಂಧ್ರ ಮೂಲದ ಇಬ್ಬರು, ನೇಪಾಳದ ಒಬ್ಬರು ಸಾವನ್ನಪ್ಪಿದ್ದಾರೆ, ಮೃತರ ಕುಟುಂಬಸ್ಥರು ದುಃಖ ಹೇಗೆ ಭರಿಸುತ್ತಾರೋ ಗೊತ್ತಿಲ್ಲ. ಶೀಘ್ರದಲ್ಲೇ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ. ಯಾರೇ ಆಗಿದ್ದರೂ ಉಗ್ರವಾದ ಕ್ರಮ ತೆಗೆದುಕೊಳ್ಳುತ್ತೇವೆ. ಅಲ್ಲದೇ ಅಕ್ರಮ ಸ್ಫೋಟಕ ಸರಬರಾಜು ಮಾಡಿದವರ ಮೇಲೂ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದ್ರು.

ಕಳೆದ ಒಂದು ತಿಂಗಳಿನಿಂದ ನಾನು ಎರಡು ಬಾರಿ ಹೇಳಿದ ಮೇಲೆ ನಮ್ಮ ಜಿಲ್ಲೆಯಲ್ಲಿ ಅನಧಿಕೃತವಾಗಿ ನಡೆಯುವ ಒಂದು ಕ್ವಾರಿ ಇಲ್ಲ. ಜಿಲ್ಲಾಧಿಕಾರಿಗಳು, ಪೊಲೀಸ್ ವರಿಷ್ಠಾಧಿಕಾರಿಗಳು, ಗಣಿ ಇಲಾಖೆಯ ಅಧಿಕಾರಿಗಳು ಈ ಬಗ್ಗೆ ಸ್ಪಷ್ಟಪಡಿಸಿದ್ದಾರೆ ಎಂದು ಸಚಿವರು ತಿಳಿಸಿದರು.

ಒಬ್ಬನ ಬಂಧನ : ಮಾಲೀಕರ ಹುಡುಕಾಟ :

ಅಕ್ರಮ ಸ್ಫೋಟಕ ಸಂಗ್ರಹ ಮಾಡಿದರೂ ಅಧಿಕಾರಿಗಳು ಏಕೆ ಕ್ರಮಕೈಗೊಂಡಿಲ್ಲ ಎಂಬ ಪ್ರಶ್ನೆಗೆ ಉತ್ತರಿಸಿದ ಸಚಿವರು, ಕ್ವಾರಿ ನಡೆಸಬೇಕಾದರೆ ಸ್ಫೋಟಕ ಅಗತ್ಯ. ಅಭಿವೃದ್ಧಿ ಕಾರ್ಯಗಳಿಗೆ ಕ್ವಾರಿ ಎಂಬುವುದು ಒಂದು ಭಾಗ, ಆದರೆ ಇವುಗಳನ್ನು ನಿಯಮಗಳ ಅನುಸಾರ ನಡೆಸಬೇಕಾಗಿದೆ. ನಿಯಮಗಳ ಅನುಸಾರ ನಡೆಯದಿದ್ದರೆ ಇಂತಹ ದುರಂತಗಳು ನಡೆಯುತ್ತವೆ. ಈಗಾಗಲೇ ಪ್ರಕರಣ ಸಂಬಂಧ ಒಬ್ಬರನ್ನು ಬಂಧಿಸಲಾಗಿದೆ, ಅವರು ನ್ಯಾಯಾಂಗ ಬಂಧನದಲ್ಲಿದ್ದಾರೆ. ತಲೆಮರೆತಿಸಿಕೊಂಡವರನ್ನು ಪತ್ತೆ ಮಾಡಲು ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ ಎಂದು ವಿವರಿಸಿದರು.

Team Newsnap
Leave a Comment
Share
Published by
Team Newsnap

Recent Posts

ಮೆಜೆಸ್ಟಿಕ್‌ ಬಸ್‌ ನಿಲ್ದಾಣದಲ್ಲಿ ಬಿಎಂಟಿಸಿ ಬಸ್‌ಗೆ ವಿಶೇಷ ಚೇತನ ಬಲಿ

ಬೆಂಗಳೂರು: ಮೆಜೆಸ್ಟಿಕ್‌ ಬಸ್‌ ನಿಲ್ದಾಣದಲ್ಲಿ ಬಿಎಂಟಿಸಿ ಬಸ್‌ ಅಪಘಾತಕ್ಕೆ ವಿಶೇಷ ಚೇತನ ಬಲಿಯಾಗಿರುವ ಘಟನೆ ನಡೆದಿದೆ. ಬಿಎಂಟಿಸಿ ಬಸ್ ಯಶವಂತಪುರದಿಂದ… Read More

September 18, 2024

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಸೆಪ್ಟೆಂಬರ್ 18 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 68,640 ರೂಪಾಯಿ ದಾಖಲಾಗಿದೆ. 24… Read More

September 18, 2024

ಸೆ.19ರಿಂದ ವಿಎಓ/ಜಿಟಿಟಿಸಿ ಪರೀಕ್ಷೆಗೆ ಹೊಸದಾಗಿ ಅರ್ಜಿ ಸಲ್ಲಿಸಲು ಅವಕಾಶ

ಬೆಂಗಳೂರು: ಸೆ.19ರಿಂದ ಮ ಆಡಳಿತಾಧಿಕಾರಿ ಮತ್ತು ಜಿಟಿಟಿಸಿಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮತ್ತೊಮ್ಮೆ ಅವಕಾಶ ನೀಡಲಾಗಿದೆ ಎಂದು ಕೆಇಎ ಕಾರ್ಯನಿರ್ವಾಹಕ… Read More

September 17, 2024

ಅತಿಶಿ ಮರ್ಲೆನಾ ದೆಹಲಿಯ ನೂತನ ಮುಖ್ಯಮಂತ್ರಿಯಾಗಿ ಆಯ್ಕೆ

ನವದೆಹಲಿ: ಇಂದು ದೆಹಲಿಯ ನೂತನ ಮುಖ್ಯಮಂತ್ರಿಯಾಗಿ ಅತಿಶಿ ಮರ್ಲೆನಾ ಸಿಂಗ್ ಆಯ್ಕೆಯಾಗಿದ್ದಾರೆ. ಅರವಿಂದ್ ಕೇಜ್ರಿವಾಲ್ ಭ್ರಷ್ಟಾಚಾರ ಆರೋಪಗಳ ಹಿನ್ನೆಲೆಯಲ್ಲಿ ರಾಜೀನಾಮೆ… Read More

September 17, 2024

ಮುಂದಿನ ತಿಂಗಳಿಂದ ರಾಜ್ಯದ ಅಂಗನವಾಡಿ ಮಕ್ಕಳಿಗೆ ಗಟ್ಟಿಬೆಲ್ಲ ವಿತರಣೆ

ಬೆಂಗಳೂರು : ಅಂಗನವಾಡಿ ಕೇಂದ್ರಗಳಲ್ಲಿ ಆರ್ಗ್ಯಾನಿಕ್ ಬೆಲ್ಲದ ಬದಲಿಗೆ ಗಟ್ಟಿ ಬೆಲ್ಲವನ್ನೇ ನೀಡಲಾಗುವುದು ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ.… Read More

September 17, 2024

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಸಿದ್ಧಾರ್ಥ್ ಮತ್ತು ಅದಿತಿ ರಾವ್ ಹೈದರಿ

ಇಂದು 400 ವರ್ಷಗಳ ಹಿಂದಿನ ಪುರಾತನ ದೇವಸ್ಥಾನದಲ್ಲಿ ತಮಿಳಿನ ಸ್ಟಾರ್ ನಟ ಸಿದ್ಧಾರ್ಥ್ ಮತ್ತು ಅದಿತಿ ರಾವ್ ಹೈದರಿ ದಾಂಪತ್ಯ… Read More

September 16, 2024