February 21, 2026

Newsnap Kannada

The World at your finger tips!

latha mom

ಚಿಕ್ಕಬಳ್ಳಾಪುರ ಡಿಸಿ ಆರ್.ಲತಾಗೆ ಮಾತೃ ವಿಯೋಗ

Spread the love

ನಾಗಮಂಗಲ ತಾಲೂಕಿನ ಬ್ಯಾಡರಹಳ್ಳಿ ಗ್ರಾಮ ನಿವಾಸಿಯೂ ಆದ ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಆರ್.ಲತಾ ಅವರ ಮಾತೃಶ್ರೀ ಕಳೆದ ರಾತ್ರಿ ನಿಧನರಾದರು.

ಬಿ.ರಾಜಲಕ್ಷ್ಮಿ (69) ಅವರಿಗೆ ಬುಧವಾರ ರಾತ್ರಿ 9:30ರಲ್ಲಿ ರಕ್ತದೊತ್ತಡ ಕಡಿಮೆಯಾಗಿ ಖಾಸಗಿ ಅಸ್ಪತ್ರೆಯಲ್ಲಿ ನಿಧನರಾದರು.

ಕಳೆದ ಕೆಲವು ದಿನಗಳಿಂದ ಅನಾರೋಗ್ಯ ಪೀಡಿತರಾಗಿದ್ದ ಅವರು ಖಾಸಗಿ ಅಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ರಾಜಲಕ್ಷ್ಮಿ ಅವರು ಜಿಲ್ಲಾಧಿಕಾರಿ ಆರ್.ಲತಾ ಸೇರಿದಂತೆ ಇಬ್ಬರು ಗಂಡು ಮಕ್ಕಳು ಮತ್ತು ಪತಿಯನ್ನು ಆಗಲಿದ್ದಾರೆ.

ಅವರ ಅಂತ್ಯಕ್ರಿಯೆ ಬೆಂಗಳೂರಿನ ಶ್ರೀರಾಂಪುರದ ಹರಿಶ್ಚಂದ್ರ ಘಾಟ್ ನಲ್ಲಿ ಗುರುವಾರ ಮಧ್ಯಾಹ್ನ 3 ಗಂಟೆಗೆ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

error: Content is protected !!