ಏಪ್ರಿಲ್ 8 ರಂದು ಪಾಂಡವಪುರ ತಾಲೂಕಿನ ಬಳ್ಳೇ ಅತ್ತಿಗುಪ್ಪೆ ಗ್ರಾಮದಲ್ಲಿ
ಕೃಷಿ ಹೊಂಡದಲ್ಲಿ ಈಜಲು ಹೋಗಿ ಮೂವರು ಮಕ್ಕಳ ಧಾರುಣ ಸಾವು ಕಂಡ ಘಟನೆಗೆ ಸಂಬಂಧಿಸಿದಂತೆ ಮೇಲುಕೋಟೆ ಶಾಸಕ ಸಿ. ಎಸ್. ಪುಟ್ಟರಾಜು ಬಾಲಕರ ಕುಟುಂಬಗಳಿಗೆ ವೈಯಕ್ತಿಕ ಪರಿಹಾರ ನೀಡಿದರು.
ಶಾಸಕ ಪುಟ್ಟರಾಜು ಆದೇಶದಂತೆ ಶಾಸಕರ ಪರವಾಗಿ ಗ್ರಾಮಕ್ಕೆ ಭೇಟಿ ನೀಡಿದ ಜಿ ಪಂ ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷ ಸಿ .ಅಶೋಕ್,ಸೋಮವಾರ ಬಳ್ಳೇಅತ್ತಿಗುಪ್ಪೆ ಗ್ರಾಮಕ್ಕೆ ಭೇಟಿ ನೀಡಿ ಮಹದೇವಪ್ಪ ಎಂಬುವರ ಇಬ್ಬರು ಮಕ್ಕಳಾದ ಚಂದನ್, ಕಾರ್ತಿಕ್ ಹಾಗೂ ಮಲ್ಲಿಕಾರ್ಜುನರ ಪುತ್ರ ರೀತೇಶ್ ರ ಕುಟುಂಬಗಳಿಗೆ ಸಾಂತ್ವನ ಹೇಳಿ ಪ್ರತಿ ಕುಟುಂಬಕ್ಕೆ ತಲಾ 20 ಸಾವಿರ ರು ಗಳ ಪರಿಹಾರ ವಿತರಿಸಿದರು.
ಈ ವೇಳೆ ಮಾತನಾಡಿದ ಜಿ ಪಂ ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷ ಸಿ.ಅಶೋಕ್, ಘಟನೆ ನಡೆದ ನಂತರ ಎರಡು ದಿನಗಳ ಕಾಲವು ಶಾಸಕ ಪುಟ್ಟರಾಜು ಅವರು ಗ್ರಾಮಕ್ಕೆ ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಿದ್ದರು. ಸರ್ಕಾರದಿಂದ ದೊರೆಯಬಹುದಾದ ಪರಿಹಾರದ ಮೊತ್ತ ವಿಳಂಬ ಆಗುವ ಸಾಧ್ಯತೆ ಇದೆ. ಹೀಗಾಗಿ ವೈಯಕ್ತಿಕ ವಾಗಿ ಶಾಸಕರೇ 20 ಸಾವಿರ ನೀಡಿದ್ದಾರೆ ಎಂದರು.
ಸರ್ಕಾರದ ಪರಿಹಾರ ಕುರಿತಂತೆ ಶಾಸಕರು, ಜಿಲ್ಲಾಧಿಕಾರಿಗಳ ಮೂಲಕ ಶಿಫಾರಸ್ಸು ಮಾಡಿಸಿ ಪರಿಹಾರ ಕೊಡಿಸುವ ಪ್ರಯತ್ನವನ್ನು ಪ್ರಾಮಾಣಿಕ ವಾಗಿ ಮಾಡಲಿದ್ದಾರೆಂದರು.
ಶ್ರೀರಂಗಪಟ್ಟಣ : ಅಕ್ಟೋಬರ್ 4 ರಿಂದ 7 ವರೆಗೆ ವಿಜೃಂಭಣೆಯಿಂದ ಶ್ರೀರಂಗಪಟ್ಟಣ ಆಚರಿಸಲಾಗುವುದು ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ… Read More
ಆಂಧ್ರಪ್ರದೇಶ: ಹಿಂದಿನ ಸರ್ಕಾರ ತಿರುಪತಿ ಲಡ್ಡುವನ್ನು ತುಪ್ಪದ ಬದಲು ಪ್ರಾಣಿಗಳ ಕೊಬ್ಬಿನಿಂದ ತಯಾರಿಸಲಾಗಿದೆ ಎಂದು ಆಂಧ್ರಪ್ರದೇಶ ಸಿಎಂ ಚಂದ್ರಬಾಬು ನಾಯ್ಡು… Read More
ಬೆಂಗಳೂರು: ಜೆಪಿ ಶಾಸಕ ಮುನಿರತ್ನವಿರುದ್ಧ ಮತ್ತೊಂದು ಕೇಸ್ ದಾಖಲಾಗಿದ್ದು , ಇದೀಗ ಶಾಸಕನ ವಿರುದ್ಧ ಅತ್ಯಾಚಾರ ಕೇಸ್ ದಾಖಲಾಗಿದೆ. ಶಾಸಕ… Read More
ಬೆಂಗಳೂರು: ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ ಬಿಎಂಟಿಸಿ ಬಸ್ ಅಪಘಾತಕ್ಕೆ ವಿಶೇಷ ಚೇತನ ಬಲಿಯಾಗಿರುವ ಘಟನೆ ನಡೆದಿದೆ. ಬಿಎಂಟಿಸಿ ಬಸ್ ಯಶವಂತಪುರದಿಂದ… Read More
ನವದೆಹಲಿ ,ಸೆಪ್ಟೆಂಬರ್ 18 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 68,640 ರೂಪಾಯಿ ದಾಖಲಾಗಿದೆ. 24… Read More
ಬೆಂಗಳೂರು: ಸೆ.19ರಿಂದ ಮ ಆಡಳಿತಾಧಿಕಾರಿ ಮತ್ತು ಜಿಟಿಟಿಸಿಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮತ್ತೊಮ್ಮೆ ಅವಕಾಶ ನೀಡಲಾಗಿದೆ ಎಂದು ಕೆಇಎ ಕಾರ್ಯನಿರ್ವಾಹಕ… Read More
This website uses cookies.
Leave a Comment