ಮದುವೆಯಾಗಿ ಐದು ವರ್ಷವದರೂ ಮಕ್ಕಳಾಗಲಿಲ್ಲ ಎಂಬ ಕಾರಣಕ್ಕಾಗಿ ಒಂದೇ ಸೀರೆಯಲ್ಲಿ ಗಂಡ, ಹೆಂಡತಿ ಇಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಸೂಲಕುಂಟೆ ಗ್ರಾಮದಲ್ಲಿ ಜರುಗಿದೆ.
ಚಂದ್ರಶೇಖರ್(32) ಹಾಗೂ ಶಶಿಕಲಾ(25) ಮೃತ ದಂಪತಿ, ಮದುವೆಯಾಗಿ ಐದು ವರ್ಷ ಕಳೆದರೂ ಮಕ್ಕಳಾಗಲಿಲ್ಲ ಎಂಬ ಚಿಂತೆಯಿಂದ ದಂಪತಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಅಂತ ಸಂಬಂಧಿಕರು ತಿಳಿಸಿದ್ದಾರೆ. ‘ಇಂಡುವಾಳು ಆದರ್ಶ ಗ್ರಾಮ’ ಯೋಜನೆಗೆ ಸಂಸದೆ ಸೇರ್ಪಡೆ : ಸಹಕಾರ ನೀಡಿ ಸುಮಲತಾ
ಮನೆಯಲ್ಲಿನ ಮೇಲ್ಛಾವಣಿಯ ಸಿಮೆಂಟ್ ಶೀಟ್ ಕೆಳಗೆ ಅಡ್ಡಲಾಗಿ ಹಾಕಿರುವ ಕಬ್ಬಿಣದ ಪೈಪ್ಗೆ ಒಂದೇ ಸೀರೆಯನ್ನು ಎರಡು ಕಡೆ ನೇತು ಹಾಕಿ ಸೀರೆಯ ಎರಡು ಬದಿಗಳ ಕಡೆ ಒಬ್ಬೊಬ್ಬರು ಕುತ್ತಿಗೆಗೆ ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ವಿಷಯ ತಿಳಿದು ಸ್ಥಳಕ್ಕೆ ಭೇಟಿ ನೀಡಿದ ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸರು ಮುಂದಿನ. ಕ್ರಮ ಜರುಗಿಸಿದ್ದಾರೆ.