ಸ್ಕಾಲರ್ಶಿಪ್ ಹಣದ ಮೇಲೆ ಗುಮಾಸ್ತ ಕಣ್ಣು ಹಾಕಿ, ಕಾಲೇಜಿನ ಪ್ರಾಂಶುಪಾಲೆ ಸಹಿ ನಕಲಿ ಮಾಡಿ 68 ಲಕ್ಷ ರು ಗುಳುಂ ಮಾಡಿ ಪರಾರಿಯಾಗಿರುವ ಘಟನೆ ಜರುಗಿದೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಕೇಂದ್ರ. ಇಲ್ಲಿನ ವಿದ್ಯಾರ್ಥಿಗಳ ಶೈಕ್ಷಣಿಕ ಅನುಕೂಲಕ್ಕೆ ರಾಜ್ಯ ಸರ್ಕಾರ ವಿವಿಧ ಇಲಾಖೆಗಳ ಮೂಲಕ 68 ಲಕ್ಷ 65 ಸಾವಿರ ರೂಪಾಯಿ ಹಣ ಮಂಜೂರು ಮಾಡಿತ್ತು.
ದ್ವೀತಿಯ ದರ್ಜೆ ಗುಮಾಸ್ತ ಎನ್. ಸಂತೋಷ್ ಕುಮಾರ್ ವಂಚನೆ ಮಾಡಿದ್ದಾನೆ.
ವಿದ್ಯಾರ್ಥಿ ವೇತನ ಕಡತಗಳ ನಿರ್ವಹಣೆ ಮಾಡುತ್ತಿದ್ದ ಈತ 68 ಲಕ್ಷ 65 ಸಾವಿರ ರುಹಣವನ್ನು ತನ್ನ ಸ್ವಂತ ಖಾತೆಗೆ ವರ್ಗಾಯಿಸಿಕೊಂಡಿದ್ದಾನೆ.
ಈ ಬಗ್ಗೆ ಕಾಲೇಜಿನ ಪ್ರಾಂಶುಪಾಲರು ಚಿಂತಾಮಣಿ ನಗರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಕಾಲೇಜಿನ ಪ್ರಾಂಶುಪಾಲೆ ಶಾರದರ ನಕಲಿ ಸಹಿಗಳನ್ನು ಮಾಡಿ, ಬೆಂಗಳೂರು ಧಣಿಸಂದ್ರ ಕೆನರಾ ಬ್ಯಾಂಕ್ ಶಾಖೆಯಲ್ಲಿ ಸಂತೋಷ್ ತನ್ನ ವೈಯುಕ್ತಿಕ ಖಾತೆಗೆ ಹಣ ವರ್ಗಾವಣೆ ಮಾಡಿಕೊಂಡಿದ್ದು ಪತ್ತೆಯಾಗಿದೆ. ತನಿಖೆ ಆರಂಭವಾಗಿದೆ. ಸಂತೋಷ್ ಪರಾರಿಯಾಗಿದ್ದಾನೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು