ಮಾನಸಿಕ ಖಿನ್ನತೆ, ಮಕ್ಕಳಾಗಲಿಲ್ಲ ಎಂಬ ಕಾರಣಕ್ಕಾಗಿ ಸಂಸಾರದಲ್ಲಿ ಬಿರುಕು ಕಾಣಿಸಿಕೊಂಡ ಮೇಲೆ ಮನನೊಂದು ಸಿಐಡಿ ಡಿವೈಎಸ್ಪಿ ಲಕ್ಷ್ಮೀ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನ ಅನ್ನಪೂರ್ಣೇಶ್ವರಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಇಂದು ಜರುಗಿದೆ.
2014 ರ ಬ್ಯಾಚ್ ನಲ್ಲಿ ಕೆಪಿಎಸ್ ಸಿ ಪರೀಕ್ಷೆ ಬರೆದು ಡಿವೈಎಸ್ಪಿ ಅಧಿಕಾರಿಯಾಗಿ ಆಯ್ಕೆಯಾಗಿದ್ದ ಲಕ್ಷ್ಮೀ (33 )8 ವರ್ಷಗಳ ಹಿಂದೆ ನವೀನ್ ಎಂಬುವವರನ್ನು ಪ್ರೀತಿಸಿ ವಿವಾಹವಾಗಿದ್ದರು.
ಹೈದ್ರಾಬಾದ್ ನಲ್ಲಿರುವ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುವ ನವೀನ್ ಗೆ ಮದುವೆಯಾಗಿ 8 ವರ್ಷಗಳಾದರೂ ಮಕ್ಕಳು ಆಗಲಿಲ್ಲ ಎಂಬ ಕಾರಣಕ್ಕಾಗಿ ಪತಿ, ಪತ್ನಿಯ ನಡುವೆ ಆಗಾಗ್ಗೆ ಸಾಕಷ್ಟು ಮನಸ್ತಾಪಗಳು, ಗಲಾಟೆಗಳೂ ಆಗಿತ್ತು.
ಈ ಕಾರಣಕ್ಕಾಗಿ ಹಿಂದೆ ಎರಡು ಬಾರಿ ಡಿವೈಎಸ್ಪಿ ಲಕ್ಷ್ಮೀ ಆತ್ಮಹತ್ಯೆ ಗೆ ಯತ್ನ ಮಾಡಿದ್ದರು ಎಂಬ ಮಾಹಿತಿ ಇದೆ.
ನಿನ್ನೆ ರಾತ್ರಿ ಅನ್ನಪೂರ್ಣೇಶ್ವರಿ ನಗರದಲ್ಲಿರುವ ಗೆಳೆಯ ಮನೋಹರ್ ಮನೆಯಲ್ಲಿ ಗೆಳೆಯರೆಲ್ಲಾ ಸೇರಿ ಪಾರ್ಟಿ ಮಾಡಿದ್ದಾರೆ. ಆ ಪಾರ್ಟಿ ಮುಗಿಸಿ ನಂತರ ಪ್ರತ್ಯೇಕ ರೂಂ ಒಂದರಲ್ಲಿ ನೇಣು ಬಿಗಿದುಕೊಂಡು ಲಕ್ಷ್ಮೀ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಬಿಬಿಎಂಪಿ ಕ್ಲಾಸ್ 1 ಗುತ್ತಿಗೆದಾರ ಮನೋಹರ್ ಮನೆಯಲ್ಲಿ ನೇಣು ಬಿಗಿದುಕೊಂಡಿರುವ ಕಾರಣಕ್ಕಾಗಿ , ಪೋಲಿಸರು ಮನೋಹರ್ ನನ್ನು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ.
ಅನ್ನಪೂರ್ಣೇಶ್ವರಿ ನಗರ ಪೋಲೀಸರು ಕೇಸು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
- ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ
- SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ
- ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ
- ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ
- ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ