ಕೊರೋನಾ ಸಂಕಷ್ಟ ದೇಶದಲ್ಲಿ ತಾಂಡವವಾಡುತ್ತಿದೆ ಹೀಗಾಗಿ ಪೌರತ್ವ ಕಾಯ್ದೆ ತಿದ್ದುಪಡಿ ಜಾರಿಗೆ ತರಲು ವಿಳಂಬವಾಯಿತು. ಈಗ ಪರಿಸ್ಥಿತಿ ಸುಧಾರಣೆಗೊಂಡಂತೆ ಅದರ ಕೆಲಸಗಳೂ ಆರಂಭವಾಗಿವೆ.* ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಹೇಳಿದರು.
ಉತ್ತರ ಬಂಗಾಳ ಸಮುದಾಯ ಗುಂಪುಗಳ ಸಭೆಯಲ್ಲಿ ಮಾತನಾಡಿದ ಅವರು ‘ಕೋವಿಡ್ನ ಕಾರಣದಿಂದ ಪೌರತ್ವ ತಿದ್ದುಪಡಿ ಜಾರಿಗೆ ತರುವಲ್ಲಿ ತಡವಾಯ್ತು. ಪ್ರಸ್ತುತ ಪರಿಸ್ಥಿತಿ ತಿಳಿಯಾಗಿರುವುದರಿಂದ, ಕಾಯ್ದೆಯ ಕೆಲಸಗಳು ಮರು ಆರಂಭಗೊಂಡಿವೆ. ಸಂಸತ್ತಿನಲ್ಲಾಗಲೇ ಪೌರತ್ವ ತಿದ್ದುಪಡಿಯನ್ನು ಅಂಗೀಕಾರ ಮಾಡಲಾಗಿದೆ. ನಾವೆಲ್ಲರೂ ಅದಕ್ಕೆ ಬದ್ಧರಿದ್ದೇವೆ’ ಎಂದು ಹೇಳಿದರು.
ಇದೇ ವೇಳೆ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರ ಆಡಳಿತದ ಬಗ್ಗೆ ಮಾತನಾಡಿದ ನಡ್ಡಾ ‘ತೃಣಮೂಲ ಕಾಂಗ್ರೆಸ್ನ ಹಿತಾಸಕ್ತಿಗೋಸ್ಕರ ಪಶ್ಚಿಮ ಬಂಗಾಳ ಸರ್ಕಾರವು ವಿಭಜಕ ಆಡಳಿತ ನಡೆಸುತ್ತಿದೆ’ ಎಂದು ಆರೋಪಿಸಿದರು.
More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ