January 29, 2026

Newsnap Kannada

The World at your finger tips!

congress today

ಕೈ ಕಾರ್ಯಕರ್ತರು-ಮುಖಂಡರ ನಡುವೆ ಕಾಂಗ್ರೆಸ್ ಕಚೇರಿಯಲ್ಲಿ ಹೊಡೆದಾಟ

Spread the love

ಕೋಲಾರ :ಜಿಲ್ಲಾ ಕಾಂಗ್ರೆಸ್‌ ಕಚೇರಿಯಲ್ಲಿ ಎರಡು ಗುಂಪಿನ ಕಾರ್ಯಕರ್ತರ ನಡುವೆ ಪರಸ್ಪರ ಹೊಡೆದಾಟ ನಡೆದಿದೆ.

ಬೂತ್ ಮಟ್ಟದ ಏಜೆಂಟರ ಸಭೆಯ ವೇಳೆ ಶಾಸಕ ಕೊತ್ತೂರು ಮಂಜುನಾಥ್ ಹಾಗೂ ಸಚಿವ ಕೆ.ಹೆಚ್.ಮುನಿಯಪ್ಪ ಬೆಂಬಲಿಗರ ಮಧ್ಯೆ ಗಲಾಟೆಯಾಗಿದ್ದು, ವೇದಿಕೆ ಮೇಲೆ ಕುಳಿತಿದ್ದ ಕೋಲಾರ ಜಿಲ್ಲಾ ಕಾಂಗ್ರೆಸ್ ಕಾರ್ಯಾಧ್ಯಕ್ಷ ಊರಬಾಗಿಲು ಶ್ರೀನಿವಾಸ್ ಮೇಲೆ ಏಕಾಏಕಿ ದಾಳಿ ನಡೆಸಲಾಗಿದೆ.

ಫ್ಲೆಕ್ಸ್ ವಿಚಾರವಾಗಿ ಆರಂಭವಾದ ವಾಗ್ವಾದ ವಿಕೋಪಕ್ಕೆ ತಿರುಗಿದ್ದು, ಕೆಪಿಸಿಸಿ ಕಾರ್ಯದರ್ಶಿ ರಮೇಶ್ ಮತ್ತು ರಾಜಕುಮಾರ್ ಸಮ್ಮುಖದಲ್ಲಿ ಎರಡು ಗುಂಪುಗಳ ಬೆಂಬಲಿಗರು ಹೊಡೆದಾಡಿಕೊಂಡಿದ್ದಾರೆ.ಬಿಜೆಪಿ ಮೊದಲ ಪಟ್ಟಿ ಫೆಬ್ರವರಿ ಕೊನೆಯ ವಾರದಲ್ಲಿ ಬಿಡುಗಡೆ

ಗಲಾಟೆ ಹೆಚ್ಚಾಗುತ್ತಿದ್ದಂತೆ ಸಭೆಯಿಂದ ಮುನಿಯಪ್ಪ ಬೆಂಬಲಿಗ ಕಾರ್ಯಾಧ್ಯಕ್ಷ ಊರುಬಾಗಲು ಶ್ರೀನಿವಾಸ ಹೊರ ನಡೆದಿದ್ದಾರೆ.

error: Content is protected !!