ಯುವ ರತ್ನ ಪುನೀತ್ರಾಜ್ ಕುಮಾರ್ ಅವರಿಗೆ ಮರಣೋತ್ತರ ‘ಕರ್ನಾಟಕ ರತ್ನ’ ಪುರಸ್ಕಾರ ನೀಡುವುದಾಗಿ ಸಿಎಂ ಬಸವರಾಜ್ ಬೊಮ್ಮಾಯಿ ಘೋಷಣೆ ಮಾಡಿದರು,
ಬೆಂಗಳೂರಿನ ಅರಮನೆಯಲ್ಲಿ ನಡೆದ ಅಪ್ಪು ನುಡಿ ನಮನ ಕಾರ್ಯಕ್ರಮದಲ್ಲಿ ಮಾತಾಡಿದ ಸಿಎಂ ಬಸವರಾಜ್ ಬೊಮ್ಮಾಯಿ, ಪುನೀತ್ ರಾಜ್ಕುಮಾರ್ಗೆ ಮರಣೋತ್ತರ ‘ಕರ್ನಾಟಕ ರತ್ನ’ ಪುರಸ್ಕಾರ ನೀಡುವುದಾಗಿ ಘೋಷಿಸಿದ್ದಾರೆ.
ಪುನೀತ್ ನಮನ ಕಾರ್ಯಕ್ರಮದಲ್ಲಿ ಮಾತಾಡಿದ ಬೊಮ್ಮಾಯಿ, ಅಪ್ಪು ಅಗಲಿಕೆ ನಾಡಿಗೆ ತುಂಬಲಾರದ ನಷ್ಟ. ಅಪ್ಪನ ಹಾದಿಯಲ್ಲೇ ನಡೆದ ಮಗ, ಇಡೀ ಕರ್ನಾಟಕದಲ್ಲೇ ಮೊದಲ ರಾಷ್ಟ್ರ ಪ್ರಶಸ್ತಿ ಪಡೆದಿದ್ದಾರೆ ಅವನು ನಮ್ಮ ನಡುವೆಯೇ ಇದ್ದಾನೆ ಎಂದರು.
ಈ ಹಿಂದೆಯೂ ಪುನೀತ್ ರಾಜ್ ಕುಮಾರ್ ಅಗಲಿದಾಗ ಮಗುವಂತೆ ಅತ್ತಿದ್ದರು ಬೊಮ್ಮಾಯಿ. ಅಲ್ಲದೇ ಅಪ್ಪು ಹಣೆಗೆ ಮುತ್ತು ಕೊಟ್ಟು ತಮ್ಮ ಪ್ರೀತಿಯನ್ನ ತೋರಿಸಿದವರು.
ಇಂದಿನ ‘‘ಪುನೀತ ನಮನ’’ ಕಾರ್ಯಕ್ರಮದಲ್ಲಿ ಭಾವುಕರಾಗಿ ಅಭಿಮಾನದಿಂದ ಮಾತನಾಡಿದ ಮುಖ್ಯಮಂತ್ರಿಗಳು ಅಪ್ಪು ಅವರ ಭಾವ ಚಿತ್ರಕ್ಕೆ ಪುಷ್ಪಾಂಜಲಿ ಅರ್ಪಿಸಿದರು.
ಬಳಿಕ ಪುನೀತ್ ರಾಜ್ಕುಮಾರ್ಗೆ ಮರಣೋತ್ತರ ‘ಕರ್ನಾಟಕ ರತ್ನ’ ಪುರಸ್ಕಾರ ಘೋಷಿಸಿದರು.