RSSನ ಕಚೇರಿ ಕೇಶವಕೃಪಾಗೆ ಸಿಎಂ ಬೊಮ್ಮಾಯಿ ರಾತ್ರೋರಾತ್ರಿ ಭೇಟಿ

Team Newsnap
1 Min Read

ರಾಜ್ಯ ಬಿಜೆಪಿಯಲ್ಲಿ ಬದಲಾವಣೆ ಚರ್ಚೆ ನಡೆಯುತ್ತಿರುವಾಗಲೇ ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ RSS ನ ಪ್ರಧಾನ ಕಚೇರಿ ಕೇಶವಕೃಪಾಗೆ ಸಿಎಂ ಬೊಮ್ಮಾಯಿ ಭೇಟಿ ನೀಡಿದ್ದಾರೆ.

ಕಳೆದ ರಾತ್ರಿ 9:30 ರಿಂದ 11 ಘಂಟೆಯವರೆಗೂ ಕೇಶವಕೃಪಾದಲ್ಲಿ ಸಂಘದ ಪ್ರಮುಖರನ್ನು ಭೇಟಿಯಾದ ಸಿಎಂ ಬೊಮ್ಮಾಯಿ, ಈ ಸಂದರ್ಭದಲ್ಲಿ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ಚರ್ಚೆ ಮಾಡಿದ್ದಾರೆ ಎನ್ನಲಾಗಿದೆ.

ಸಿ.ಆರ್.ಮುಕುಂದ್‌ರನ್ನು ಭೇಟಿಯಾಗಿ, ರಾಷ್ಟ್ರೀಯ ಬಿಜೆಪಿಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್, ತಮ್ಮ ನಿವಾಸಕ್ಕೆ ಬಂದಿದ್ದರು ಸುಮಾರು 15 ನಿಮಿಷಗಳ ಕಾಲ ಮಾತುಕತೆ ಮಾಡಿದರು ಎಂಬುದನ್ನು ಹಂಚಿಕೊಂಡಿದ್ದಾರಂತೆ.

IPS ವರ್ಗಾವಣೆ: ಬೆಂಗಳೂರು ಇಂಟಲಿಜೆನ್ಸ್ ಎಸ್‌ಪಿಯಾಗಿ ಎನ್‌. ವಿಷ್ಣುವರ್ಧನ್

ಸಿಎಂ ಭೇಟಿಗೂ ಮುನ್ನವೇ ಸಚಿವ ಆರ್.ಅಶೋಕ್ ಕೂಡ ಕೇಶವಕೃಪಾಕ್ಕೆ ಭೇಟಿ ನೀಡಿದ್ದಾರೆ. ಇದು ಕುತೂಹಲಕ್ಕೆ ಕಾರಣವಾಗಿದೆ.

Share This Article
Leave a comment