ಹಲವು ದಿನಗಳಿಂದ ಮಂಡಿ ನೋವಿನಿಂದ ಬಳಲುತ್ತಿದ್ದ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ
ಚಿಕಿತ್ಸೆ ನೀಡುತ್ತಿರುವ ಲೋಕೇಶ್ ಟೆಕಲ್ ನಕಲಿ ವೈದ್ಯ ಎಂದು ತಿಳಿದು ಬಂದಿದೆ.
2019 ರಲ್ಲೇ ಲೋಕೇಶ್ ಟೇಕಲ್ ವಿರುದ್ಧ ಕೇಸ್ ದಾಖಲಾಗಿತ್ತು. ಅಂದಿನ ಆಯುಷ್ಯ ಅಧಿಕಾರಿ ಸುಜಾತಾ ಪಾಟೀಲ್ ದೂರು ದಾಖಲಿಸಿದ್ದರು.
ಲೋಕೇಶ್ ಟೇಕಲ್ ಆಸ್ಪತ್ರೆಯ ಮೇಲೆ ದಾಳಿಯೂ ನಡೆಸಲಾಗಿತ್ತು. ಗದಗ ಜಿಲ್ಲೆಯ ಶಿರಹಟ್ಟಿ ತಾಲೂಕಿನ ಮಹಾಲಿಂಗಪುರದಲ್ಲಿರುವ ಆಸ್ಪತ್ರೆ ಕಂ ಕ್ಲಿನಿಕ್ ಮೇಲೆ ಸುಜಾತಾ ಪಾಟೀಲ್ ದಾಳಿ ನಡೆಸಿದ್ದರು.
ಐಪಿಸಿ ಸೆಕ್ಷನ್ 36, 38 ಹಾಗೂ 420 ಅಡಿ ದೂರು ದಾಖಲು ಮಾಡಲಾಗಿತ್ತು. ನಂತರ ಶಿರಹಟ್ಟಿ ಪೊಲೀಸ್ ಠಾಣೆಗೆ ವರ್ಗಾವಣೆಗೊಂಡಿತ್ತು
ಈ ಕೇಸ್. ತನಿಖೆ ನಡೆಸಿದ ಪೊಲೀಸರು ಆರೋಪಿ ಲೋಕೇಶ್ ಟೇಕಲ್ ಮೇಲೆ ಚಾರ್ಜ್ ಶೀಟ್ ಕೂಡ ಸಲ್ಲಿಸಿದ್ದರು. ಈ ನಡುವೆ ಎಫ್ಐಆರ್ ರದ್ದು ಕೋರಿ ಲೋಕೇಶ್ ಧಾರವಾಡ ಹೈಕೋರ್ಟ್ ಮೆಟ್ಟಿಲೇರಿದ. ಕಳೆದ 2021 ನವೆಂಬರ್ 24ರಂದು ಎಫ್ಐಆರ್ ರದ್ದು ಮಾಡಿ ಹೈಕೋರ್ಟ್ ಆದೇಶ ನೀಡಿತ್ತು.
ಲೋಕೇಶ್ ಟೇಕಲ್ ಮೂಲತಃ ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಟೇಕಲ್ ಗ್ರಾಮದವರು. ಅಜ್ಜಿ ಪ್ರಸಿದ್ಧ ನಾಟಿ ವೈದ್ಯರಾಗಿದ್ದರು. ತಾನೂ ನಾಟಿ ವೈದ್ಯ ಎಂದು ಸ್ವಯಂ ಘೋಷಿತ ಮಾಡಿಕೊಂಡಿದ್ದಾರೆ
ಲೋಕೇಶ್. ಮುಂಡರಗಿ ಬಳಿ ಇರುವ ಆಯುರ್ವೇದ ಮೆಡಿಕಲ್ ಕಾಲೇಜ್ನಲ್ಲಿ ಓದಲು ತೆರಳಿದ್ದ ಲೋಕೇಶ್, ಮೂರು ಸೆಮೆಸ್ಟರ್ನಲ್ಲಿ ಫೇಲ್ ಆಗಿದ್ದರು
ಶಿರಹಟ್ಟಿ ಪೊಲೀಸ್ ಠಾಣೆ ವ್ಯಾಪ್ತಿ ಮಹಾಲಿಂಗಪುರ ಬಳಿ ಆಯುರ್ವೇದ ಆಸ್ಪತ್ರೆ ಶುರು ಮಾಡಿದ ಲೋಕೇಶ್ ನಂತರ ಹೊರ ರಾಜ್ಯಗಳಲ್ಲೂ ಪ್ರಸಿದ್ಧನಾಗಿದ್ದ. ಅನೇಕ ಸಚಿವರು, ಮಾಜಿ ಮಂತ್ರಿಗಳು, ಶಾಸಕರು, ಮಠಾಧೀಶರು, ಚಿತ್ರರಂಗದ ಗಣ್ಯರು ಇವರ ಬಳಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಬೆಂಗಳೂರು : ಇಸ್ರೇಲ್ ರಾಯಭಾರ ಕಚೇರಿ ಸ್ಫೋಟಿಸಲು ಸಂಚು ರೂಪಿಸಿದ್ದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಶಂಕಿತ ಉಗ್ರನನ್ನು ರಾಷ್ಟ್ರೀಯ ತನಿಖಾ ದಳ(ಎನ್ಐಎ)… Read More
ಹುಬ್ಬಳ್ಳಿ : ಇಂದು ಪಾಗಲ್ ಪ್ರೇಮಿಯೊಬ್ಬ ಪ್ರೀತಿ ನಿರಾಕರಿಸಿದ್ದಕ್ಕೆ ಮನೆಗೆ ನುಗ್ಗಿ ಯುವತಿಗೆ ಚಾಕುವಿನಿಂದ ಮನಬಂದಂತೆ ಇರಿದು ಹತ್ಯೆಗೈದಿರುವ ಘಟನೆ… Read More
ನವದೆಹಲಿ : ಕೇಂದ್ರ ಗೃಹ ಸಚಿವ ಅಮಿತ್ ಷಾ ಬುಧವಾರ ಪಾಕ್ ಆಕ್ರಮಿತ ಕಾಶ್ಮೀರ (POK) ಮೇಲೆ ಭಾರತದ ಸಾರ್ವಭೌಮತ್ವವನ್ನು… Read More
ಹಾಸನ: ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಸೇರಿದ್ದು ಎನ್ನಲಾದ ಅಶ್ಲೀಲ ವಿಡಿಯೋ ಹೊಂದಿದ ಪೆನ್ ಡ್ರೈವ್ ಹಂಚಿಕೆ ಪ್ರಕರಣ ಸಂಬಂಧ… Read More
ನವದೆಹಲಿ ,ಮೇ 15 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 66,750 ರೂಪಾಯಿ ದಾಖಲಾಗಿದೆ. 24… Read More
ಮುಂಬೈ: ನಿನ್ನೆ ಬೀಸಿದ ಬಿರುಗಾಳಿಗೆ ನಗರದಲ್ಲಿ ತಲೆಎತ್ತಿದ್ದ ಅಕ್ರಮ ಜಾಹಿರಾತು ಫಲಕ ಕುಸಿದು, 8 ಮಂದಿ ಸಾವನ್ನಪ್ಪಿದ್ದು, 60 ಜನರು… Read More
This website uses cookies.
Leave a Comment