ಸೆಪ್ಟಂಬರ್ 10 ರೊಳಗೆ ಮೈಶುಗರ್ ಕಾರ್ಖಾನೆ ಆರಂಭಿಸಲು ಸಿದ್ದತೆ ಮಾಡಲಾಗಿದೆ. ಸಿಎಂ ಬೊಮ್ಮಾಯಿ ಮೈಷುಗರ್ ಗೆ ಚಾಲನೆ ನೀಡಲಿದ್ದಾರೆ ಎಂದು ಮಂಡ್ಯದಲ್ಲಿ ಸಕ್ಕರೆ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಭಾನುವಾರ ಪ್ರಕಟಿಸಿದರು.
ಮೈಷುಗರ್ ಕಾರ್ಖಾನೆ ಗೆ ನೀಡಿ ಪರಿಶೀಲನೆ ಮಾಡಿದ ನಂತರ ಸುದ್ದಿಗಾರರ ಜೊತೆ ಮಾತನಾಡಿದ ಸಚಿವರು
ಗಣೇಶ ಚತುರ್ಥಿ ದಿನದಿಂದಲೇ ರೈತರಿಂದ ಕಬ್ಬು ಖರೀದಿ ಮಾಡುವ ಪ್ರಕ್ರಿಯೆ ಆರಂಭವಾಗಲಿದೆ
ಈಗಾಗಲೇ 4 ಲಕ್ಷ ಟನ್ ಕಬ್ಬು ಒಪ್ಪಂದ ಮಾಡಿಕೊಳ್ಳಲಾಗಿದೆ ಎಂದರು.
ಮೈಶುಗರ್ ಮತ್ತೆ ನಷ್ಟಕ್ಕೆ ಹೋಗದ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗಿದೆ. ತಾಂತ್ರಿಕ ಸಮಿತಿ ವರದಿ ಆಧರಿಸಿಯೇ ಕಾರ್ಖಾನೆ ಪುನರಾಂಭಿಸುತ್ತೇವೆ. ಹಣ ಪೋಲಾಗುವುದನ್ನು ತಡೆಗಟ್ಟಲಾಗುವುದು ಎಂದರು.
ಕಳೆದ ನಾಲ್ಕು ವರ್ಷಗಳಿಂದ ಸ್ಥಗಿತಗೊಂಡಿದ್ದ ಕಾರ್ಖಾನೆಯನ್ನು ಸೆ. 10 ರೊಳಗೆ ಮೈಶುಗರ್ ಅಧಿಕೃತ ಚಾಲನೆ ನೀಡಲು ಸಿಎಂ ಬಸವರಾಜ ಬೊಮ್ಮಾಯಿ ಮಂಡ್ಯಕ್ಕೆ ಬರುವುದಾಗಿ ಎಂದು ಹೇಳಿದ್ದಾರೆ.
ಹೆಮ್ಮೆಯ ಫ್ಯಾಕ್ಟರಿ ಯಾವತ್ತು ಬಂದ್ ಆಗದಂತೆ ನೋಡಿಕೊಳ್ಳಲು ತೀರ್ಮಾನಿಸಿದ್ದೇವೆ. ಅಲ್ಲದೆ
ಎಥನಾಲ್ ಉತ್ಪಾದನೆ ಮಾಡುವ ಹೆಜ್ಜೆ ಇಟ್ಟಿದ್ದೇವೆ. ಸಿಎಂ ಆನಿರ್ಧಾರವನ್ನು ಘೋಷಣೆ ಮಾಡಲಿದ್ದಾರೆ ಎಂದು ತಿಳಿಸಿದರು.
ಬ್ಯಾಂಕೂ ಮುಗ್ಧ ಗ್ರಾಹಕರೂ (ಬ್ಯಾಂಕರ್ಸ್ ಡೈರಿ)
ಈ ಬಾರಿ ಹಣಕಾಸು ತೊಂದರೆಯಾಗದಂತೆ ಸರ್ಕಾರವೇ ನೋಡಿಕೊಳ್ಳುತ್ತೆ. 31 ಕೋಟಿ ಕೆಇಬಿ ಬಾಕಿ ಇತ್ತು.
ಹೀಗಾಗಿ ಕಾರ್ಖಾನೆಗೆ ಕರೆಂಟ್ ಕೂಡ ಇರಲಿಲ್ಲ. ನಮ್ಮ ಸರ್ಕಾರ ಆ ಸಮಸ್ಯೆಯನ್ನು ಬಗೆಹರಿಸಿದೆ.
ಅದೇ ರೀತಿ ಎಲ್ಲಾ ಸರಿದೂಗಿಸಿ ಕಾರ್ಖಾನೆ ಆರಂಭಿಸುತ್ತಿದ್ದೇವೆ. ಫ್ಯಾಕ್ಟರಿಯನ್ನು ಸರ್ಕಾರಿ ನಿಯಂತ್ರಣದಲ್ಲೇ
ಪಾರದರ್ಶಕವಾಗಿ ಕಾರ್ಖಾನೆ ನಡೆಸುತ್ತೇವೆ ಎಂದು ಸಕ್ಕರೆ ಸಚಿವ ಶಂಕರ್ ಬಿ.ಪಾಟೀಲ್ ಮುನೇನಕೊಪ್ಪ ಹೇಳಿದರು.
ಬೆಂ ಗಳೂರು : ಸಂಸದ ಪ್ರಜ್ವಲ್ ರೇವಣ್ಣಗೆ ಅಶ್ಲೀಲ ವೀಡಿಯೋ ಪ್ರಕರಣ ಸಂಬಂಧ ಲುಕ್ ಔಟ್ ನೋಟಿಸ್ ಜಾರಿ ಮಾಡಲಾಗಿದೆ.… Read More
ಹಾಸನ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದ ಕುರಿತು ಸ್ಪೋಟಕ ಮಾಹಿತಿ ಬಿಚ್ಚಿಟ್ಟಿದ್ದ ಮಾಜಿ… Read More
ನವದೆಹಲಿ ,ಮೇ 2 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,550 ರೂಪಾಯಿ ದಾಖಲಾಗಿದೆ. 24… Read More
ಬೆಂಗಳೂರು: ವಿದ್ಯಾರ್ಥಿಯೊಬ್ಬ ಜ್ಞಾನಭಾರತಿ ಕ್ಯಾಂಪಸ್ ನಲ್ಲಿ ಪಿಹೆಚ್ಡಿ (PhD) ವ್ಯಾಸಾಂಗ ಮಾಡುತ್ತಿರುವ ವಿದ್ಯಾರ್ಥಿಯೊಬ್ಬ ಅನುಮಾನಾಸ್ಪವಾಗಿ ಮೃತಪಟ್ಟಿದ್ದಾನೆ. ರಂಗನಾಥ್ ನಾಯಕ್ (27)… Read More
(ಬ್ಯಾಂಕರ್ಸ್ ಡೈರಿ) -ಡಾ. ಶುಭಶ್ರೀಪ್ರಸಾದ್ ಮಂಡ್ಯ ಅಂದೂ ಎಂದಿನಂತೆಯೇ ಬ್ಯಾಂಕಿನಲ್ಲಿ ವಿಪರೀತ ರಶ್ಶು. ಆ ಹುಡುಗಿ ಹೊಸ ಖಾತೆ ತೆರೆಯಲು… Read More
ನವದೆಹಲಿ : ಟೀಂ ಇಂಡಿಯಾ ಮುಂಬರುವ ಟಿ20 ವಿಶ್ವಕಪ್ಗಾಗಿ 15 ಮಂದಿ ಆಟಗಾರರ ತಂಡವನ್ನು ಪ್ರಕಟಿಸಿದೆ. ಇಂದು ಭಾರತೀಯ ಕ್ರಿಕೆಟ್… Read More
This website uses cookies.
Leave a Comment