ಹಾವೇರಿ ಜಿಲ್ಲೆ ಹಿರೆಕೆರೂರು ತಾಲ್ಲೂಕಿನ ವಿಜಯ ವರದಿಗಾರ ಮತ್ತು ಹಾವೇರಿ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿಯು ಆಗಿದ್ದ ರಾಮು ಮುದಿಗೌಡರ ಅವರ ಕುಟುಂಬಕ್ಕೆ ಸರ್ಕಾರದ 3 ಲಕ್ಷ ರೂ ಪರಿಹಾರ ಜಮಾ ಆಗಿದೆ.
ಬ್ಯಾಂಕ್ ಅಕೌಂಟ್ ಗೆ ಹಣ ಜಮಾ ಆಗಿರುವುದನ್ನು, ರಾಮು ಮುದಿಗೌಡರ್ ಅವರ ಪತ್ನಿ ಶ್ರೀಮತಿ ಸುಮಂಗಲ ಅವರು ಪೋನ್ ಮಾಡಿ ಖಚಿತಪಡಿಸಿದ್ದಾರೆ.ಇದನ್ನು ಓದಿ –ರಾಜ್ಯ ಸರ್ಕಾರಿ ನೌಕರ’ರಿಗೆ ಶೇ.3.75ರಷ್ಟು ತುಟ್ಟಿಭತ್ಯೆ ಹೆಚ್ಚಳ : ಸಿಎಂ ಬೊಮ್ಮಾಯಿ ಗ್ರೀನ್ ಸಿಗ್ನಲ್
ತಮ್ಮ ಕಷ್ಟ ಕಾಲದಲ್ಲಿ ಕುಟುಂಬದ ಜೊತೆಗೆ ನಿಂತು ಪರಿಹಾರ ಕೊಡಿಸಲು ಹೋರಾಟ ಮಾಡಿದ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ(ಕೆಯುಡಬ್ಲ್ಯೂಜೆ)ಕ್ಕೆ ಧನ್ಯವಾದ ತಿಳಿಸಿದ್ದಾರೆ.
ಕಳೆದ ವರ್ಷ ಅನಾರೋಗ್ಯ ಕಾರಣದಿಂದ ಬೆಂಗಳೂರು ಖಾಸಗಿ ಆಸ್ಪತ್ರೆಗೆ ಸೇರಿಸಿದ್ದ ರಾಮುಮುದಿಗೌಡರ ತಂಗಿ ರೇಣುಕಾ ಬದುಕುಳಿಯಲಿಲ್ಲ.
ಸಹೋದರಿಯ ಸಾವಿನ ನೋವಿನಲ್ಲಿ ಆಕೆಯ ಶವವನ್ನು ವಾಹನದಲ್ಲಿ ಹಿರೆಕೆರೂರಿಗೆ ತೆಗೆದುಕೊಂಡು ಹೋಗುತ್ತಿದ್ದ ಸಂದರ್ಭದಲ್ಲಿ ಲಘು ಅಪಘಾತದಿಂದ ರಾಮು ಮುದಿಗೌಡರ್ ಅವರಿಗೆ ತೀವ್ರ ಹೃದಯಾಘಾತವಾಗಿತ್ತು. ಜುಲೈ 1 ರಂದು ಮೃತಪಟ್ಟಿದ್ದರು.
ಒಂದೇ ದಿನ ಅಣ್ಣ-ತಂಗಿಯ ಶವ ಸಂಸ್ಕಾರ ಹಿರೆಕೆರೂರು ತಾಲ್ಲೂಕಿನ ಹಿರೆಮರಬ ಗ್ರಾಮದಲ್ಲಿ ನಡೆದಿತ್ತು. ಈ ಘಟನೆ ಎಲ್ಲರ ಮನಕಲಕಿತ್ತು.
ಕೆಯುಡಬ್ಲ್ಯೂಜೆ ಕೃತಜ್ಞತೆ:
ರಾಮುಮುದಿಗೌಡರ್ ಅವರ ಕುಟುಂಬ ಸಂಕಷ್ಟದಲ್ಲಿರುವ ಬಗ್ಗೆ ಹಾವೇರಿ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘ ಕೆಯುಡಬ್ಲ್ಯೂಜೆ ಅಧ್ಯಕ್ಷ ಶಿವಾನಂದ ತಗಡೂರು ಅವರ ಗಮನಕ್ಕೆ ತಂದಿತ್ತು.
ಕೆಯುಡಬ್ಲ್ಯೂಜೆ ಮನವಿ ಮೇರೆಗೆ ಪರಿಹಾರ ಮಂಜೂರು ಮಾಡಿದ್ದ ಹಿಂದಿನ ಮುಖ್ಯಮಂತ್ರಿ ಯಡಿಯೂರಪ್ಪ, 3 ಲಕ್ಷ ರೂ ಪರಿಹಾರ ಬಿಡುಗಡೆಗೆ ಆದೇಶಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಯಿ ಅವರಿಗೆ ಕೆಯುಡಬ್ಲ್ಯೂಜೆ ಕೃತಜ್ಞತೆ ಸಲ್ಲಿಸಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ




More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು