Karnataka

ಪತ್ರಕರ್ತ ರಾಮುಮುದಿಗೌಡರ ಕುಟುಂಬಕ್ಕೆ 3 ಲಕ್ಷ ರು ಪರಿಹಾರ ನೀಡಿದ ಸಿಎಂ

ಹಾವೇರಿ ಜಿಲ್ಲೆ ಹಿರೆಕೆರೂರು ತಾಲ್ಲೂಕಿನ ವಿಜಯ ವರದಿಗಾರ ಮತ್ತು ಹಾವೇರಿ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿಯು ಆಗಿದ್ದ ರಾಮು ಮುದಿಗೌಡರ ಅವರ ಕುಟುಂಬಕ್ಕೆ ಸರ್ಕಾರದ 3 ಲಕ್ಷ ರೂ ಪರಿಹಾರ ಜಮಾ ಆಗಿದೆ.

ಬ್ಯಾಂಕ್ ಅಕೌಂಟ್ ಗೆ ಹಣ ಜಮಾ ಆಗಿರುವುದನ್ನು, ರಾಮು ಮುದಿಗೌಡರ್ ಅವರ ಪತ್ನಿ ಶ್ರೀಮತಿ ಸುಮಂಗಲ ಅವರು ಪೋನ್ ಮಾಡಿ ಖಚಿತಪಡಿಸಿದ್ದಾರೆ.ಇದನ್ನು ಓದಿ –ರಾಜ್ಯ ಸರ್ಕಾರಿ ನೌಕರ’ರಿಗೆ ಶೇ.3.75ರಷ್ಟು ತುಟ್ಟಿಭತ್ಯೆ ಹೆಚ್ಚಳ : ಸಿಎಂ ಬೊಮ್ಮಾಯಿ ಗ್ರೀನ್ ಸಿಗ್ನಲ್


ತಮ್ಮ ಕಷ್ಟ ಕಾಲದಲ್ಲಿ ಕುಟುಂಬದ ಜೊತೆಗೆ ನಿಂತು ಪರಿಹಾರ ಕೊಡಿಸಲು ಹೋರಾಟ ಮಾಡಿದ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ(ಕೆಯುಡಬ್ಲ್ಯೂಜೆ)ಕ್ಕೆ ಧನ್ಯವಾದ ತಿಳಿಸಿದ್ದಾರೆ.

ಕಳೆದ ವರ್ಷ ಅನಾರೋಗ್ಯ ಕಾರಣದಿಂದ ಬೆಂಗಳೂರು ಖಾಸಗಿ ಆಸ್ಪತ್ರೆಗೆ ಸೇರಿಸಿದ್ದ ರಾಮುಮುದಿಗೌಡರ ತಂಗಿ ರೇಣುಕಾ ಬದುಕುಳಿಯಲಿಲ್ಲ.
ಸಹೋದರಿಯ ಸಾವಿನ ನೋವಿನಲ್ಲಿ ಆಕೆಯ ಶವವನ್ನು ವಾಹನದಲ್ಲಿ ಹಿರೆಕೆರೂರಿಗೆ ತೆಗೆದುಕೊಂಡು ಹೋಗುತ್ತಿದ್ದ ಸಂದರ್ಭದಲ್ಲಿ ಲಘು ಅಪಘಾತದಿಂದ ರಾಮು ಮುದಿಗೌಡರ್ ಅವರಿಗೆ ತೀವ್ರ ಹೃದಯಾಘಾತವಾಗಿತ್ತು. ಜುಲೈ 1 ರಂದು ಮೃತಪಟ್ಟಿದ್ದರು.

ಒಂದೇ ದಿನ ಅಣ್ಣ-ತಂಗಿಯ ಶವ ಸಂಸ್ಕಾರ ಹಿರೆಕೆರೂರು ತಾಲ್ಲೂಕಿನ ಹಿರೆಮರಬ ಗ್ರಾಮದಲ್ಲಿ ನಡೆದಿತ್ತು. ಈ ಘಟನೆ ಎಲ್ಲರ ಮನಕಲಕಿತ್ತು.

ಕೆಯುಡಬ್ಲ್ಯೂಜೆ ಕೃತಜ್ಞತೆ:


ರಾಮುಮುದಿಗೌಡರ್ ಅವರ ಕುಟುಂಬ ಸಂಕಷ್ಟದಲ್ಲಿರುವ ಬಗ್ಗೆ ಹಾವೇರಿ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘ ಕೆಯುಡಬ್ಲ್ಯೂಜೆ ಅಧ್ಯಕ್ಷ ಶಿವಾನಂದ ತಗಡೂರು ಅವರ ಗಮನಕ್ಕೆ ತಂದಿತ್ತು.

ಕೆಯುಡಬ್ಲ್ಯೂಜೆ ಮನವಿ ಮೇರೆಗೆ ಪರಿಹಾರ ಮಂಜೂರು ಮಾಡಿದ್ದ ಹಿಂದಿನ ಮುಖ್ಯಮಂತ್ರಿ ಯಡಿಯೂರಪ್ಪ, 3 ಲಕ್ಷ ರೂ ಪರಿಹಾರ ಬಿಡುಗಡೆಗೆ ಆದೇಶಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಯಿ ಅವರಿಗೆ ಕೆಯುಡಬ್ಲ್ಯೂಜೆ ಕೃತಜ್ಞತೆ ಸಲ್ಲಿಸಿದೆ.

Team Newsnap
Leave a Comment

Recent Posts

ಕುಸ್ತಿಪಟು ಭಜರಂಗ್ ಪುನಿಯಾ ನಾಡಾದಿಂದ ಅಮಾನತು

ನವದೆಹಲಿ: ಕುಸ್ತಿಪಟು ಭಜರಂಗ್ ಪುನಿಯಾ ( Bajrang Punia) ಅವರನ್ನು ರಾಷ್ಟ್ರೀಯ ಉದ್ದೀಪನ ಮದ್ದು ತಡೆ ಸಂಸ್ಥೆ (NADA )… Read More

May 5, 2024

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಮೇ 5 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,750 ರೂಪಾಯಿ ದಾಖಲಾಗಿದೆ. 24… Read More

May 5, 2024

ಲೋಕಾಯುಕ್ತರ ಹೆಸರಿನಲ್ಲಿ ಬೆಸ್ಕಾಂ ಎಂಡಿಗೆ ಬೆದರಿಕೆ – ದೂರು ದಾಖಲು

ಬೆಂಗಳೂರು : ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ ಬೀಳಗಿ ಹಾಗೂ ಅಧಿಕಾರಿಗಳಿಗೆ ಲೋಕಾಯುಕ್ತ ಪೊಲೀಸರ ಹೆಸರಿನಲ್ಲಿ ಬೆದರಿಕೆ ಕರೆಗಳು ಬಂದ… Read More

May 5, 2024

ಸಂಚಾರ ನಿಯಮಗಳ ಉಲ್ಲಂಘನೆ: ರಾಜ್ಯದಲ್ಲಿ 1,700 ಕೋಟಿ ರೂ. ದಂಡ ಬಾಕಿ

ಬೆಂಗಳೂರು: ಸಂಚಾರ ನಿಯಮಗಳ ಉಲ್ಲಂಘನೆಗೆ ಸಂಬಂಧಪಟ್ಟಂತೆ ರಾಜ್ಯದಲ್ಲಿ ಬರೋಬ್ಬರಿ 1,700 ಕೋಟಿ ರೂ. ದಂಡ ಬಾಕಿ ಉಳಿದಿದೆ. ದಂಡವನ್ನು ವಸೂಲಿ… Read More

May 4, 2024

ಜಾಮೀನು ಅರ್ಜಿ ವಜಾ : ಮಾಜಿ ಸಚಿವ HD ರೇವಣ್ಣ ಬಂಧನ

ಮಾಜಿ ಪ್ರಧಾನಿ ಹೆಚ್​.ಡಿ ದೇವೇಗೌಡರ ನಿವಾಸದಲ್ಲಿದ್ದ ಹೆಚ್​.ಡಿ ರೇವಣ್ಣ ರೇವಣ್ಣರನ್ನು ಅರೆಸ್ಟ್ ಮಾಡಲು ಪದ್ಮನಾಭನಗರಕ್ಕೆ ತೆರಳಿದ್ದ SIT ತಂಡ ಮಹಿಳೆ… Read More

May 4, 2024

ಪ್ರಜ್ವಲ್ ಕೇಸನ್ನು ನಾವು ಯಾರು ಬೆಂಬಲಿಸಿಲ್ಲ, ತಪ್ಪು ಮಾಡಿದವರಿಗೆ ಶಿಕ್ಷೆಯಾಗಲಿ : ಬಿ.ವೈ ವಿಜಯೇಂದ್ರ

ಹುಬ್ಬಳ್ಳಿ : ಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ , : ನಾವು ಯಾರು ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಬೆಂಬಲಿಸಿಲ್ಲ… Read More

May 4, 2024