ಪೆಡ್ಲರ್ ಗಳಿಂದ ಗಾಂಜಾ ತರಿಸಿ ಮಾರಾಟ ಮಾಡುತ್ತಿದ್ದ ಇಬ್ಬರು ಪೊಲೀಸರನ್ನು ಬಂಧಿಸಿ ಪ್ರಕರಣ ಜರುಗಿದೆ.
ಶಿವಕುಮಾರ್ ಹಾಗೂ ಸಂತೋಷ್ ಎಂಬ ಪೇದೆಗಳು ಗಾಂಜಾ ಮಾರಾಟ ಮಾಡಿ ಸಿಕ್ಕಿಬಿದ್ದಿದ್ದಾರೆ.
ಇವರಿಬ್ಬರು ಗಾಂಜಾ ಪೆಡ್ಲರ್ಗಳ ಮೂಲಕ ಗಾಂಜಾ ತರಿಸಿಕೊಂಡು ಮಾರಾಟಕ್ಕೆ ಮಾಡುತ್ತಿದ್ದರು.
ಅಚ್ಚರಿದಾಯಕ ವಿಷಯವೆಂದರೆ, ಇವರು ಸಿಎಂ ಬೊಮ್ಮಾಯಿ ಮನೆಯ ಭದ್ರತೆಗೆ ನಿಯೋಜನೆಗೊಂಡಿದ್ದರು.
ಇವರಿಬ್ಬರೂ ಕೊರಮಂಗಲ ಪೊಲೀಸ್ ಠಾಣಾ ಸಿಬ್ಬಂದಿಯಾಗಿದ್ದಾರೆ. ಪೋಲಿಸರಿಗೆ ಬೇಕಾಗಿದ್ದ
ಪೆಡ್ಲರ್ಗಳಾದ ಅಖಿಲ್ ರಾಜ್ ಹಾಗೂ ಅಮ್ಜದ್ ಖಾನ್ ಬಳಿ ಗಾಂಜಾ ಖರೀದಿಸಿ ಮಾರಾಟ ಮಾಡುತ್ತಿದ್ದರು.
ಪೆಡ್ಲರ್ಗಳಿಂದ ಗಾಂಜಾ ಪಡೆದು ಹಣ ಕೊಡದೇ ಹಲ್ಲೆಗೆ ಮುಂದಾಗಿದ್ದರು. ಮುಖ್ಯಮಂತ್ರಿಗಳ ಮನೆ ಇರುವ ಆರ್.ಟಿ. ನಗರದ 80 ಅಡಿ ರಸ್ತೆ ಬಳಿ ಡೀಲ್ ಮಾಡುತ್ತಿದ್ದರು. ಸಿಎಂ ಮನೆ ಬಳಿ ಗಸ್ತಿನಲ್ಲಿದ್ದ ಹೊಯ್ಸಳ ಸಿಬ್ಬಂದಿಗೆ ಈ ಬಗ್ಗೆ ಅನುಮಾನ ಬಂದು ವಿಚಾರಣೆ ನಡೆಸಿದ್ದಾರೆ. ಖಾಕಿ ತೊಟ್ಟವರೇ ಗಾಂಜಾ ಮಾರಾಟಕ್ಕಿಳಿದಿರುವುದನ್ನು ತಿಳಿದು ಪೊಲೀಸರು ಅಚ್ಚರಿಗೊಂಡಿದ್ದಾರೆ.
ಆಇಬ್ಬರು ಪೊಲೀಸರು ಹಾಗೂ ಗಾಂಜಾ ಪೆಡ್ಲರ್ಗಳನ್ನು ಬಂಧಿಸಿರುವ ಆರ್.ಟಿ.ನಗರ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ
ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ