ಕರ್ನಾಟಕದಾದ್ಯಂತ ಭೂ ಸುಧಾರಣಾ ಹಾಗೂ ಎಪಿಎಂಸಿ ಕಾಯ್ದೆಗಳ ತಿದ್ದುಪಡಿ ಕುರಿತಂತೆ ರೈತ ನಾಯಕರನ್ನು ಮುಖ್ಯಮಂತ್ರಿ ಯಡಿಯೂರಪ್ಪ ಮಾತುಕತೆ ಅಹ್ವಾನ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬಂದ್ಗೆ ನಮ್ಮ ಬೆಂ ಬಲವಿಲ್ಲ ಎಂದು ನೇರವಾಗಿಯೇ ಹೇಳಿದರು.
ಈ ಬಗ್ಗೆ ಸರಣಿ ಟ್ವೀಟ್ ಮಾಡಿ ಕೃಷಿ ಮಸೂದೆ ಹಾಗೂ ಎಪಿಎಂಸಿ ಕಾಯ್ದೆಗಳನ್ನು ಅವರು ಸಮರ್ಥನೆ ಮಾಡಿಕೊಂಡಿದ್ದಾರೆ.
‘ಎಪಿಎಂಸಿ ಕಾಯ್ದೆ ಹಾಗೂ ಭೂ ಸುಧಾರಣಾ ಕಾಯ್ದೆಗಳ ತಿದ್ದುಪಡಿಯಿಂದ ಯಾವುದೇ ರೈತರಿಗೆ ತೊಂದರೆಯಾಗುವದಿಲ್ಲ. ಈ ಕಾಯ್ದೆಗಳ ಬಗ್ಗೆ ತಪ್ಪು ಮಾಹಿತಿ ನೀಡಿ ರೈತರನ್ನು ಗೊಂದಲಗೊಳಿಸಲಾಗುತ್ತಿದೆ’ ಎಂದು ತಿಳಿಸಿದರು.
‘ಯಾವುದೇ ಕಾರಣಕ್ಕೂ ಎಪಿಎಂಸಿಗಳನ್ನು ಮುಚ್ಚುವದಿಲ್ಲ. ಆದರೆ ಮೊದಲು ಇದ್ದ ನಿರ್ಬಂಧಗಳನ್ನು ತೆಗೆದು ಹಾಕಲಾಗಿದೆ. ಯಾವುದೇ ರೈತ ತನ್ನ ಬೆಳೆಯನ್ನು ಎಲ್ಲಿ ಬೇಕಾದರೂ ಮಾರಾಟ ಮಾಡಬಹುದು. ಮೊದಲು ಎಪಿಎಂಸಿಯ ಹೊರಗಡೆ ರೈತ ತನ್ನ ಬೆಳೆ ಮಾರಾಟ ಮಾಡಿದ್ದರೆ ದಂಡ ವಿಧಿಸಲಾಗುತ್ತಿತ್ತು. ಆದರೆ ಈಗ ಆ ನಿರ್ಬಂಧ ತೆಗೆದುಹಾಕಲಾಗಿದೆ. ಅಲ್ಲದೇ ಯಾವುದೇ ನೀರಾವರಿ ಭೂಮಿಯನ್ನು ಸಾಗುವಳಿ ಉದ್ದೇಶದ ಹೊರತು ಮಾರಾಟ ಮಾಡಲು ಸಾಧ್ಯವಿಲ್ಲ’ ಎಂದು ಹೇಳಿದರು.
‘ಕೈಗಾರಿಕೆಗಳು ರಾಜ್ಯದಲ್ಲಿ ಉದ್ಯೋಗ ಸೃಷ್ಠಿಗೆ ಸಹಾಯಕವಾಗಲಿವೆ. ಆದರೆ ಯಾವುದೇ ಸಾಗುವಳಿ ಭೂಮಿಯಲ್ಲಿ ಕೈಗಾರಿಕೆಗಳ ನಿರ್ಮಾಣ ಮಾಡುವದಿಲ್ಲ. ಕೃಷಿಗೆ ಸಹಾಯಕವಾಗದ ಭೂಮಿಯಲ್ಲಿ ಮಾತ್ರ ಕೈಗಾರಿಕೆಗಳ ನಿರ್ಮಾಣ ಮಾಡಲಾಗುತ್ತದೆ. ಒಂದು ಕುಟುಂಬ ಕೇವಲ 54 ಎಕರೆ ಭೂಮಿ ಹೊಂದಲು ಅವಕಾಶವಿದೆ. ಅದಕ್ಕಿಂತಲೂ ಹೆಚ್ಚಿನ ಭೂಮಿ ಹೊಂದುವ ಹಾಗಿಲ್ಲ. ಅಲ್ಲದೇ ರಾಜ್ಯದಲ್ಲಿ ಈಗಾಗಲೇ 22 ಲಕ್ಷ ಕೃಷಿ ಭೂಮಿ ಸಾಗುವಳಿ ಮಾಡದೇ ಬಂಜರಾಗಿದೆ. ಯಾರು ಬೇಕಾದರೂ ಅಂತಹ ಭೂಮಿಯಲ್ಲಿ ಸಾಗುವಳಿ ಮಾಡಬಹುದು. ಸರ್ಕಾರ ಅದಕ್ಕೆ ಸಹಾಯ ಮಾಡಲಿದೆ’ ಎಂದರು.
‘ಹಾಗೆಯೇ ಪರಿಶಿಷ್ಟ ಜಾತಿ, ಪಂಗಡದವರ ಭೂಮಿಯನ್ನು ಯಾರೂ ಖರೀದಿಸುವಂತಿಲ್ಲ. ನಾನು ರೈತರ ಬೆಂಬಲದಿಂದ ಮುಖ್ಯಮಂತ್ರಿ ಹುದ್ದೆಗೆ ಬಂದವನು. ಅವರಿಗೆ ಅನ್ಯಾಯವಾಗಲು ಬಿಡುವದಿಲ್ಲ. ರೈತ ಸಂಘಟನೆಗಳಿಗೆ ನನ್ನೊಡನೆ ಚರ್ಚೆಗೆ ಆಹ್ವಾನವಿದೆ. ಯಾರೂ ರೈತರನ್ನು ಗೊಂದಲಕ್ಕೆ ದೂಡಬೇಡಿ’ ಎಂದಿದ್ದಾರೆ.
ಬೆಂಗಳೂರು : ಇಸ್ರೇಲ್ ರಾಯಭಾರ ಕಚೇರಿ ಸ್ಫೋಟಿಸಲು ಸಂಚು ರೂಪಿಸಿದ್ದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಶಂಕಿತ ಉಗ್ರನನ್ನು ರಾಷ್ಟ್ರೀಯ ತನಿಖಾ ದಳ(ಎನ್ಐಎ)… Read More
ಹುಬ್ಬಳ್ಳಿ : ಇಂದು ಪಾಗಲ್ ಪ್ರೇಮಿಯೊಬ್ಬ ಪ್ರೀತಿ ನಿರಾಕರಿಸಿದ್ದಕ್ಕೆ ಮನೆಗೆ ನುಗ್ಗಿ ಯುವತಿಗೆ ಚಾಕುವಿನಿಂದ ಮನಬಂದಂತೆ ಇರಿದು ಹತ್ಯೆಗೈದಿರುವ ಘಟನೆ… Read More
ನವದೆಹಲಿ : ಕೇಂದ್ರ ಗೃಹ ಸಚಿವ ಅಮಿತ್ ಷಾ ಬುಧವಾರ ಪಾಕ್ ಆಕ್ರಮಿತ ಕಾಶ್ಮೀರ (POK) ಮೇಲೆ ಭಾರತದ ಸಾರ್ವಭೌಮತ್ವವನ್ನು… Read More
ಹಾಸನ: ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಸೇರಿದ್ದು ಎನ್ನಲಾದ ಅಶ್ಲೀಲ ವಿಡಿಯೋ ಹೊಂದಿದ ಪೆನ್ ಡ್ರೈವ್ ಹಂಚಿಕೆ ಪ್ರಕರಣ ಸಂಬಂಧ… Read More
ನವದೆಹಲಿ ,ಮೇ 15 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 66,750 ರೂಪಾಯಿ ದಾಖಲಾಗಿದೆ. 24… Read More
ಮುಂಬೈ: ನಿನ್ನೆ ಬೀಸಿದ ಬಿರುಗಾಳಿಗೆ ನಗರದಲ್ಲಿ ತಲೆಎತ್ತಿದ್ದ ಅಕ್ರಮ ಜಾಹಿರಾತು ಫಲಕ ಕುಸಿದು, 8 ಮಂದಿ ಸಾವನ್ನಪ್ಪಿದ್ದು, 60 ಜನರು… Read More
This website uses cookies.
Leave a Comment