ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ (KUWJ)ಮನವಿ ಮೇರೆಗೆ ಇತ್ತೀಚೆಗೆ ಮೃತಪಟ್ಟ ಹಾವೇರಿ ಜಿಲ್ಲೆಯ ಇಂಡಿಯನ್ ಎಕ್ಸ್ಪ್ರೆಸ್ ವರದಿಗಾರ ಗಂಗಾಧರ ಹೂಗಾರ ಮತ್ತು ನ್ಯೂಸ್1 ಕ್ಯಾಮರಾಮೆನ್ ಸೆಲ್ವರಾಜು (ಚಾಮರಾಜನಗರ) ಅವರ ಕುಟುಂಬಕ್ಕೆ 5 ಲಕ್ಷ ರೂ ಪರಿಹಾರವನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮಂಜೂರು ಮಾಡಿದ್ದಾರೆ.
ಸಂಕಷ್ಟದಲ್ಲಿರುವ ಗಂಗಾಧರ ಹೂಗಾರ ಕುಟುಂಬಕ್ಕೆ ನೆರವು ನೀಡುವಂತೆ ಹಾವೇರಿ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘ, ಸೆಲ್ವರಾಜು ಅವರ ಕುಟುಂಬಕ್ಕೆ ನೆರವು ನೀಡುವಂತೆ ಚಾಮರಾಜನಗರ ಜಿಲ್ಲಾ ಕಾರ್ಯ ನಿರತ ಸಂಘವು, ರಾಜ್ಯ ಸಂಘಕ್ಕೆ ಪತ್ರ ಬರೆದಿದ್ದರು.
ಈ ಬಗ್ಗೆ ಕೆಯುಡಬ್ಲ್ಯೂಜೆ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ಮುಖ್ಯಮಂತ್ರಿ ಅವರನ್ನು ಭೇಟಿ ಮಾಡಿ ಮನವಿ ಮಾಡಿ, ಪರಿಹಾರ ಮಂಜೂರು ಮಾಡಿಸಿದ್ದಾರೆ.
ಸಂಕಷ್ಟದಲ್ಲಿದ್ದ ಪತ್ರಕರ್ತರ ಕುಟುಂಬಕ್ಕೆ ತಲಾ 5 ಲಕ್ಷ ಮಂಜೂರು ಮಾಡಿರುವ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಕೆಯುಡಬ್ಲ್ಯೂಜೆ ಕೃತಜ್ಞತೆ ಸಲ್ಲಿಸಿದೆ ಎಂದು ಅಧ್ಯಕ್ಷ ಶಿವಾನಂದ ತಗಡೂರು ತಿಳಿಸಿದ್ದಾರೆ.
ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯಗೆ ದೊಡ್ಡ ಸಂಕಷ್ಟ ಮುಂದೆ ಅಧೀನ ನ್ಯಾಯಾಲಯ ತೀರ್ಪು ಘೋಷಿಸಬಹುದು ಸುಪ್ರೀಂ ಕೋರ್ಟ್ ಬಾಗಿಲು ತಟ್ಟಲು… Read More
ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮತ್ತೆ ಮಹಿಷ ದಸರಾ ಕೂಗು ಕೇಳಿ ಬಂದಿದ್ದು ,ಈ ಬಾರಿಯೂ ಮಹಿಷ ದಸರಾ ವಿವಾದ… Read More
ಬೆಂಗಳೂರು : ಚಿತ್ರದುರ್ಗ ಮೂಲದ ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಎ1 ಆರೋಪಿ ಪವಿತ್ರಾ ಗೌಡ ಮತ್ತು ಎ2 ಆರೋಪಿಯಾಗಿರುವ… Read More
ಮೈಸೂರು: ಸೆ. 24 ರಂದು ಸಂಜೆ 6 ಗಂಟೆಗೆ ಮಾನಸಗಂಗೋತ್ರಿಯ ಬಯಲು ರಂಗಮಂದಿರದಲ್ಲಿ ದಸರಾ ಮಹೋತ್ಸವ -2024 ರ ಯುವ… Read More
ಮೈಸೂರು : ನಾಡ ಹಬ್ಬ ಮೈಸೂರು ದಸರಾ ಮಹೋತ್ಸವ 2024 ರ ಹಿನ್ನೆಲೆಯಲ್ಲಿ ದಸರಾ ಚಲನಚಿತ್ರೋತ್ಸವ ಪೋಸ್ಟರ್ ಗಳನ್ನು ಜಿಲ್ಲಾ… Read More
ಸ್ವಾವಲಂಬಿ ಸ್ತ್ರೀ ಆರ್ಥಿಕವಾಗಿ ಹಿಂದುಳಿದ ಹಿನ್ನೆಲೆಯ ಅರ್ಹ ಮಹಿಳೆಯರು ಉಚಿತವಾಗಿ ಆಟೋ ರಿಕ್ಷಾ ಚಾಲನಾ ತರಬೇತಿಯನ್ನು ಪಡೆಯಲು ಮತ್ತು ಆದಾಯ… Read More
This website uses cookies.
Leave a Comment