ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹಾಸನದ ಹಾಸನಾಂಬೆ ದೇವಾಲಯಕ್ಕೆ ಭೇಟಿ ನೀಡಿ, ಹಾಸನಾಂಬೆ ದೇವಿಯ ದರ್ಶನ ಪಡೆದರು.
ಹಾಸನಾಂಬೆ ದರ್ಶನ ಪಡೆದು ಹೊರ ಬಂದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಮುಂಗಾರು ಕೈಕೊಟ್ಟಿದೆ, ಹಿಂಗಾರಾದ್ರೂ ಬರಲಿ ಎಂದು ತಾಯಿ ಹಾಸನಾಂಬೆ ದೇವಿಯಲ್ಲಿ ಬೇಡಿಕೊಂಡಿದ್ದಾರೆ .
ಮುಂಗಾರು ಮಳೆ ರಾಜ್ಯದಲ್ಲಿ ಕೈಕೊಟ್ಟಿದೆ. ಈ ಕಾರಣದಿಂದಾಗಿ ಬರಗಾಲ ಆವರಿಸಿದೆ. ಕನಿಷ್ಠ ಪಕ್ಷ ಹಿಂಗಾರಾದ್ರೂ ಬರಲಿ ಎಂಬುದಾಗಿ ಹಾಸನಾಂಬೆಯನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ಕೋರಿಕೊಂಡಿದ್ದಾರೆ.
ಈ ವೇಳೆ ಸಿಎಂ ಸಿದ್ಧರಾಮಯ್ಯ ಅವರಿಗೆ ಸಚಿವ ಕೆ ಎನ್ ರಾಜಣ್ಣ, ಶಾಸಕ ಶಿವಲಿಂಗೇಗೌಡ ಸಾಥ್ ನೀಡಿದರು.
ಮುಂಗಾರು ಮಳೆ ಕೊರತೆಯಾಗಿ, ಹಿಂಗಾರು ಮಳೆ ಬಂದರೆ ದರ ಕರುಗಳಿಗೆ ಮೇವು ಆಗಲಿದೆ. ಈ ಕಾರಣದಿಂದಾಗಿ ರಾಜ್ಯದಲ್ಲಿ ಹಿಂಗಾರು ಮಳೆ ಬರುವಂತೆ ಮಾಡು ಹಾಸನಾಂಬೆ ತಾಯಿ ಎಂದು ಕೋರಿಕೊಂಡಿದ್ದಾಗಿ ತಿಳಿಸಿದರು.
- ಪ್ರಜ್ವಲ್ ಕೇಸನ್ನು ನಾವು ಯಾರು ಬೆಂಬಲಿಸಿಲ್ಲ, ತಪ್ಪು ಮಾಡಿದವರಿಗೆ ಶಿಕ್ಷೆಯಾಗಲಿ : ಬಿ.ವೈ ವಿಜಯೇಂದ್ರ
- ಶಕುನಿ ಪಾತ್ರಧಾರಿ ವೇದಿಕೆಯ ಮೇಲೆಯೇ ಕುಸಿದು ಬಿದ್ದು ಸಾವು
- ಬಿಜೆಪಿಯವರು ಏಕೆ ಪ್ರಜ್ವಲ್ ರೇವಣ್ಣ ಕೇಸ್ ಬಗ್ಗೆ ಮಾತನಾಡುತ್ತಿಲ್ಲ ?ಡಿ.ಕೆ.ಶಿವಕುಮಾರ್
- ರೇವಣ್ಣ ಅಪಹರಣ ಕೇಸ್ : ಎಸ್ಐಟಿ ವಿಶೇಷ ತಂಡದಿಂದ 40 ಕಡೆ ರೇಡ್
- ಕ್ರೇಜಿವಾಲ್ ಗೆ ಮಧ್ಯಂತರ ಜಾಮೀನು ಪರಿಗಣನೆಗೆ ಸುಪ್ರೀಂ ಸೂಚನೆ