November 8, 2025

Newsnap Kannada

The World at your finger tips!

siddarama

ಸಿಎಂ ಸಿದ್ದುಗೆ ಜನಪ್ರತಿನಿಧಿಗಳ ಕೋರ್ಟ್‌ನಿಂದ 10 ಸಾವಿರ ದಂಡ

Spread the love

ಬೆಂಗಳೂರು : ಹೈಕೋರ್ಟ್‌ನ ಜನಪ್ರತಿನಿಧಿ ನ್ಯಾಯಾಲಯ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಸೇರಿ ಕಾಂಗ್ರೆಸ್‌ ನಾಯಕರಿಗೆ (Congress Leaders) 10 ಸಾವಿರ ರೂ. ದಂಡ ವಿಧಿಸಿದೆ.

ರೇಸ್ ವ್ಯೂ ಹೋಟೆಲ್ ಬಳಿ 2022ರ ಏಪ್ರಿಲ್ 14ರಂದು ಕಾಂಗ್ರೆಸ್ ಪ್ರತಿಭಟನೆ (Protest) ನಡೆಸಿತ್ತು.

ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಹಿನ್ನೆಲೆಯಲ್ಲಿ ಸಚಿವರಾಗಿದ್ದ ಕೆ.ಎಸ್.‌ಈಶ್ವರಪ್ಪ ಅವರ ರಾಜೀನಾಮೆಗೆ ಆಗ್ರಹಿಸಿ ಕಾಂಗ್ರೆಸ್‌ ನಾಯಕರು ರೇಸ್‌ಕೋರ್ಸ್‌ ರಸ್ತೆಯಲ್ಲಿ ಪ್ರತಿಭಟಿಸಿದ್ದರು.

ಜನಪ್ರತಿನಿಧಿಗಳ ನ್ಯಾಯಾಲಯ ಸಾರ್ವಜನಿಕರಿಗೆ ಸಮಸ್ಯೆ ಉಂಟು ಮಾಡಿದ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ, ಸುರ್ಜೆವಾಲಾ ಸೇರಿದಂತೆ ಕಾಂಗ್ರೆಸ್‌ ನಾಯಕರಿಗೆ ದಂಡ ವಿಧಿಸಿದೆ.ಷೇರು ಮಾರುಕಟ್ಟೆ ಹೆಸರಲ್ಲಿ 96 ಲಕ್ಷ ವಂಚನೆ

ಮಾರ್ಚ್‌ 6 ರಂದು ಸಿದ್ದರಾಮಯ್ಯನವರಿಗೆ ಖುದ್ದು ನ್ಯಾಯಾಲಯಕ್ಕೆ ಹಾಜರಾಗುವಂತೆ ಸಮನ್ಸ್‌ ಜಾರಿ ಮಾಡಿದೆ.

error: Content is protected !!