ಗೃಹಲಕ್ಷ್ಮಿ ಯೋಜನೆ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಲಕ್ಷ್ಮಿ ಹೆಬ್ಬಾಳ್ಕರ್, ನಾಳೆ 1:30 ಕ್ಕೆ ಶಕ್ತಿ ಭವನದಲ್ಲಿ ಗೃಹಲಕ್ಷ್ಮಿ ಯೋಜನೆಗೆ ಸಿಎಂ ಚಾಲನೆ ನೀಡಲಿದ್ದಾರೆ. ಯೋಜನೆಯ ವೆಬ್ಸೈಟ್ ಲಾಂಚ್ ಮಾಡಲಾಗುವುದು. ಸಾಂಕೇತಿಕವಾಗಿ ನಾಲ್ಕೈದು ಜನರಿಗೆ ನಾಳೆ ನೋಂದಣಿ ಮಾಡಲಿದ್ದೇವೆ. ಆಗಸ್ಟ್ 18 ಕ್ಕೆ ಬೆಳಗಾವಿಯಿಂದ ಚಾಲನೆ ನೀಡಲಾಗುವುದು ಎಂದು ಹೇಳಿದರು.
ಅರ್ಜಿ ಸಲ್ಲಿಸಲು ಮನೆ ಯಜಮಾನಿಯ ಪತಿಯ ಆಧಾರ್ ಕಾರ್ಡ್ ಸಂಖ್ಯೆ, ಮೊಬೈಲ್ ಸಂಖ್ಯೆ, ಅರ್ಜಿದಾರರ ಬ್ಯಾಂಕ್ ಖಾತೆ ವಿವರ ಸಲ್ಲಿಸೋದು ಕಡ್ಡಾಯವಾಗಿದೆ. ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ ಇಲ್ಲ ಎಂದು ಸ್ಪಷ್ಟಪಡಿಸಿದರು.
ಗೃಹಲಕ್ಷ್ಮಿ ಯೋಜನೆಯ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಪ್ರಮುಖ ಅಂಶಗಳು:
*ಅರ್ಜಿದಾರರು 16-06-2023 ರಿಂದ ಅರ್ಜಿ ಸಲ್ಲಿಸಬಹುದಾಗಿರುತ್ತದೆ.
*ಅರ್ಜಿಗಳನ್ನು ಆನ್ಲೈನ್ ಮೂಲಕ ಅಥವಾ ಭೌತಿಕವಾಗಿ ಗ್ರಾಮ ಒನ್/ಬೆಂಗಳೂರು ಒನ್/ಕರ್ನಾಟಕ ಒನ್ ಕೇಂದ್ರಗಳಲ್ಲಿ ಸೇವಾಸಿಂಧು ಪೋರ್ಟಲ್ ಮೂಲಕ ಸಲ್ಲಿಸಬಹುದಾಗಿದೆ.
(https://sevasindhugs.karnataka.gov.in/gruhalakshmi)
ಇದನ್ನು ಓದಿ – ಬೆಂಗಳೂರು ಮತ್ತು ಹಳೆ ಮೈಸೂರು ಭಾಗದಲ್ಲಿ ಜೂನ್ 18 ರಿಂದ 22 ರವರೆಗೆ ಭಾರಿ ಮಳೆಯ ಸಾಧ್ಯತೆ
ಯೋಜನೆಯ ಕುರಿತಂತೆ ಸಂದೇಹ/ ಕುಂದುಕೊರತೆಗಳಿದ್ದಲ್ಲಿ ಸಹಾಯವಾಣಿ (Helpline) – 1902 ಗೆ ಸಂಪರ್ಕಿಸಬಹುದಾಗಿದೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು