February 24, 2026

Newsnap Kannada

The World at your finger tips!

YADIYURAPPA1

ಸಿಎಂ ಯಡಿಯೂರಪ್ಪ ಎಂ ಎಸ್ ರಾಮಯ್ಯ ಆಸ್ಪತ್ರೆಗೆ ದಾಖಲು

Spread the love

ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕೋವಿಡ್ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಶುಕ್ರವಾರ ಬೆಳಗ್ಗೆ ತುರ್ತು ಸಭೆ ನಡೆಸಿದ ಬಳಿಕ ಸಿಎಂ ಬೆಂಗಳೂರಿನ ಎಂ.ಎಸ್.ರಾಮಯ್ಯ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಆಸ್ಪತ್ರೆ ವೈದ್ಯರು ಯಡಿಯೂರಪ್ಪ ನವರಿಗೆ ಜ್ವರದ ಹಿನ್ನೆಲೆಯಲ್ಲಿ ಚೆಕಪ್ ನಡೆಸಲಾಗುತ್ತಿದೆ. ಅಗತ್ಯ ಬಿದ್ದರೆ ಆಸ್ಪತ್ರೆಯಲ್ಲಿ ಅಡ್ಮಿಟ್ ಆಗುವ ಸಾಧ್ಯತೆಗಳಿವೆ. ವೈದ್ಯರ ಸಲಹೆಯ ಮೇರೆಗೆ ಎರಡು ದಿನ ವಿಶ್ರಾಂತಿ ಪಡೆಯಲಿದ್ದಾರೆ.

ಈ ಹಿಂದೆ ಸಿಎಂ ಅವರಿಗೆ ಕೊರೊನಾ ಪಾಸಿಟಿವ್ ಕಾಣಿಸಿಕೊಂಡು ಗುಣಮುಖರಾಗಿದ್ದರು. ಈ ಹಿನ್ನೆಲೆಯಲ್ಲಿ ಆರೋಗ್ಯದಲ್ಲಿ ವ್ಯತ್ಯಾಸ ಉಂಟಾದಾಗ ಮತ್ತೆ ಟೆಸ್ಟ್ ಮಾಡಿಸಲಾಗಿದೆ. ನೆಗೆಟಿವ್ ವರದಿ ಬಂದಿದೆ.

error: Content is protected !!