ಕಲ್ಲಿದ್ದಲು ಕೊರತೆಯಿಂದ ಅನಧಿಕೃತವಾಗಿ ಲೋಡ್ ಶೆಡ್ಡಿಂಗ್ ಆರಂಭಿಸಲಾಗುತ್ತಿದೆ ಎಂಬ ಮಾಹಿತಿ ಬೆನ್ನಲ್ಲೇ ಸಿಎಂ ಗೃಹ ಕಚೇರಿ ಕೃಷ್ಣಾ ಹಾಗೂ ಯಡಿಯೂರಪ್ಪ ನಿವಾಸದ ರಸ್ತೆಯಲ್ಲೂ ಪವರ್ ಕಟ್ ಆಗಿದೆ. ಸಿಎಂ ನಿವಾಸ ಕುಮಾರ ಕೃಪಾ ರಸ್ತೆಗೂ ಲೋಡ್ ಶೆಡ್ಡಿಂಗ್ನ ಬಿಸಿ ತಟ್ಟಿದಂತಾಗಿದೆ.
ದೇಶದಾದ್ಯಂತ ಹಲವು ಪವರ್ ಸ್ಟೇಷನ್ಗಳಲ್ಲಿ ಕಲ್ಲಿದ್ದಲು ಕೊರತೆ ಎದುರಾಗಿದೆ. ಈ ಹಿನ್ನೆಲೆ ರಾಜ್ಯದ ಎರಡು ಜಿಲ್ಲೆಗಳ ಪವರ್ ಸ್ಟೇಷನ್ಗಳಲ್ಲಿ ಬಹುತೇಕ ವಿದ್ಯುತ್ ಉತ್ಪಾದನೆ ಕಡಿಮೆಯಾಗಿದೆ.
ಮಳೆಯ ಕಾರಣದಿಂದ ಕಲ್ಲಿದ್ದಲು ಪೂರೈಕೆಯಲ್ಲಿ ವ್ಯತ್ಯಯವಾಗಿದೆ ಆದರೆ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಲ್ಲಿದ್ದಲಿನ ಬೆಲೆ ಏರಿಕೆಯಾಗಿ, ಆಮದು ಕಡಿಮೆಯಾಗಿದೆ ಎಂದು ಹೇಳಲಾಗಿದೆ
ಈ ಮಧ್ಯೆ ಸಿಎಂ ದೆಹಲಿಗೆ ತೆರಳಿದಾಗ ಕಲ್ಲಿದ್ದಲು ಸಚಿವರನ್ನು ಭೇಟಿಯಾಗಿ ಅಗತ್ಯ ಕಲ್ಲಿದ್ದಲು ಪೂರೈಕೆ ಮಾಡುವಂತೆ ಮನವಿ ಮಾಡಿ ಬಂದಿದ್ದಾರೆ. ಇನ್ನು ಕೇಂದ್ರ ಸರ್ಕಾರ ಕಲ್ಲಿದ್ದಲು ಪೂರೈಕೆ ಬಗ್ಗೆ ಗಮನಹರಿಸುವುದಾಗಿ ಹೇಳಿದ್ದಾರೆ ಎನ್ನಲಾಗಿದೆ.