ಅಕ್ರಮವಾಗಿ ನಡೆಯುತ್ತಿದ್ದ ಕೋಳಿ ಕಾಳಗದಲ್ಲಿ ಪಾಲ್ಗೊಳ್ಳುತ್ತಿದ್ದ ಹುಂಜವೊಂದು ಕಾಲಿಗೆ ಹಾಕಿದ್ದ ಹರಿತವಾದ ಚಾಕುವಿನಿಂದ ಮಾಲೀಕನ ಕುತ್ತಿಗೆ ಕೊಯ್ದು ಕೊಲೆ ಮಾಡಿದ ಘಟನೆ ತೆಲಂಗಾಣದಲ್ಲಿ ಶನಿವಾರ ನಡೆದಿದೆ.
ಜಗಳಕ್ಕೆ ಸಿದ್ಧವಾಗಿದ್ದ ಕೋಳಿಯ ಕಾಲುಗಳಿಗೆ ಹರಿತವಾದ ಚಾಕು ಕಟ್ಟಲಾಗಿತ್ತು. ಈ ವೇಳೆ ತಪ್ಪಿಸಿಕೊಳ್ಳಲು ಯತ್ನಿಸಿದ ಕೋಳಿಯ ಕಾಲುಗಳಿಗೆ ಹಾಕಿದ್ದ ಚೂಪಾದ ಚಾಕು ಮಾಲೀಕನ ಕುತ್ತಿಗೆ ಕೊಯ್ದಿದೆ.
ತೆಲಂಗಾಣದ ಕರೀಂನಗರ ಜಿಲ್ಲೆಯ ಲೋಥನೂರ್ ನಲ್ಲಿ 16 ಜನರ ಗುಂಪು ಅಕ್ರಮವಾಗಿ ಕೋಳಿ ಜಗಳದ ಜೂಜು ಆಯೋಜಿಸಿದ್ದರು.
ಕಾಳಗ ಮುಗಿದ ಮೇಲೆ ಮಾಲೀಕ ಹುಂಜವನ್ನು ಎತ್ತಿ ಕೊಂಡು ಬುಜದ ಮೇಲೆ ಇಟ್ಟುಕೊಂಡು ಬಿಗಿಯಾಗಿ ಹಿಡಿದುಕೊಂಡಿದ್ದಾನೆ. ಆಗ ಹುಂಜ ಬಿಡಿಸಿಕೊಳ್ಳಲು ಯತ್ನಿಸಿದಾಗ ಮಾಲೀಕನ ಕುತ್ತಿಗೆ ಕೊಯ್ದಿದು ತೀವ್ರ ರಕ್ತ ಸ್ರಾವವಾಗಿದೆ.
ಗಾಯಗೊಂಡ ಮಾಲೀಕನನ್ನು ಕೂಡಲೇ ಆಸ್ಪತ್ರೆಗೆ ಸಾಗಿಸಲಾಯಿತಾದರೂ ತೀವ್ರ ರಕ್ತಸ್ರಾವದಿಂದ ಮಾಲೀಕ ರಸ್ತೆ ಮಧ್ಯದಲ್ಲೇ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಕೋಳಿಯನ್ನು ವಶಕ್ಕೆ ಪಡೆದ ಪೊಲೀಸರು ಕೋಳಿ ಫಾರಂಗೆ ಬಿಟ್ಟಿದ್ದಾರೆ. ಅಕ್ರಮವಾಗಿ ಕೋಳಿ ಜಗಳದ ಜೂಜು ಆಯೋಜಿಸಿದ್ದ ಇತರ 15 ಮಂದಿ ತಲೆಮರೆಸಿಕೊಂಡಿದ್ದಾರೆ, ಅವರ ಪತ್ತೆಗೆ ಕ್ರಮ ಕೈಗೊಳ್ಳಲಾಗಿದೆ.
ಬೆಂಗಳೂರು: ಸಂಚಾರ ನಿಯಮಗಳ ಉಲ್ಲಂಘನೆಗೆ ಸಂಬಂಧಪಟ್ಟಂತೆ ರಾಜ್ಯದಲ್ಲಿ ಬರೋಬ್ಬರಿ 1,700 ಕೋಟಿ ರೂ. ದಂಡ ಬಾಕಿ ಉಳಿದಿದೆ. ದಂಡವನ್ನು ವಸೂಲಿ… Read More
ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರ ನಿವಾಸದಲ್ಲಿದ್ದ ಹೆಚ್.ಡಿ ರೇವಣ್ಣ ರೇವಣ್ಣರನ್ನು ಅರೆಸ್ಟ್ ಮಾಡಲು ಪದ್ಮನಾಭನಗರಕ್ಕೆ ತೆರಳಿದ್ದ SIT ತಂಡ ಮಹಿಳೆ… Read More
ಹುಬ್ಬಳ್ಳಿ : ಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ , : ನಾವು ಯಾರು ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಬೆಂಬಲಿಸಿಲ್ಲ… Read More
ನಿನ್ನೆ ರಾತ್ರಿ 72ರ ವಯಸ್ಸಿನ ಎನ್.ಮುನಿಕೆಂಪಣ್ಣ ಶಕುನಿ (Shakuni) ವೇಷದಲ್ಲಿ ವೇದಿಕೆಗೆ ಬಂದು ಪಾತ್ರ ನಿರ್ವಹಿಸುತ್ತಲೇ ವೇದಿಕೆಯ ಮೇಲೆ ಕುಸಿದು… Read More
ಬಾಗಲಕೋಟೆ : ಡಿಸಿಎಂ ಡಿ.ಕೆ.ಶಿವಕುಮಾರ್ , ಬಿಜೆಪಿ ಮುಖಂಡರು ಪ್ರಜ್ವಲ್ ರೇವಣ್ಣ ಬಗ್ಗೆ ಯಾಕೆ ಮಾತನಾಡುತ್ತಿಲ್ಲ ? ಹೆಣ್ಣುಮಕ್ಕಳಿಗೆ ಸಾಂತ್ವನ… Read More
ಬೆಂಗಳೂರು : ನೆನ್ನೆ ವಿಶೇಷ ತನಿಖಾ ತಂಡ (ಎಸ್ಐಟಿ) , ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರಿಂದ ಲೈಂಗಿಕ ಶೋಷಣೆಗೆ ಒಳಗಾಗಿದ್ದಳು… Read More
This website uses cookies.
Leave a Comment