filmy

ತೆರೆಗೆ ಬರಲಿರುವ ಕಾಫಿ ಡೇ ಸಿದ್ಧಾರ್ಥ್‌ ಬದುಕಿನ ಚಿತ್ರ

ಸಿದ್ಧಾರ್ಥ ಕಾಫಿ ಕಿಂಗ್ ಎಂದೇ ಜನಪ್ರಿಯ. ವಿಶ್ವದಾದ್ಯಂತ ಕೆಫೆ ಕಾಫಿ ಡೇ ಮೂಲಕ ಭಾರತೀಯ ಕಾಫಿ ಕಂಪು ಪಸರಿಸಿದ ಕೀರ್ತಿ ವಿ.ಜಿ. ಸಿದ್ಧಾರ್ಥ ಅವರದ್ದು. ಕಾಫಿ ಡೇ ಸ್ಥಾಪಿಸುವ ಮೂಲಕ ಚಿಕ್ಕಮಗಳೂರು ಜಿಲ್ಲೆಯ ಕಾಫಿ ಘಮವನ್ನು ವಿಶ್ವದ ಹಲವೆಡೆ ಪಸರಿಸಿದ ಕಾಫಿ ದೊರೆ ಸಿದ್ಧಾರ್ಥ. ಈ ಮೂಲಕ ಒಂದು ಉದ್ಯಮವನ್ನೇ ಹುಟ್ಟು ಹಾಕಿ ಅನೇಕ ನಿರುದ್ಯೋಗಿಗಳಿಗೆ ಉದ್ಯೋಗ ಕಲ್ಪಿಸಿದವರು.

1996ರಲ್ಲಿ ಕೆಫೆ ಕಾಫಿ ಡೇ ಪರಿಚಯಿಸಿದ ಸಿದ್ಧಾರ್ಥ್‌ ವಿವಿಧ ರಾಷ್ಟ್ರಗಳಿಗೆ ಕಾಫಿಯ ಪರಿಮಳ ಹಬ್ಬಿಸಿದ್ದರು. ವಿಯೆನ್ನಾ, ಮಲೇಷ್ಯಾ, ಸಿಂಗಪುರ, ಝಕೊಸ್ಲೊವಾಕಿಯ ಸಹಿತ 7 ರಾಷ್ಟ್ರಗಳಲ್ಲಿ 1,800ಕ್ಕೂ ಹೆಚ್ಚು ಕಾಫಿ ಡೇ ಕೆಫೆಗಳಿವೆ.

ಅವರು ಉದ್ಯಮ ಕಟ್ಟಿದ ಪರಿ, ಅವರ ಜೀವನ ಹಲವರಿಗೆ ಇಂದಿಗೂ ಮಾದರಿ.ಅಷ್ಟೆಲ್ಲಾ ಸಾಧನೆ ಮಾಡಿ ಸಾಧಕ ಎನಿಸಿಕೊಂಡ ಸಿದ್ಧಾರ್ಥ ದುರಾದೃಷ್ಟವಶಾತ್ ನಮ್ಮೊಂದಿಗೆ ಇಲ್ಲ, ಈ ಕಾರಣಕ್ಕೆ ವಿ ಜಿ ಸಿದ್ಧಾರ್ಥ್ ಅವರ ಕಥೆ ಸಿನಿಮಾ ರೂಪದಲ್ಲಿ ತೆರೆಯ ಮೇಲೆ ಬರಲಿದೆ. ವಿ.ಜಿ.ಸಿದ್ಧಾರ್ಥ ಜೀವನವನ್ನ ಸಿನಿಮಾ ಮಾಡಲು ಟೀ ಸೀರೀಸ್ ಸಂಸ್ಥೆ ಮುಂದಾಗಿದೆ. ಇದನ್ನು ಓದಿ – ಸೇನೆಗೆ ಪುಂಡರ ಅಗತ್ಯವಿಲ್ಲ, ರೈಲು ಸುಡುವವರು ಸೇನೆಗೆ ಸೂಕ್ತರಲ್ಲ: ಮಾಜಿ ಜನರಲ್ ವಿಪಿ ಮಲೀಕ್

ತನಿಖಾ ಪತ್ರಕರ್ತರಾದ ರುಕ್ಮಿಣಿ ರಾವ್‌ ಮತ್ತು ಪ್ರೋಸೆನ್‌ಜಿತ್‌ ದತ್ತಾ ಅವರು ಬರೆದ ‘ಕಾಫಿ ಕಿಂಗ್‌- ದಿ ಸ್ವಿಫ್ಟ್‌ ರೈಸ್‌ ಆಯಂಡ್‌ ಸಡನ್‌ ಡೆತ್‌ ಆಫ್‌ ಕೆಫೆ ಕಾಫಿ ಡೇ ಫೌಂಡರ್‌ ವಿ.ಜಿ. ಸಿದ್ಧಾರ್ಥ್‌’ ಕೃತಿ ಆಧರಿಸಿ ಈ ಚಿತ್ರ ತೆರೆಗೆ ಬರಲಿದೆ. ಕೃತಿಯ ಆಡಿಯೋ ಹಕ್ಕುಗಳನ್ನು ಚಿತ್ರ ನಿರ್ಮಾಣ ಸಂಸ್ಥೆಗಳು ಈಗಾಗಲೇ ಪಡೆದಿವೆ.

ಸಿದ್ಧಾರ್ಥ ಜೀವನ, ಉದ್ಯಮಿಯಾಗಿ ಅವರು ಬೆಳೆದ ರೀತಿ, ಉದ್ಯಮದಲ್ಲಿ ಅವರಿಗಾದ ನಷ್ಟ, ಆರ್ಥಿಕ ಬಿಕ್ಕಟ್ಟು, ಕೊನೆಗೆ ಅವರ ಸಾವಿನ ಕಾರಣಗಳನ್ನು ಬಿಚ್ಚಿಡಲಿದೆ. ಇದೇ ಅಂಶಗಳನ್ನು ಮುಖ್ಯವಾಗಿ ಇಟ್ಟುಕೊಂಡು ಸಿನಿಮಾ ಮಾಡಲಾಗುತ್ತದೆ. ಮುಖ್ಯವಾಗಿ ಅವರ ನಷ್ಟ ಮತ್ತು ಸಾವಿನ ವಿಷಯ ಸಿನಿಮಾದಲ್ಲಿ ಹೈಲೈಟ್‌ ಆಗಿರಲಿದೆ. ಇದನ್ನು ಓದಿ – ಸ್ಯಾಂಡಲ್​ವುಡ್ ನಟಿಗೆ ವಿಲನ್ ಆದ ವೈದ್ಯೆ- ಗೊಂಬೆಯಂತಿದ್ದ ಮುಖ ಗೂಬೆಯಂತೆ ಮಾಡಿದಳು ವೈದ್ಯೆ !

ಸಿದ್ಧಾರ್ಥ ಒಬ್ಬ ಯಶಸ್ವಿ ಉದ್ಯಮಿ ಆಗಿದ್ದರು. ಕಾಫಿ ಡೇ ಎನ್ನುವ ಸಾಮ್ರಾಜ್ಯ ಕಟ್ಟಿಕೊಂಡು ಕಿಂಗ್ ಆಗಿದ್ದರು. ಅನೇಕರಿಗೆ ಉದ್ಯಮ ನೀಡುವ ಮೂಲಕ ಆಸರೆಯಾಗಿದ್ದರು. ಆದರೂ ಅವರ ಬದುಕು ದುರಂತ ಅಂತ್ಯ ಕಂಡಿದೆ.

ಉದ್ಯಮದಲ್ಲಿ ಸಿದ್ಧಾರ್ಥ ನಷ್ಟ ಅನುಭವಿಸಿದ್ದು ,2019ರ ಜುಲೈ 29ರಂದು ಸಿದ್ಧಾರ್ಥ್‌ ಅವರು ಮಂಗಳೂರು ಸಮೀಪ ನೇತ್ರಾವತಿ ನದಿಗೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದರು. ಹಾಗಾಗಿ ಸಿನಿಮಾದಲ್ಲಿ ಅವರ ಬದುಕಿನ ಪ್ರಮುಖ ಘಟ್ಟಗಳು ತೆರೆಮೇಲೆ ಮೂಡಲಿವೆ.

Team Newsnap
Leave a Comment
Share
Published by
Team Newsnap

Recent Posts

ಸಂಚಾರ ನಿಯಮಗಳ ಉಲ್ಲಂಘನೆ: ರಾಜ್ಯದಲ್ಲಿ 1,700 ಕೋಟಿ ರೂ. ದಂಡ ಬಾಕಿ

ಬೆಂಗಳೂರು: ಸಂಚಾರ ನಿಯಮಗಳ ಉಲ್ಲಂಘನೆಗೆ ಸಂಬಂಧಪಟ್ಟಂತೆ ರಾಜ್ಯದಲ್ಲಿ ಬರೋಬ್ಬರಿ 1,700 ಕೋಟಿ ರೂ. ದಂಡ ಬಾಕಿ ಉಳಿದಿದೆ. ದಂಡವನ್ನು ವಸೂಲಿ… Read More

May 4, 2024

ಜಾಮೀನು ಅರ್ಜಿ ವಜಾ : ಮಾಜಿ ಸಚಿವ HD ರೇವಣ್ಣ ಬಂಧನ

ಮಾಜಿ ಪ್ರಧಾನಿ ಹೆಚ್​.ಡಿ ದೇವೇಗೌಡರ ನಿವಾಸದಲ್ಲಿದ್ದ ಹೆಚ್​.ಡಿ ರೇವಣ್ಣ ರೇವಣ್ಣರನ್ನು ಅರೆಸ್ಟ್ ಮಾಡಲು ಪದ್ಮನಾಭನಗರಕ್ಕೆ ತೆರಳಿದ್ದ SIT ತಂಡ ಮಹಿಳೆ… Read More

May 4, 2024

ಪ್ರಜ್ವಲ್ ಕೇಸನ್ನು ನಾವು ಯಾರು ಬೆಂಬಲಿಸಿಲ್ಲ, ತಪ್ಪು ಮಾಡಿದವರಿಗೆ ಶಿಕ್ಷೆಯಾಗಲಿ : ಬಿ.ವೈ ವಿಜಯೇಂದ್ರ

ಹುಬ್ಬಳ್ಳಿ : ಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ , : ನಾವು ಯಾರು ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಬೆಂಬಲಿಸಿಲ್ಲ… Read More

May 4, 2024

ಶಕುನಿ ಪಾತ್ರಧಾರಿ ವೇದಿಕೆಯ ಮೇಲೆಯೇ ಕುಸಿದು ಬಿದ್ದು ಸಾವು

ನಿನ್ನೆ ರಾತ್ರಿ 72ರ ವಯಸ್ಸಿನ ಎನ್.ಮುನಿಕೆಂಪಣ್ಣ ಶಕುನಿ (Shakuni) ವೇಷದಲ್ಲಿ ವೇದಿಕೆಗೆ ಬಂದು ಪಾತ್ರ ನಿರ್ವಹಿಸುತ್ತಲೇ ವೇದಿಕೆಯ ಮೇಲೆ ಕುಸಿದು… Read More

May 4, 2024

ಬಿಜೆಪಿಯವರು ಏಕೆ ಪ್ರಜ್ವಲ್ ರೇವಣ್ಣ ಕೇಸ್ ಬಗ್ಗೆ ಮಾತನಾಡುತ್ತಿಲ್ಲ ?ಡಿ.ಕೆ.ಶಿವಕುಮಾರ್

ಬಾಗಲಕೋಟೆ : ಡಿಸಿಎಂ ಡಿ.ಕೆ.ಶಿವಕುಮಾರ್ , ಬಿಜೆಪಿ ಮುಖಂಡರು ಪ್ರಜ್ವಲ್ ರೇವಣ್ಣ ಬಗ್ಗೆ ಯಾಕೆ ಮಾತನಾಡುತ್ತಿಲ್ಲ ? ಹೆಣ್ಣುಮಕ್ಕಳಿಗೆ ಸಾಂತ್ವನ… Read More

May 4, 2024

ರೇವಣ್ಣ ಅಪಹರಣ ಕೇಸ್‌ : ಎಸ್‌ಐಟಿ ವಿಶೇಷ ತಂಡದಿಂದ 40 ಕಡೆ ರೇಡ್‌

ಬೆಂಗಳೂರು : ನೆನ್ನೆ ವಿಶೇಷ ತನಿಖಾ ತಂಡ (ಎಸ್‌ಐಟಿ) , ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರಿಂದ ಲೈಂಗಿಕ ಶೋಷಣೆಗೆ ಒಳಗಾಗಿದ್ದಳು… Read More

May 4, 2024