ಬಂಡೀಪುರದ ಹುಲಿ ಸಂರಕ್ಷಿತ ಅರಣ್ಯದ ಸಫಾರಿ ಸ್ವಾಗತ ಕೇಂದ್ರದ ಬಳಿ ನಿರ್ಮಿಸಲಾಗಿದ್ದ ಸಭಾಂಗಣದಲ್ಲಿ ಕೇರಳದ ಅರಣ್ಯ ಸಚಿವ ಎ.ಕೆ. ಶಶೀಂದ್ರನ್ ಅವರೊಂದಿಗೆ ಕರ್ನಾಟಕ, ಕೇರಳ ಹಾಗೂ ತಮಿಳುನಾಡು ರಾಜ್ಯಗಳ ಅರಣ್ಯ ಇಲಾಖೆಯ ಉನ್ನತಾಧಿಕಾರಿಗಳ ಪ್ರಥಮ ಸಮನ್ವಯ ಸಭೆಯಲ್ಲಿ ಮಾತನಾಡಿದ ಅವರು, ಇದು ಕೇಂದ್ರ ಸರ್ಕಾರದ ಆದೇಶದ ಮೇಲೆ ನಡೆಯುತ್ತಿರುವ ಸಭೆಯಲ್ಲ ಬದಲಾಗಿ, ದಕ್ಷಿಣದ ಮೂರು ರಾಜ್ಯಗಳ ಕಳಕಳಿ ಮತ್ತು ಸ್ವಯಂ ಪ್ರಯತ್ನದ ಫಲವಾದ ಸಭೆಯಾಗಿದೆ ಎಂದು ತಿಳಿಸಿದರು.
ವನ್ಯ ಜೀವಿಗಳು ಸ್ವಚ್ಛಂದವಾಗಿ ಒಂದು ಕಾಡಿನಿಂದ ಮತ್ತೊಂದಕ್ಕೆ ಸಂಚರಿಸುತ್ತವೆ. ಹಲವಾರು ಶತಮಾನಗಳಿಂದ ತಮಿಳುನಾಡು, ಕೇರಳ ಮತ್ತು ಕರ್ನಾಟಕದ ನಡುವೆ ಆನೆಗಳು ಮುಕ್ತವಾಗಿ ಓಡಾಡುತ್ತಿದ್ದು, ಯಾವುದೇ ವನ್ಯ ಜೀವಿಗೆ ರಾಜ್ಯದ ಗಡಿಯ ಮಿತಿ ಇರುವುದಿಲ್ಲ. ಆನೆ ಕಾರಿಡಾರ್ ಇದೆ. ಹುಲಿಗಳು ಕೂಡ ಒಂದು ಕಾಡಿನಿಂದ ಮತ್ತೊಂದಕ್ಕೆ ಹೋಗುತ್ತವೆ. ಈ ವನ್ಯಜೀವಿಗಳಿಂದ ಯಾವುದೇ ರಾಜ್ಯದಲ್ಲಿ ಅಮೂಲ್ಯ ಜೀವ ಅಥವಾ ಬೆಳೆ ಹಾನಿ ತಗ್ಗಿಸುವ ನಿಟ್ಟಿನಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆಯೂ ಚರ್ಚಿಸಲಾಗಿದ್ದು ಶೀಘ್ರದಲ್ಲೇ ಇದಕ್ಕೆ ಒಂದು ಮೂರ್ತ ರೂಪ ನೀಡಲಾಗುವುದು ಎಂದರು.
ದಿವಂಗತ ಪ್ರಧಾನಿ ಇಂದಿರಾಗಾಂಧೀ ಅವರು ಅರಣ್ಯ ಸಂರಕ್ಷಣೆ ಮತ್ತು ವನ್ಯಜೀವಿಗಳ ಸಂರಕ್ಷಣೆಗೆ ಒತ್ತು ನೀಡಿ, ಕಾಯಿದೆಗಳನ್ನು ಜಾರಿಗೆ ತಂದರು. ನಂತರದ ಎಲ್ಲ ಸರ್ಕಾರಗಳೂ ವನ ಮತ್ತು ವನ್ಯಜೀವಿ ಸಂಪತ್ತಿನ ರಕ್ಷಣೆಗೆ ಒತ್ತು ನೀಡಿದ ಫಲವಾಗಿ ಇಂದು ಅರಣ್ಯ ಸಂರಕ್ಷಣೆಯೂ ಆಗಿದೆ, ವನ್ಯಜೀವಿಗಳ ಸಂತತಿಯಲ್ಲೂ ಹೆಚ್ಚಳವಾಗಿದೆ ಎಂದರು.
ಅರಣ್ಯ ಮತ್ತು ವನ್ಯಜೀವಿಗಳ ಸಂರಕ್ಷಣೆಗೆ ದಕ್ಷಿಣದ ಈ ಮೂರೂ ರಾಜ್ಯಗಳಲ್ಲಿರುವ ಉತ್ತಮ ರೂಢಿಗಳನ್ನು ಅಳವಡಿಸಿಕೊಂಡು ಪ್ರಕೃತಿ ಪರಿಸರ ಉಳಿಸಲು ಪರಸ್ಪರ ಸಹಯೋಗ ನೀಡಲು ಇಂದಿನ ಸಭೆಯಲ್ಲಿ ತೀರ್ಮಾನಿಸಲಾಯಿತು ಎಂದರು.
ಅರಣ್ಯ, ವನ್ಯಜೀವಿ ಸಂರಕ್ಷಣಾ ಕಾರ್ಯಕ್ರಮಗಳನ್ನು ಕರ್ನಾಟಕ, ಕೇರಳ ಮತ್ತು ತಮಿಳುನಾಡು ಮೂರೂ ರಾಜ್ಯಗಳು ಉತ್ತಮವಾಗಿ ಮಾಡುತ್ತಿವೆ. ಹೀಗಾಗಿಯೇ ಈ ಮೂರೂ ರಾಜ್ಯಗಳಲ್ಲಿ ವನ್ಯ ಜೀವಿಗಳ ಸಂಖ್ಯೆ ಹೆಚ್ಚಳವಾಗಿದೆ. ಈ ಪ್ರಯತ್ನಗಳನ್ನು ಮುಂದುವರಿಸುವುದು ನಿರ್ಣಾಯಕ ಎಂದು ಈಶ್ವರ ಖಂಡ್ರೆ ಒತ್ತಿ ಹೇಳಿದರು.
ವನ್ಯಜೀವಿಗಳ ಮತ್ತು ಜನಸಂಖ್ಯೆಯ ಹೆಚ್ಚಳದಿಂದ ವಸತಿ ಪ್ರದೇಶಗಳು ಅರಣ್ಯದಂಚಿಗೆ ಬರುತ್ತಿರುವ ಕಾರಣ ವನ್ಯಜೀವಿ-ಮಾನವ ಸಂಘರ್ಷ ಪ್ರಕರಣಗಳು ಹೆಚ್ಚಳವಾಗುತ್ತಿವೆ. ಈ ನಿಟ್ಟಿನಲ್ಲಿ ಭೂಮಿಯಲ್ಲಿ ಹುಟ್ಟಿದ ಪ್ರತಿಯೊಂದು ಜೀವಿಗೂ ಬದುಕುವ ಹಕ್ಕಿದೆ. ಹೀಗಾಗಿ ಕಾಡಿನಂಚಿನ ವಸತಿ ಪ್ರದೇಶಗಳ ಜನರು ವನ್ಯಜೀವಿಗಳೊಂದಿಗೆ ಸಹಬಾಳ್ವೆ ನಡೆಸುವುದು ಅತ್ಯಗತ್ಯ ಎಂದು ಪ್ರತಿಪಾದಿಸಿದರು.
ಪ್ರತಿಯೊಂದು ಜೀವವೂ ಅಮೂಲ್ಯವಾಗಿದ್ದು, ಈ ನಿಟ್ಟಿನಲ್ಲಿ ಸಂಘಟಿತ ಪ್ರಯತ್ನಗಳನ್ನು ಮಾಡಬೇಕಾಗಿದೆ. ಕರ್ನಾಟಕದಲ್ಲಿ ಆನೆಗಳು ನಾಡಿಗೆ ಬಾರದಂತೆ ತಡೆಯಲು ಆನೆ ಕಂದಕ ನಿರ್ಮಿಸಲಾಗುತ್ತಿದೆ, ಸೌರ ಬೇಲಿ ಅಳವಡಿಸಲಾಗುತ್ತಿದೆ. ಜೊತೆಗೆ ರೈಲ್ವೆ ಬ್ಯಾರಿಕೇಡ್ ಮಾಡಲಾಗುತ್ತಿದೆ ಎಂದರು.
ಮಾನವ-ಪ್ರಾಣಿ ಸಂಘರ್ಷವನ್ನು ನಿರ್ವಹಿಸಲು ಜಂಟಿ ಪ್ರಮಾಣಿತ ಕಾರ್ಯಾಚರಣಾ ಕಾರ್ಯವಿಧಾನವನ್ನು (ಎಸ್ಒಪಿ) ಅಳವಡಿಸಿಕೊಳ್ಳಲು ಪ್ರಸ್ತಾಪಿಸಿದ ಸಚಿವ ಈಶ್ವರ ಖಂಡ್ರೆ, ವಿವಿಧ ಇಲಾಖೆಗಳ ನಡುವೆ ಸಹಯೋಗ ಈ ನಿಟ್ಟಿನಲ್ಲಿ ಅತ್ಯಗತ್ಯವಾಗಿದೆ ಎಂದರು.
ತಮಿಳುನಾಡಿನ ಅರಣ್ಯ ಇಲಾಖೆಯ ಉನ್ನತಾಧಿಕಾರಿಗಳೂ ಈ ಸಭೆಯಲ್ಲಿ ಭಾಗಿಯಾಗಿದ್ದರು. ಸಭೆಯಲ್ಲಿ ಅರಣ್ಯ ಮತ್ತು ವನ್ಯಜೀವಿ ಸಂರಕ್ಷಣೆಯಲ್ಲಿ ಮೂರೂ ರಾಜ್ಯದಲ್ಲಿ ಅಳವಡಿಸಿಕೊಳ್ಳಲಾಗಿರುವ ಉತ್ತಮ ರೂಢಿಗಳ ಕುರಿತಂತೆ ಚರ್ಚಿಸಿ, ಜ್ಞಾನ ವಿನಿಮಯ ಮಾಡಲಾಯಿತು, ಜೊತೆಗೆ ಹೊಸ ಅನ್ವೇಷಣೆಗಳ ಬಗ್ಗೆಯೂ ಚರ್ಚಿಸಲಾಯಿತು ಎಂದರು.
ವನ್ಯಜೀವಿ -ಮಾನವ ಸಂಘರ್ಷ ಮತ್ತು ಕಳ್ಳಬೇಟೆ ತಡೆ, ಕಾಡ್ಗಿಚ್ಚು ನಿಯಂತ್ರಣಕ್ಕೆ ಅತ್ಯಾಧುನಿಕ ತಂತ್ರಜ್ಞಾನವನ್ನು ಸಮರ್ಥವಾಗಿ ಬಳಸಿಕೊಳ್ಳುವ ಅಗತ್ಯವಿದೆ. ಈ ಬಗ್ಗೆಯೂ ಸಭೆಯಲ್ಲಿ ಸಂಕ್ಷಿಪ್ತವಾಗಿ ಚರ್ಚಿಸಲಾಗಿದ್ದು, ಮುಂದಿನ ದಿನಗಳಲ್ಲಿ ಮೂರೂ ರಾಜ್ಯಗಳ ನಡುವೆ ನಡೆಯುವ ಸಭೆಗಳಲ್ಲಿ ತಂತ್ರಜ್ಞಾನ ಬಳಕೆಗೆ ಒತ್ತು ನೀಡಲಾಗುವುದು. ಜೊತೆಗೆ ಸನ್ನಾ ಮತ್ತು ಲಾಂಟನಾ ಕಳೆಯ ಸಮಸ್ಯೆಯ ನಿವಾರಣೆಗೂ ಸಹಯೋಗ ಅಗತ್ಯವಾಗಿದ್ದು, ತಂತ್ರಜ್ಞಾನ ಅಳವಡಿಕೆ ಮತ್ತು ಕಳೆ ನಾಶಕ್ಕೆ ಒಂದು ಸಲಹಾ ಸಮಿತಿ ರಚಿಸಲು ಪ್ರಸ್ತಾಪಿಸಲಾಗಿದೆ ಎಂದರು.ತಮಿಳುನಾಡಿಗೆ ನೀರು ಬಿಟ್ಟ ಸರ್ಕಾರದ ವಿರುದ್ದ ಪ್ರತಿಭಟಿಸುತ್ತಿದ್ದ ಹೋರಾಟಗಾರರ ಬಂಧನ
ನವದೆಹಲಿ : ಇಂದು ಸಭೆ ನಡೆಸಿದ ಕಾವೇರಿ ನಿರ್ವಹಣಾ ಪ್ರಾಧಿಕಾರ ( CWMA ) ಮೇ ತಿಂಗಳ ಭಾಗವಾಗಿ ತಮಿಳುನಾಡಿಗೆ… Read More
ಬೆಂಗಳೂರು: ಬೆಂಗಳೂರಿನ ಕೆ.ಆರ್.ಪುರಂನ ಅಯ್ಯಪ್ಪ ನಗರದಲ್ಲಿ ನೀರಿನ ಸಂಪ್ ಗೆ ಬಿದ್ದು 5 ವರ್ಷದ ಬಾಲಕ ಸಾವನ್ನಪ್ಪಿರುವ ದಾರುಣ ಘಟನೆ… Read More
ಮೈಸೂರು: “ಸಮಾಜ ಸೇವೆ ಮಾಡಲು ನಾನು ಐ.ಎ.ಎಸ್. ಮತ್ತು ಕೆ.ಎ.ಎಸ್ ಅಧಿಕಾರಿಯಾಗಬೇಕು ಎನ್ನುತ್ತಾರೆ ಹಲವರು. ಆದರೆ ನನ್ನ ಪ್ರಕಾರ ಸಮಾಜ… Read More
ಬೆಂಗಳೂರು: ಇಂದು ಮಧ್ಯಾಹ್ನ 3 ಗಂಟೆಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ , ದ್ವಿತೀಯ ಪಿಯುಸಿ… Read More
ಮೈಸೂರು : ಯುವಕನೊಬ್ಬ ಜಿಲ್ಲೆಯ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಕಲುಷಿತ ನೀರು ಸೇವಿಸಿ ಮೃತಪಟ್ಟಿದ್ದಾನೆ . ಮೂವರ ಸ್ಥಿತಿ ಚಿಂತಾಜನಕವಾಗಿದ್ದು, ಒಟ್ಟು… Read More
ಬೆಂಗಳೂರು : ಬೆಂಗಳೂರಿನ ಹೊರ ವಲಯದ ರೆಸಾರ್ಟ್ ವೊಂದರಲ್ಲಿ ನಡೆದ ರೇವ್ ಪಾರ್ಟಿಗೆ ಸಂಬಂಧಿಸಿದಂತೆ ಐವರನ್ನು ಬಂಧಿಸಲಾಗಿದೆ. ಪಾರ್ಟಿಯಲ್ಲಿ ನಟ,… Read More
This website uses cookies.
Leave a Comment