ಗುರುರಾಯರ ಸನ್ನಿಧಿ ಮಂತ್ರಾಲಯ ಶ್ರೀರಾಘವೇಂದ್ರ ಸ್ವಾಮಿ ಮಠದಲ್ಲಿ ಕಳೆದ ಒಂದು ತಿಂಗಳಿಂದ ಭಕ್ತರಿಂದ ಭಾರೀ ಪ್ರಮಾಣದ ಕಾಣಿಕೆ ಸಂಗ್ರಹವಾಗಿದೆ.
ನವೆಂಬರ್ ಹಾಗೂ ಡಿಸೆಂಬರ್ ತಿಂಗಳ ಕಳೆದ 34 ದಿನಗಳ ಕಾಣಿಕೆ ಹುಂಡಿ ಎಣಿಕೆ ಕಾರ್ಯ ಪೂರ್ಣವಾಗಿದೆ ನಾಣ್ಯ ಹಾಗೂ ನೋಟುಗಳು ಸೇರಿ ಒಟ್ಟು 3 ಕೋಟಿ 30 ಲಕ್ಷದ 20 ಸಾವಿರದ 636 ರೂ. ಕಾಣಿಕೆ ಸಂಗ್ರಹವಾಗಿದೆ. 0.95 ಗ್ರಾಂ ಚಿನ್ನ ಹಾಗೂ 1 ಕೆ.ಜಿ.300 ಗ್ರಾಂ ಬೆಳ್ಳಿ ಕಾಣಿಕೆ ರೂಪದಲ್ಲಿ ಬಂದಿದೆ.
ಕಳೆದ ಅಕ್ಟೋಬರ್ ನವೆಂಬರ್ ತಿಂಗಳುಗಳ 36 ದಿನಗಳಲ್ಲಿ 3 ಕೋಟಿ 20 ಲಕ್ಷ ರೂ. ಸಂಗ್ರಹವಾಗಿತ್ತು. ಸೆಪ್ಟೆಂಬರ್ ಅಕ್ಟೋಬರ್ ತಿಂಗಳ 20 ದಿನಗಳಲ್ಲಿ 1,98,17,614 ರೂ. ಸಂಗ್ರಹವಾಗಿತ್ತು.
ಈ ಬಾರಿ 34 ದಿನಗಳ ಕಾಣಿಕೆ ಎಣಿಕೆ ಇದ್ದಿದ್ದರಿಂದ ಸತತವಾಗಿ 2 ದಿನಗಳ ಕಾಲ ನಾಣ್ಯ ಹಾಗೂ ನೋಟುಗಳ ಎಣಿಕೆ ಕಾರ್ಯ ನಡೆಯಿತು. ಎಣಿಕೆ ಕಾರ್ಯ ಸಂಪೂರ್ಣ ಮುಕ್ತಾಯವಾಗಿರುವ ಕುರಿತು ಗುರು ರಾಘವೇಂದ್ರ ಸ್ವಾಮಿ ಮಠದ ವ್ಯವಸ್ಥಾಪಕ ಶ್ರೀನಿವಾಸ ರಾವ್ ಮಾಹಿತಿ ನೀಡಿದ್ದಾರೆ.
- ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ
- SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ
- ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ
- ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ
- ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ